AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಶೂಟಿಂಗ್ ವೇಳೆ ವ್ಯಾನ್ ಅಲ್ಲಿ ಕುಳಿತು ಹೊಟ್ಟೆಯಲ್ಲಿರೋ ಮಗು ಜೊತೆ ಮಾತನಾಡುತ್ತಿದ್ದ ಕಿಯಾರಾ

Kiara Advani: ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ತಾಯ್ತನದ ನಂತರದ ಸವಾಲುಗಳು, ದೈಹಿಕ-ಮಾನಸಿಕ ಬದಲಾವಣೆಗಳ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. 7 ತಿಂಗಳ ಗರ್ಭಿಣಿಯಾಗಿದ್ದಾಗಲೂ ಯಶ್ ಅವರ 'ಟಾಕ್ಸಿಕ್' ಚಿತ್ರೀಕರಣದಲ್ಲಿ ಭಾಗವಹಿಸಿದ್ದು, ಮಗುವಿನೊಂದಿಗೆ ಮಾತನಾಡಿದ್ದನ್ನು ನೆನೆದಿದ್ದಾರೆ. ಪತಿ ಸಿದ್ಧಾರ್ಥ್ ಬೆಂಬಲದ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

‘ಟಾಕ್ಸಿಕ್’ ಶೂಟಿಂಗ್ ವೇಳೆ ವ್ಯಾನ್ ಅಲ್ಲಿ ಕುಳಿತು ಹೊಟ್ಟೆಯಲ್ಲಿರೋ ಮಗು ಜೊತೆ ಮಾತನಾಡುತ್ತಿದ್ದ ಕಿಯಾರಾ
ಕಿಯಾರಾ-ಯಶ್
ರಾಜೇಶ್ ದುಗ್ಗುಮನೆ
|

Updated on:May 11, 2026 | 8:49 AM

Share

ಬಾಲಿವುಡ್ ಸುಂದರಿ ಕಿಯಾರಾ ಅಡ್ವಾಣಿ ಈಗ ಕೇವಲ ನಟಿಯಲ್ಲ, ಅವರು ತಾಯಿ ಕೂಡ ಹೌದು. ಕಳೆದ ವರ್ಷ ಜುಲೈನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಕಿಯಾರಾ ಬಣ್ಣದ ಲೋಕದಿಂದ ತುಸು ದೂರವಿದ್ದರು. ಇದೀಗ ತಾಯ್ತನದ ನಂತರದ ತಮ್ಮ ದೈಹಿಕ ಮತ್ತು ಮಾನಸಿಕ ಬದಲಾವಣೆಗಳ ಬಗ್ಗೆ ಮುಕ್ತವಾಗಿ ಮಾತನಾಡಿರುವ ಅವರು, ಆ ನೋವು ಮತ್ತು ಸವಾಲುಗಳನ್ನು ನೆನೆದು ಸಂದರ್ಶನದ ವೇಳೆ ಕಣ್ಣೀರಿಟ್ಟಿದ್ದಾರೆ.

1. ಟಾಕ್ಸಿಕ್ ಶೂಟಿಂಗ್​​ನಲ್ಲಿ ಭಾಗಿ ಆಗಿದ್ದ ಕಿಯಾರಾ

2. ಪ್ರೆಗ್ನೆಂಟ್ ಆಗಿಯೇ ಶೂಟ್ ಮಾಡಿದ್ದ ಕಿಯಾರಾ

3. ಆ ದಿನಗಳನ್ನು ನೆನೆದ ನಟಿ 

ರಾಜ್ ಶಮಾನಿ ಅವರೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಕಿಯಾರಾ, ‘ತಾಯಿ ಆಗುವ ಮೊದಲು ಮತ್ತು ನಂತರದ ಬದುಕಿನಲ್ಲಿ ನಾನು ಸಂಪೂರ್ಣವಾಗಿ ಬೇರೆಯೇ ವ್ಯಕ್ತಿಯಾಗಿದ್ದೇನೆ. ಇದೊಂದು ದೊಡ್ಡ ಅಸ್ಮಿತತೆಯ ಬದಲಾವಣೆ. ಆರಂಭದಲ್ಲಿ ಈ ಬದಲಾವಣೆಯನ್ನು ಒಪ್ಪಿಕೊಳ್ಳುವುದು ನನಗೆ ಕಷ್ಟವಾಗಿತ್ತು’ ಎಂದು ಭಾವುಕರಾದರು. ಮಗು ಜನಿಸಿದ ನಂತರದ ಆರು ತಿಂಗಳು ತಮಗೆ ತಾವೇ ಸಮಯ ನೀಡಲು ಸಾಧ್ಯವಾಗದೆ ಅನುಭವಿಸಿದ ಮಾನಸಿಕ ತುಮುಲಗಳನ್ನು ಅವರು ಈ ವೇಳೆ ಬಿಚ್ಚಿಟ್ಟರು.

ಕಿಯಾರಾ ಅವರು ಗರ್ಭಿಣಿಯಾಗಿದ್ದ ಸಂದರ್ಭದಲ್ಲೇ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು ಎನ್ನುವುದು ವಿಶೇಷ. ಸುಮಾರು ಏಳು ತಿಂಗಳ ಗರ್ಭಿಣಿಯಾಗಿದ್ದಾಗಲೂ ಅವರು ಕಠಿಣ ಸಾಹಸ ದೃಶ್ಯಗಳಲ್ಲಿ ಭಾಗವಹಿಸಿದ್ದರು. ಈ ವಿಷಯ ಕೇವಲ ನಿರ್ದೇಶಕ ಮತ್ತು ನಿರ್ಮಾಪಕರಿಗೆ ಮಾತ್ರ ತಿಳಿದಿತ್ತು. ‘ಶೂಟಿಂಗ್ ವೇಳೆ ವ್ಯಾನ್ ಒಳಗೆ ಹೋಗಿ ಹೊಟ್ಟೆಯಲ್ಲಿದ್ದ ಮಗುವಿನ ಜೊತೆ ಮಾತನಾಡುತ್ತಿದ್ದೆ. ಅಮ್ಮ ಕೇವಲ ನಟನೆ ಮಾಡುತ್ತಿದ್ದಾಳೆ ಮಗು, ಇದು ನಿಜವಲ್ಲ ಎಂದು ಮಗುವನ್ನು ಸಮಾಧಾನಪಡಿಸುತ್ತಿದ್ದೆ’ ಎಂದು ಆ ದಿನಗಳನ್ನು ನೆನೆದರು.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾದ ಬೋಲ್ಡ್ ದೃಶ್ಯಕ್ಕೆ ಕಿಯಾರಾ ಕಿರಿಕ್ ಇಲ್ಲ: ವದಂತಿಗಳಿಗೆ ತೆರೆ ಎಳೆದ ನಟಿ

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಕಿಯಾರಾ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಜೊತೆಗಿನ ಆಪ್ತ ದೃಶ್ಯಗಳನ್ನು ಕತ್ತರಿಸುವಂತೆ ಕೇಳಿಕೊಂಡಿದ್ದಾರೆ ಎಂಬ ವದಂತಿ ಹಬ್ಬಿತ್ತು. ಇದರ ಬಗ್ಗೆ ಮಾತನಾಡಿದ ಅವರು, ‘ಇವೆಲ್ಲವೂ ಕೇವಲ ಅಸಂಬದ್ಧ ಮಾತುಗಳು’ ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ತಮ್ಮ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಅವರ ಬಗ್ಗೆ ಹೆಮ್ಮೆಯಿಂದ ಮಾತನಾಡಿದ ಕಿಯಾರಾ, ‘ಅವರು ಓರ್ವ ಜವಾಬ್ದಾರಿಯುತ ತಂದೆ. ಮಗುವಿನ ವಿಷಯದಲ್ಲಿ ನನಗೆ ಬೆನ್ನೆಲುಬಾಗಿ ನಿಂತಿದ್ದಾರೆ’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:48 am, Mon, 11 May 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​