AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪಡೆದ ಆ ಯುವಕನ ರೀತಿಯೇ ವೈರಲ್​ ಆಯ್ತು ಪ್ರಶಾಂತ್​ ನೀಲ್ ಫೋಟೋ​; ಆದರೆ ಕಾರಣ ಬೇರೆ

ನಿರ್ದೇಶಕ ಪ್ರಶಾಂತ್​ ನೀಲ್​ ಅವರು ವ್ಯಾಕ್ಸಿನ್​ ಪಡೆಯುತ್ತಿರುವ ಫೋಟೋವನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ ಅವರ ಪೋಸ್​ ನೋಡಿ ಎಲ್ಲರೂ ಅಚ್ಚರಿ ಪಟ್ಟಿದ್ದಾರೆ.

ಲಸಿಕೆ ಪಡೆದ ಆ ಯುವಕನ ರೀತಿಯೇ ವೈರಲ್​ ಆಯ್ತು ಪ್ರಶಾಂತ್​ ನೀಲ್ ಫೋಟೋ​; ಆದರೆ ಕಾರಣ ಬೇರೆ
ಕೊರೊನಾ ಲಸಿಕೆ ಪಡೆದ ಪ್ರಶಾಂತ್​ ನೀಲ್​ ಫೋಟೋ ವೈರಲ್​
Follow us
ಮದನ್​ ಕುಮಾರ್​
|

Updated on: Jun 08, 2021 | 5:23 PM

ಭಾರತೀಯ ಚಿತ್ರರಂಗದ ಸೆನ್ಸೇಷನಲ್​ ನಿರ್ದೇಶಕರ ಸಾಲಿನಲ್ಲಿ ಪ್ರಶಾಂತ್​ ನೀಲ್​ ಹೆಸರು ಕೂಡ ಮುಂಚೂಣಿಯಲ್ಲಿ ಕೇಳಿಬರುತ್ತದೆ. ‘ಕೆಜಿಎಫ್​’ ಚಿತ್ರದ ಯಶಸ್ಸಿನ ನಂತರ ಅವರಿಗೆ ದೇಶಾದ್ಯಂತ ಖ್ಯಾತಿ ಹೆಚ್ಚಿದೆ. ಈಗ ಅವರು ಸಿನಿಮಾಗೆ ಸಂಬಂಧವೇ ಇಲ್ಲದ ಒಂದು ವಿಚಾರಕ್ಕೆ ಸುದ್ದಿ ಆಗುತ್ತಿದ್ದಾರೆ. ಕೊರೊನಾ ಲಸಿಕೆ ಪಡೆಯುತ್ತಿರುವ ಪ್ರಶಾಂತ್​ ನೀಲ್​ ಅವರ ಫೋಟೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಪ್ರಶಾಂತ್​ ನೀಲ್​ ಅವರ ಇನ್ನೊಂದು ಮುಖ ಕಂಡ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ದೇಶದೆಲ್ಲೆಡೆ ವ್ಯಾಪಿಸಿರುವ ಕೊರೊನಾ ವೈರಸ್​ ಹಿಮ್ಮೆಟ್ಟಿಸಲು ವ್ಯಾಕ್ಸಿನ್​ ಪಡೆಯುವುದೇ ಸೂಕ್ತ ಅಸ್ತ್ರ. ಹಾಗಾಗಿ ಎಲ್ಲರೂ ಮುಗಿಬಿದ್ದು ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಲಸಿಕೆ ಪಡೆದ ನಂತರ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳುವುದು ಒಂದು ಬಗೆಯ ಟ್ರೆಂಡ್​ ಆಗಿದೆ. ಪ್ರಶಾಂತ್​ ನೀಲ್​ ಕೂಡ ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಫೋಟೋ ಹಂಚಿಕೊಂಡರು. ಆದರೆ ಆ ಫೋಟೋದಲ್ಲಿ ಅವರ ಪೋಸ್​ ನೋಡಿ ಎಲ್ಲರೂ ಅಚ್ಚರಿ ಪಟ್ಟಿದ್ದಾರೆ. ಲಸಿಕೆ ಪಡೆಯುವಾಗ ನರ್ಸ್​ ಮುಖವನ್ನೇ ನೋಡುತ್ತಿದ್ದ ಯುವಕನೊಬ್ಬನ ಫೋಟೋ ಇತ್ತೀಚೆಗೆ ವೈರಲ್​ ಆಗಿತ್ತು. ಅದೇ ರೀತಿ ಈಗ ಪ್ರಶಾಂತ್​ ನೀಲ್​ ಫೋಟೋ ಸಹ ವೈರಲ್​ ಆಗಿದೆ.

ನರ್ಸ್​ ಲಸಿಕೆ ಚುಚ್ಚುತ್ತಿದ್ದರೆ, ಪ್ರಶಾಂತ್​ ನೀಲ್​ ಮುಖ ಮುಚ್ಚಿಕೊಂಡಿದ್ದಾರೆ. ಇಷ್ಟು ಚಿಕ್ಕ ಇಂಜೆಕ್ಷನ್​ಗೆ ಹೆದರಿಕೊಂಡು ಪ್ರಶಾಂತ್​ ನೀಲ್​ ಹೀಗೆ ಮಾಡಿದ್ದಾರಾ ಅಥವಾ ನರ್ಸ್​ ಕಂಡು ಅವರು ನಾಚಿ ನೀರಾಗಿದ್ದಾರಾ? ಇಂಥ ಹಲವು ಪ್ರಶ್ನೆಗಳನ್ನು ನೆಟ್ಟಿಗರು ಕೇಳುತ್ತಿದ್ದಾರೆ. ಫೋಟೋಗೆ ಕಮೆಂಟ್​ ಮಾಡುತ್ತಿರುವ ಜನರು ತಮಾಷೆಗೆ ಪ್ರಶಾಂತ್​ ನೀಲ್​ ಕಾಲೆಳೆಯುತ್ತಿದ್ದಾರೆ.

‘ಕೆಜಿಎಫ್​’ ಸಿನಿಮಾದಲ್ಲಿ ಅಷ್ಟೆಲ್ಲ ಕ್ರೌರ್ಯ ತೋರಿಸುವ ನೀವು ಇಂಜೆಕ್ಷನ್​ಗೆ ಭಯಪಡುತ್ತೀರಲ್ಲ. ಸಿನಿಮಾದಲ್ಲಿ ವಿಲನ್​ಗಳನ್ನು ಚಚ್ಚಿಹಾಕಿದ್ದೇನೆ ಎಂದು ಬೀಗಬೇಡ. ವ್ಯಾಕ್ಸಿನ್​ ಪಡೆಯುವಾಗ ಹೆದರಿಕೊಂಡಿದ್ದನ್ನು ನಾನು ನೋಡಿದ್ದೇನೆ ಎಂಬಿತ್ಯಾದಿ ಕಮೆಂಟ್​ಗಳು ಬರುತ್ತಿವೆ. ಅಲ್ಲದೆ, ಈ ಫೋಟೋ ಇಟ್ಟುಕೊಂಡು ಹಲವು ಮೀಮ್​ಗಳನ್ನು ಮಾಡಲಾಗುತ್ತಿದೆ.

‘ಕೊನೆಗೂ ವಾಕ್ಸಿನ್​ ಪಡೆದುಕೊಂಡೆ. ನೀವು ಇನ್ನೂ ಪಡೆದುಕೊಳ್ಳದೇ ಇದ್ದರೆ ದಯವಿಟ್ಟು ಸ್ಲಾಟ್​ ಬುಕ್​ ಮಾಡಿಕೊಂಡು ಫ್ಯಾಮಿಲಿ ಜೊತೆ ಲಸಿಕೆ ಹಾಕಿಸಿಕೊಳ್ಳಿ’ ಎಂದು ಎಲ್ಲರಲ್ಲೂ ಪ್ರಶಾಂತ್​ ನೀಲ್​ ಮನವಿ ಮಾಡಿದ್ದಾರೆ. ಸದ್ಯ ಅವರು ‘ಕೆಜಿಎಫ್: ಚಾಪ್ಟರ್​​ 2’ ಚಿತ್ರದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಲಾರ್​ ಸಿನಿಮಾದ ಮೇಲೂ ಗಮನ ಹರಿಸಿದ್ದಾರೆ.

ಇದನ್ನೂ ಓದಿ:

ಪ್ರಶಾಂತ್​ ನೀಲ್​ ಜನ್ಮದಿನ; ಪ್ರೀತಿಯಿಂದ ಶುಭಕೋರಿದ ಜ್ಯೂ. ಎನ್​ಟಿಆರ್​ ಕಾಯುತ್ತಿರುವುದು ಆ ಒಂದು ಕ್ಷಣಕ್ಕಾಗಿ

ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ