AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನಲ್ಲಿ ಮನೆ ಖರೀದಿಸಿದ ಕಿಚ್ಚ ಸುದೀಪ್​; ಇದರ ಬೆಲೆ ಎಷ್ಟು ಗೊತ್ತಾ?

ಸಾಕಷ್ಟು ಸಿನಿಮಾ ಹಾಗೂ ಜಾಹೀರಾತಿನ ಶೂಟಿಂಗ್​ಗೆ ಕಿಚ್ಚ ಹೈದರಾಬಾದ್​ಗೆ ತೆರಳುತ್ತಿರುತ್ತಾರೆ. ಈ ಕಾರಣಕ್ಕೆ ಅವರು ಹೈದರಾಬಾದ್​ನಲ್ಲಿ ಒಂದು ಮನೆ ಖರೀದಿಸೋ ನಿರ್ಧಾರಕ್ಕೆ ಬಂದಿದ್ದರು.

ಹೈದರಾಬಾದ್​ನಲ್ಲಿ ಮನೆ ಖರೀದಿಸಿದ ಕಿಚ್ಚ ಸುದೀಪ್​; ಇದರ ಬೆಲೆ ಎಷ್ಟು ಗೊತ್ತಾ?
ಅಭಿನಯ ಚಕ್ರವರ್ತಿ ಸುದೀಪ್
Skanda
| Edited By: |

Updated on: Dec 01, 2020 | 4:53 PM

Share

ನಟ ಕಿಚ್ಚ ಸುದೀಪ್​ ಇತ್ತೀಚೆಗಷ್ಟೇ ತೆಲುಗು ಬಿಗ್ ​ಬಾಸ್​​ನಲ್ಲಿ ಕಾಣಿಸಿಕೊಂಡಿದ್ದರು. ತೆಲುಗು ಬಿಗ್ ​ಬಾಸ್​ ವೇದಿಕೆ ಮೇಲೆ ಕನ್ನಡದ ‘ಫ್ಯಾಂಟಮ್’ ಚಿತ್ರದ ಬಗ್ಗೆ ಮಾತನಾಡಿದ್ದ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಸುದೀಪ್ ಬಿಗ್​ ಬಾಸ್​ ಶೋನಲ್ಲಿ ಪಾಲ್ಗೊಳ್ಳಲು​ ಹೈದರಾಬಾದ್​ಗೆ ತೆರಳಿದ್ದರು ಎನ್ನುವ ವಿಚಾರದ ಬೆನ್ನಲ್ಳೇ ಮತ್ತೊಂದು ಸುದ್ದಿ ಹರಿದಾಡಿದೆ. ಅದೇನೆಂದರೆ ಹೈದರಾಬಾದ್​​ನಲ್ಲಿ ಕಿಚ್ಚ ಐಷಾರಾಮಿ ಮನೆ ಖರೀದಿ ಮಾಡಿದ್ದಾರಂತೆ.

ಕಿಚ್ಚ ಸುದೀಪ್​ ಟಾಲಿವುಡ್​ ಪಾಲಿಗೆ ಹೊಸಬರೇನಲ್ಲ. ರಾಜಮೌಳಿ ನಿರ್ದೇಶನದ ‘ಈಗ’ ಸಿನಿಮಾದಲ್ಲಿ ನಟಿಸಿ ತೆಲುಗಿ ಮಂದಿಗೆ ಪರಿಚಯಗೊಂಡಿದ್ದರು. ನಂತರ ಅವರು ಬಾಹುಬಲಿ-1 ಸಿನಿಮಾದಲ್ಲೂ ಬಣ್ಣ ಹಚ್ಚಿದ್ದರು. ಸುದೀಪ್​ ನಟನೆಯ ಪೈಲ್ವಾನ್ ಸಿನಿಮಾ ಕೂಡ ತೆಲುಗಿಗೆ ಡಬ್​ ಆಗಿ ತೆರೆಕಂಡಿದೆ. ಇನ್ನು ಸಾಕಷ್ಟು ಸಿನಿಮಾ ಹಾಗೂ ಜಾಹೀರಾತಿನ ಶೂಟಿಂಗ್​ಗೆ ಕಿಚ್ಚ ಹೈದರಾಬಾದ್​ಗೆ ತೆರಳುತ್ತಿರುತ್ತಾರೆ. ಈ ಕಾರಣಕ್ಕೆ ಅವರು ಹೈದರಾಬಾದ್​ನಲ್ಲಿ ಒಂದು ಮನೆ ಖರೀದಿಸುವ ನಿರ್ಧಾರಕ್ಕೆ ಬಂದಿದ್ದರು.

ಅಂತೆಯೇ, ಹೈದರಾಬಾದ್​ನ ಗಚಿಬೌಲಿ ಭಾಗದಲ್ಲಿ ಇತ್ತೀಚೆಗೆ ಸುದೀಪ್​ ಮನೆ ಖರೀದಿ ಮಾಡಿದ್ದಾರೆ. ಈ ಮನೆಯ ಬೆಲೆ ಬರೋಬ್ಬರಿ 5 ಕೋಟಿ ರೂಪಾಯಿ ಎನ್ನಲಾಗಿದೆ! ಈ ಮನೆ ತುಂಬಾನೇ ಐಷಾರಾಮಿ ಆಗಿದ್ದು, ಹೈದರಾಬಾದ್​ಗೆ ಶೂಟಿಂಗ್​ಗೆ ತೆರಳಿದಾಗ ಸುದೀಪ್​ ಇಲ್ಲಿಯೇ ವಾಸ ಮಾಡಲಿದ್ದಾರಂತೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಸುದೀಪ್​ ‘ಕೋಟಿಗೊಬ್ಬ 3’ ಹಾಗೂ ‘ಫ್ಯಾಂಟಮ್’ ಚಿತ್ರಗಳಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಇದರ ಜೊತೆಗೆ ಶೀಘ್ರದಲ್ಲೇ ಪ್ರಸಾರವಾಗಲಿರುವ ಕನ್ನಡದ ಬಿಗ್​ಬಾಸ್​ ನಿರ್ವಹಣೆಯ ಜವಾಬ್ದಾರಿ ಕೂಡ ಸುದೀಪ್​ ಅವರದ್ದೇ.

ಇದನ್ನೂ ಓದಿ: ದೀಪಾವಳಿಗೆ ಕಿಚ್ಚನ ಧಮಾಲ್​: ಹಬ್ಬದಂದು ‘ಪಟಾಕಿ ಪೋರಿ’ ಹಿಂದೆ ಬಿದ್ದ ಸುದೀಪ್​!

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ