AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪಡೆದ ಆ ಯುವಕನ ರೀತಿಯೇ ವೈರಲ್​ ಆಯ್ತು ಪ್ರಶಾಂತ್​ ನೀಲ್ ಫೋಟೋ​; ಆದರೆ ಕಾರಣ ಬೇರೆ

ನಿರ್ದೇಶಕ ಪ್ರಶಾಂತ್​ ನೀಲ್​ ಅವರು ವ್ಯಾಕ್ಸಿನ್​ ಪಡೆಯುತ್ತಿರುವ ಫೋಟೋವನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ ಅವರ ಪೋಸ್​ ನೋಡಿ ಎಲ್ಲರೂ ಅಚ್ಚರಿ ಪಟ್ಟಿದ್ದಾರೆ.

ಲಸಿಕೆ ಪಡೆದ ಆ ಯುವಕನ ರೀತಿಯೇ ವೈರಲ್​ ಆಯ್ತು ಪ್ರಶಾಂತ್​ ನೀಲ್ ಫೋಟೋ​; ಆದರೆ ಕಾರಣ ಬೇರೆ
ಕೊರೊನಾ ಲಸಿಕೆ ಪಡೆದ ಪ್ರಶಾಂತ್​ ನೀಲ್​ ಫೋಟೋ ವೈರಲ್​
ಮದನ್​ ಕುಮಾರ್​
|

Updated on: Jun 08, 2021 | 5:23 PM

Share

ಭಾರತೀಯ ಚಿತ್ರರಂಗದ ಸೆನ್ಸೇಷನಲ್​ ನಿರ್ದೇಶಕರ ಸಾಲಿನಲ್ಲಿ ಪ್ರಶಾಂತ್​ ನೀಲ್​ ಹೆಸರು ಕೂಡ ಮುಂಚೂಣಿಯಲ್ಲಿ ಕೇಳಿಬರುತ್ತದೆ. ‘ಕೆಜಿಎಫ್​’ ಚಿತ್ರದ ಯಶಸ್ಸಿನ ನಂತರ ಅವರಿಗೆ ದೇಶಾದ್ಯಂತ ಖ್ಯಾತಿ ಹೆಚ್ಚಿದೆ. ಈಗ ಅವರು ಸಿನಿಮಾಗೆ ಸಂಬಂಧವೇ ಇಲ್ಲದ ಒಂದು ವಿಚಾರಕ್ಕೆ ಸುದ್ದಿ ಆಗುತ್ತಿದ್ದಾರೆ. ಕೊರೊನಾ ಲಸಿಕೆ ಪಡೆಯುತ್ತಿರುವ ಪ್ರಶಾಂತ್​ ನೀಲ್​ ಅವರ ಫೋಟೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಪ್ರಶಾಂತ್​ ನೀಲ್​ ಅವರ ಇನ್ನೊಂದು ಮುಖ ಕಂಡ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ದೇಶದೆಲ್ಲೆಡೆ ವ್ಯಾಪಿಸಿರುವ ಕೊರೊನಾ ವೈರಸ್​ ಹಿಮ್ಮೆಟ್ಟಿಸಲು ವ್ಯಾಕ್ಸಿನ್​ ಪಡೆಯುವುದೇ ಸೂಕ್ತ ಅಸ್ತ್ರ. ಹಾಗಾಗಿ ಎಲ್ಲರೂ ಮುಗಿಬಿದ್ದು ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಲಸಿಕೆ ಪಡೆದ ನಂತರ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳುವುದು ಒಂದು ಬಗೆಯ ಟ್ರೆಂಡ್​ ಆಗಿದೆ. ಪ್ರಶಾಂತ್​ ನೀಲ್​ ಕೂಡ ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಫೋಟೋ ಹಂಚಿಕೊಂಡರು. ಆದರೆ ಆ ಫೋಟೋದಲ್ಲಿ ಅವರ ಪೋಸ್​ ನೋಡಿ ಎಲ್ಲರೂ ಅಚ್ಚರಿ ಪಟ್ಟಿದ್ದಾರೆ. ಲಸಿಕೆ ಪಡೆಯುವಾಗ ನರ್ಸ್​ ಮುಖವನ್ನೇ ನೋಡುತ್ತಿದ್ದ ಯುವಕನೊಬ್ಬನ ಫೋಟೋ ಇತ್ತೀಚೆಗೆ ವೈರಲ್​ ಆಗಿತ್ತು. ಅದೇ ರೀತಿ ಈಗ ಪ್ರಶಾಂತ್​ ನೀಲ್​ ಫೋಟೋ ಸಹ ವೈರಲ್​ ಆಗಿದೆ.

ನರ್ಸ್​ ಲಸಿಕೆ ಚುಚ್ಚುತ್ತಿದ್ದರೆ, ಪ್ರಶಾಂತ್​ ನೀಲ್​ ಮುಖ ಮುಚ್ಚಿಕೊಂಡಿದ್ದಾರೆ. ಇಷ್ಟು ಚಿಕ್ಕ ಇಂಜೆಕ್ಷನ್​ಗೆ ಹೆದರಿಕೊಂಡು ಪ್ರಶಾಂತ್​ ನೀಲ್​ ಹೀಗೆ ಮಾಡಿದ್ದಾರಾ ಅಥವಾ ನರ್ಸ್​ ಕಂಡು ಅವರು ನಾಚಿ ನೀರಾಗಿದ್ದಾರಾ? ಇಂಥ ಹಲವು ಪ್ರಶ್ನೆಗಳನ್ನು ನೆಟ್ಟಿಗರು ಕೇಳುತ್ತಿದ್ದಾರೆ. ಫೋಟೋಗೆ ಕಮೆಂಟ್​ ಮಾಡುತ್ತಿರುವ ಜನರು ತಮಾಷೆಗೆ ಪ್ರಶಾಂತ್​ ನೀಲ್​ ಕಾಲೆಳೆಯುತ್ತಿದ್ದಾರೆ.

‘ಕೆಜಿಎಫ್​’ ಸಿನಿಮಾದಲ್ಲಿ ಅಷ್ಟೆಲ್ಲ ಕ್ರೌರ್ಯ ತೋರಿಸುವ ನೀವು ಇಂಜೆಕ್ಷನ್​ಗೆ ಭಯಪಡುತ್ತೀರಲ್ಲ. ಸಿನಿಮಾದಲ್ಲಿ ವಿಲನ್​ಗಳನ್ನು ಚಚ್ಚಿಹಾಕಿದ್ದೇನೆ ಎಂದು ಬೀಗಬೇಡ. ವ್ಯಾಕ್ಸಿನ್​ ಪಡೆಯುವಾಗ ಹೆದರಿಕೊಂಡಿದ್ದನ್ನು ನಾನು ನೋಡಿದ್ದೇನೆ ಎಂಬಿತ್ಯಾದಿ ಕಮೆಂಟ್​ಗಳು ಬರುತ್ತಿವೆ. ಅಲ್ಲದೆ, ಈ ಫೋಟೋ ಇಟ್ಟುಕೊಂಡು ಹಲವು ಮೀಮ್​ಗಳನ್ನು ಮಾಡಲಾಗುತ್ತಿದೆ.

‘ಕೊನೆಗೂ ವಾಕ್ಸಿನ್​ ಪಡೆದುಕೊಂಡೆ. ನೀವು ಇನ್ನೂ ಪಡೆದುಕೊಳ್ಳದೇ ಇದ್ದರೆ ದಯವಿಟ್ಟು ಸ್ಲಾಟ್​ ಬುಕ್​ ಮಾಡಿಕೊಂಡು ಫ್ಯಾಮಿಲಿ ಜೊತೆ ಲಸಿಕೆ ಹಾಕಿಸಿಕೊಳ್ಳಿ’ ಎಂದು ಎಲ್ಲರಲ್ಲೂ ಪ್ರಶಾಂತ್​ ನೀಲ್​ ಮನವಿ ಮಾಡಿದ್ದಾರೆ. ಸದ್ಯ ಅವರು ‘ಕೆಜಿಎಫ್: ಚಾಪ್ಟರ್​​ 2’ ಚಿತ್ರದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಲಾರ್​ ಸಿನಿಮಾದ ಮೇಲೂ ಗಮನ ಹರಿಸಿದ್ದಾರೆ.

ಇದನ್ನೂ ಓದಿ:

ಪ್ರಶಾಂತ್​ ನೀಲ್​ ಜನ್ಮದಿನ; ಪ್ರೀತಿಯಿಂದ ಶುಭಕೋರಿದ ಜ್ಯೂ. ಎನ್​ಟಿಆರ್​ ಕಾಯುತ್ತಿರುವುದು ಆ ಒಂದು ಕ್ಷಣಕ್ಕಾಗಿ

ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು