AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನಲ್ಲಿ ಮನೆ ಖರೀದಿಸಿದ ಕಿಚ್ಚ ಸುದೀಪ್​; ಇದರ ಬೆಲೆ ಎಷ್ಟು ಗೊತ್ತಾ?

ಸಾಕಷ್ಟು ಸಿನಿಮಾ ಹಾಗೂ ಜಾಹೀರಾತಿನ ಶೂಟಿಂಗ್​ಗೆ ಕಿಚ್ಚ ಹೈದರಾಬಾದ್​ಗೆ ತೆರಳುತ್ತಿರುತ್ತಾರೆ. ಈ ಕಾರಣಕ್ಕೆ ಅವರು ಹೈದರಾಬಾದ್​ನಲ್ಲಿ ಒಂದು ಮನೆ ಖರೀದಿಸೋ ನಿರ್ಧಾರಕ್ಕೆ ಬಂದಿದ್ದರು.

ಹೈದರಾಬಾದ್​ನಲ್ಲಿ ಮನೆ ಖರೀದಿಸಿದ ಕಿಚ್ಚ ಸುದೀಪ್​; ಇದರ ಬೆಲೆ ಎಷ್ಟು ಗೊತ್ತಾ?
ಅಭಿನಯ ಚಕ್ರವರ್ತಿ ಸುದೀಪ್
Skanda
| Edited By: |

Updated on: Dec 01, 2020 | 4:53 PM

Share

ನಟ ಕಿಚ್ಚ ಸುದೀಪ್​ ಇತ್ತೀಚೆಗಷ್ಟೇ ತೆಲುಗು ಬಿಗ್ ​ಬಾಸ್​​ನಲ್ಲಿ ಕಾಣಿಸಿಕೊಂಡಿದ್ದರು. ತೆಲುಗು ಬಿಗ್ ​ಬಾಸ್​ ವೇದಿಕೆ ಮೇಲೆ ಕನ್ನಡದ ‘ಫ್ಯಾಂಟಮ್’ ಚಿತ್ರದ ಬಗ್ಗೆ ಮಾತನಾಡಿದ್ದ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಸುದೀಪ್ ಬಿಗ್​ ಬಾಸ್​ ಶೋನಲ್ಲಿ ಪಾಲ್ಗೊಳ್ಳಲು​ ಹೈದರಾಬಾದ್​ಗೆ ತೆರಳಿದ್ದರು ಎನ್ನುವ ವಿಚಾರದ ಬೆನ್ನಲ್ಳೇ ಮತ್ತೊಂದು ಸುದ್ದಿ ಹರಿದಾಡಿದೆ. ಅದೇನೆಂದರೆ ಹೈದರಾಬಾದ್​​ನಲ್ಲಿ ಕಿಚ್ಚ ಐಷಾರಾಮಿ ಮನೆ ಖರೀದಿ ಮಾಡಿದ್ದಾರಂತೆ.

ಕಿಚ್ಚ ಸುದೀಪ್​ ಟಾಲಿವುಡ್​ ಪಾಲಿಗೆ ಹೊಸಬರೇನಲ್ಲ. ರಾಜಮೌಳಿ ನಿರ್ದೇಶನದ ‘ಈಗ’ ಸಿನಿಮಾದಲ್ಲಿ ನಟಿಸಿ ತೆಲುಗಿ ಮಂದಿಗೆ ಪರಿಚಯಗೊಂಡಿದ್ದರು. ನಂತರ ಅವರು ಬಾಹುಬಲಿ-1 ಸಿನಿಮಾದಲ್ಲೂ ಬಣ್ಣ ಹಚ್ಚಿದ್ದರು. ಸುದೀಪ್​ ನಟನೆಯ ಪೈಲ್ವಾನ್ ಸಿನಿಮಾ ಕೂಡ ತೆಲುಗಿಗೆ ಡಬ್​ ಆಗಿ ತೆರೆಕಂಡಿದೆ. ಇನ್ನು ಸಾಕಷ್ಟು ಸಿನಿಮಾ ಹಾಗೂ ಜಾಹೀರಾತಿನ ಶೂಟಿಂಗ್​ಗೆ ಕಿಚ್ಚ ಹೈದರಾಬಾದ್​ಗೆ ತೆರಳುತ್ತಿರುತ್ತಾರೆ. ಈ ಕಾರಣಕ್ಕೆ ಅವರು ಹೈದರಾಬಾದ್​ನಲ್ಲಿ ಒಂದು ಮನೆ ಖರೀದಿಸುವ ನಿರ್ಧಾರಕ್ಕೆ ಬಂದಿದ್ದರು.

ಅಂತೆಯೇ, ಹೈದರಾಬಾದ್​ನ ಗಚಿಬೌಲಿ ಭಾಗದಲ್ಲಿ ಇತ್ತೀಚೆಗೆ ಸುದೀಪ್​ ಮನೆ ಖರೀದಿ ಮಾಡಿದ್ದಾರೆ. ಈ ಮನೆಯ ಬೆಲೆ ಬರೋಬ್ಬರಿ 5 ಕೋಟಿ ರೂಪಾಯಿ ಎನ್ನಲಾಗಿದೆ! ಈ ಮನೆ ತುಂಬಾನೇ ಐಷಾರಾಮಿ ಆಗಿದ್ದು, ಹೈದರಾಬಾದ್​ಗೆ ಶೂಟಿಂಗ್​ಗೆ ತೆರಳಿದಾಗ ಸುದೀಪ್​ ಇಲ್ಲಿಯೇ ವಾಸ ಮಾಡಲಿದ್ದಾರಂತೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಸುದೀಪ್​ ‘ಕೋಟಿಗೊಬ್ಬ 3’ ಹಾಗೂ ‘ಫ್ಯಾಂಟಮ್’ ಚಿತ್ರಗಳಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಇದರ ಜೊತೆಗೆ ಶೀಘ್ರದಲ್ಲೇ ಪ್ರಸಾರವಾಗಲಿರುವ ಕನ್ನಡದ ಬಿಗ್​ಬಾಸ್​ ನಿರ್ವಹಣೆಯ ಜವಾಬ್ದಾರಿ ಕೂಡ ಸುದೀಪ್​ ಅವರದ್ದೇ.

ಇದನ್ನೂ ಓದಿ: ದೀಪಾವಳಿಗೆ ಕಿಚ್ಚನ ಧಮಾಲ್​: ಹಬ್ಬದಂದು ‘ಪಟಾಕಿ ಪೋರಿ’ ಹಿಂದೆ ಬಿದ್ದ ಸುದೀಪ್​!

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್