AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್ ಸೆಟ್​​ನಲ್ಲಿ ಹಾಯ್, ಹೆಲೋ ಹೇಳೋಕೆ ಅವಕಾಶವೇ ಇರಲಿಲ್ಲ’; ಕಿಯಾರಾ

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರದಲ್ಲಿದ್ದಾರೆ. ನಿರ್ದೇಶಕಿ ಗೀತು ಮೋಹನ್‌ದಾಸ್ ಹಾಕಿದ್ದ ಖಡಕ್ ನಿಯಮಗಳು ಹಾಗೂ ಕನ್ನಡದಲ್ಲಿ ಡೈಲಾಗ್ ಬಾಯಿಪಾಠ ಮಾಡಿದ್ದು ಕಿಯಾರಾಗೆ ದೊಡ್ಡ ಸವಾಲಾಗಿತ್ತು. ಆದರೂ, ಕಿಯಾರಾ ಕನ್ನಡ ಚಿತ್ರರಂಗದ ಕೆಲಸದ ಶೈಲಿಯನ್ನು ಹೊಗಳಿದ್ದಾರೆ. 'ಟಾಕ್ಸಿಕ್' ಬಿಡುಗಡೆ ಸದ್ಯಕ್ಕೆ ಮುಂದೂಡಲಾಗಿದೆ.

‘ಟಾಕ್ಸಿಕ್ ಸೆಟ್​​ನಲ್ಲಿ ಹಾಯ್, ಹೆಲೋ ಹೇಳೋಕೆ ಅವಕಾಶವೇ ಇರಲಿಲ್ಲ’; ಕಿಯಾರಾ
ಯಶ್-ಕಿಯಾರಾ
ರಾಜೇಶ್ ದುಗ್ಗುಮನೆ
|

Updated on:May 30, 2026 | 7:05 AM

Share

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಚಿತ್ರದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರೀಕರಣದ ದಿನಗಳ ಬಗ್ಗೆ ಮಾತನಾಡಿರುವ ಕಿಯಾರಾ, ನಿರ್ದೇಶಕಿ ಗೀತು ಮೋಹನ್‌ದಾಸ್ ಸೆಟ್‌ನಲ್ಲಿ ತಮಗೆ ಹಾಕಿದ್ದ ಖಡಕ್ ರೂಲ್ಸ್ ಹಾಗೂ ಕನ್ನಡದಲ್ಲಿ ನಟಿಸುವಾಗ ಎದುರಾದ ಸವಾಲುಗಳನ್ನು ಹಂಚಿಕೊಂಡಿದ್ದಾರೆ.

‘ಹಾಯ್, ಹೆಲೋ’ಗೆ ಇರಲಿಲ್ಲ ಅವಕಾಶ

ಯಾವಾಗಲೂ ಶೂಟಿಂಗ್ ಸೆಟ್‌ಗೆ ಬಂದ ತಕ್ಷಣ ಎಲ್ಲರಿಗೂ ನಗುನಗುತ್ತಾ ‘ಹಾಯ್, ಗುಡ್ ಮಾರ್ನಿಂಗ್’ ಎಂದು ಮಾತನಾಡಿಸುವುದು ಕಿಯಾರಾ ಅವರ ಅಭ್ಯಾಸವಂತೆ. ಆದರೆ ‘ಟಾಕ್ಸಿಕ್’ ಸೆಟ್‌ನಲ್ಲಿ ಇದಕ್ಕೆ ಬ್ರೇಕ್ ಬಿದ್ದಿತ್ತು. ಈ ಬಗ್ಗೆ ಕಿಯಾರಾ ಮಾಹಿತಿ ನೀಡಿದ್ದಾರೆ.

‘ನಿರ್ದೇಶಕಿ ಗೀತು ಮೋಹನ್‌ದಾಸ್ ಅವರು ನನಗೆ ಮೊದಲೇ ಖಡಕ್ ಆಗಿ ಹೇಳಿದ್ದರು. ನಾಳೆ ನೀನು ಸೆಟ್‌ಗೆ ಬರುವಾಗ ನಿನ್ನ ಪಾತ್ರದ ಮೂಡ್‌ನಲ್ಲೇ ಇರಬೇಕು. ನನಗೆ ಯಾವುದೇ ಔಪಚಾರಿಕ ಮಾತುಕತೆಗಳು ಬೇಡ. ಯಾರಿಗೂ ಹಾಯ್, ಹಲೋ ಎನ್ನಬೇಡ. ನಿನ್ನ ಟೀಮ್ ಜೊತೆಯೂ ಮಾತನಾಡಬೇಡ. ಕೇವಲ ನಿನ್ನ ಕ್ಯಾರೆಕ್ಟರ್ ಜೋನ್‌ನಲ್ಲಿ ಮಾತ್ರ ಇರು ಎಂದು ಸೂಚಿಸಿದ್ದರು. ಪಾತ್ರದ ತೀವ್ರತೆಯನ್ನು ಕಾಯ್ದುಕೊಳ್ಳಲು ಗೀತು ಈ ರೀತಿ ಮಾಡುತ್ತಿದ್ದರು’ ಎಂದು ಕಿಯಾರಾ ನೆನಪಿಸಿಕೊಂಡಿದ್ದಾರೆ.

‘ಟಾಕ್ಸಿಕ್’ ಚಿತ್ರವನ್ನು ಏಕಕಾಲದಲ್ಲಿ ಇಂಗ್ಲಿಷ್ ಹಾಗೂ ಕನ್ನಡ ಎರಡೂ ಭಾಷೆಗಳಲ್ಲಿ ಚಿತ್ರೀಕರಿಸಲಾಗುತ್ತಿದೆ. ಇದು ತಮಗೆ ದೊಡ್ಡ ಸವಾಲಾಗಿತ್ತು ಎಂದು ಕಿಯಾರಾ ಒಪ್ಪಿಕೊಂಡಿದ್ದಾರೆ. ಮೊದಲಿಗೆ ಇಂಗ್ಲಿಷ್‌ನಲ್ಲಿ ದೃಶ್ಯದ ಶೂಟಿಂಗ್ ನಡೆಯುತ್ತಿತ್ತು. ಅದು ಓಕೆ ಆದ ಬಳಿಕ ಅದೇ ದೃಶ್ಯವನ್ನು ಕನ್ನಡದಲ್ಲಿ ಚಿತ್ರೀಕರಿಸಲಾಗುತ್ತಿತ್ತು. ಕನ್ನಡ ಭಾಷೆ ಬಾರದ ಕಾರಣ, ಕಿಯಾರಾ ಅವರು ಪ್ರತಿ ದಿನ ಶೂಟಿಂಗ್‌ಗೂ ಮುನ್ನ ಹಿಂದಿನ ರಾತ್ರಿಯೇ ಕುಳಿತು ಡೈಲಾಗ್‌ಗಳನ್ನು ಬಾಯಿಪಾಠ ಮಾಡುತ್ತಿದ್ದರಂತೆ.

ಇದನ್ನೂ ಓದಿ: ‘‘ಟಾಕ್ಸಿಕ್’ ಪ್ರೇಮಕತೆ ಸಂಪೂರ್ಣ ಭಿನ್ನ’: ಕತೆಯ ಬಗ್ಗೆ ನಾಯಕಿ ಕಿಯಾರಾ ಮಾತು 

ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ ಅನುಭವದ ಬಗ್ಗೆ ಮಾತನಾಡಿದ ಅವರು, ‘ಸಣ್ಣಪುಟ್ಟ ಸಾಂಸ್ಕೃತಿಕ ವ್ಯತ್ಯಾಸಗಳಿರಬಹುದು. ಆದರೆ ಅಂತಿಮವಾಗಿ ನಾವೆಲ್ಲರೂ ಭಾರತೀಯರು. ಹಾಗಾಗಿ ಇಲ್ಲಿನ ಕೆಲಸದ ಶೈಲಿ ನನಗೆ ಹೊಸದೇನೂ ಅನಿಸಲಿಲ್ಲ. ಬಾಲಿವುಡ್ ಹಾಗೂ ತೆಲುಗು ಚಿತ್ರರಂಗದಲ್ಲಿ ಕೆಲಸ ಮಾಡಿದಂತೆಯೇ ಇಲ್ಲೂ ಕೂಡ ಒಳ್ಳೆಯ ಅನುಭವ ಸಿಕ್ಕಿದೆ. ಇಲ್ಲಿನ ಸ್ಟಾರ್‌ಡಮ್ ಹಾಗೂ ಮೇಕಿಂಗ್ ಶೈಲಿ ಅದ್ಭುತವಾಗಿದೆ’ ಎಂದು ಹೊಗಳಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಯಶ್, ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ಜೂನ್ 4ರಂದು ತೆರೆಕಾಣಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯಕ್ಕೆ ಮುಂದೂಡಲಾಗಿದ್ದು, ಹೊಸ ದಿನಾಂಕದ ಅಧಿಕೃತ ಪ್ರಕಟಣೆ ಬಾಕಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Sat, 30 May 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!