AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನಲ್ಲಿ ಮನೆ ಖರೀದಿಸಿದ ಕಿಚ್ಚ ಸುದೀಪ್​; ಇದರ ಬೆಲೆ ಎಷ್ಟು ಗೊತ್ತಾ?

ಸಾಕಷ್ಟು ಸಿನಿಮಾ ಹಾಗೂ ಜಾಹೀರಾತಿನ ಶೂಟಿಂಗ್​ಗೆ ಕಿಚ್ಚ ಹೈದರಾಬಾದ್​ಗೆ ತೆರಳುತ್ತಿರುತ್ತಾರೆ. ಈ ಕಾರಣಕ್ಕೆ ಅವರು ಹೈದರಾಬಾದ್​ನಲ್ಲಿ ಒಂದು ಮನೆ ಖರೀದಿಸೋ ನಿರ್ಧಾರಕ್ಕೆ ಬಂದಿದ್ದರು.

ಹೈದರಾಬಾದ್​ನಲ್ಲಿ ಮನೆ ಖರೀದಿಸಿದ ಕಿಚ್ಚ ಸುದೀಪ್​; ಇದರ ಬೆಲೆ ಎಷ್ಟು ಗೊತ್ತಾ?
ಅಭಿನಯ ಚಕ್ರವರ್ತಿ ಸುದೀಪ್
Skanda
| Edited By: |

Updated on: Dec 01, 2020 | 4:53 PM

Share

ನಟ ಕಿಚ್ಚ ಸುದೀಪ್​ ಇತ್ತೀಚೆಗಷ್ಟೇ ತೆಲುಗು ಬಿಗ್ ​ಬಾಸ್​​ನಲ್ಲಿ ಕಾಣಿಸಿಕೊಂಡಿದ್ದರು. ತೆಲುಗು ಬಿಗ್ ​ಬಾಸ್​ ವೇದಿಕೆ ಮೇಲೆ ಕನ್ನಡದ ‘ಫ್ಯಾಂಟಮ್’ ಚಿತ್ರದ ಬಗ್ಗೆ ಮಾತನಾಡಿದ್ದ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಸುದೀಪ್ ಬಿಗ್​ ಬಾಸ್​ ಶೋನಲ್ಲಿ ಪಾಲ್ಗೊಳ್ಳಲು​ ಹೈದರಾಬಾದ್​ಗೆ ತೆರಳಿದ್ದರು ಎನ್ನುವ ವಿಚಾರದ ಬೆನ್ನಲ್ಳೇ ಮತ್ತೊಂದು ಸುದ್ದಿ ಹರಿದಾಡಿದೆ. ಅದೇನೆಂದರೆ ಹೈದರಾಬಾದ್​​ನಲ್ಲಿ ಕಿಚ್ಚ ಐಷಾರಾಮಿ ಮನೆ ಖರೀದಿ ಮಾಡಿದ್ದಾರಂತೆ.

ಕಿಚ್ಚ ಸುದೀಪ್​ ಟಾಲಿವುಡ್​ ಪಾಲಿಗೆ ಹೊಸಬರೇನಲ್ಲ. ರಾಜಮೌಳಿ ನಿರ್ದೇಶನದ ‘ಈಗ’ ಸಿನಿಮಾದಲ್ಲಿ ನಟಿಸಿ ತೆಲುಗಿ ಮಂದಿಗೆ ಪರಿಚಯಗೊಂಡಿದ್ದರು. ನಂತರ ಅವರು ಬಾಹುಬಲಿ-1 ಸಿನಿಮಾದಲ್ಲೂ ಬಣ್ಣ ಹಚ್ಚಿದ್ದರು. ಸುದೀಪ್​ ನಟನೆಯ ಪೈಲ್ವಾನ್ ಸಿನಿಮಾ ಕೂಡ ತೆಲುಗಿಗೆ ಡಬ್​ ಆಗಿ ತೆರೆಕಂಡಿದೆ. ಇನ್ನು ಸಾಕಷ್ಟು ಸಿನಿಮಾ ಹಾಗೂ ಜಾಹೀರಾತಿನ ಶೂಟಿಂಗ್​ಗೆ ಕಿಚ್ಚ ಹೈದರಾಬಾದ್​ಗೆ ತೆರಳುತ್ತಿರುತ್ತಾರೆ. ಈ ಕಾರಣಕ್ಕೆ ಅವರು ಹೈದರಾಬಾದ್​ನಲ್ಲಿ ಒಂದು ಮನೆ ಖರೀದಿಸುವ ನಿರ್ಧಾರಕ್ಕೆ ಬಂದಿದ್ದರು.

ಅಂತೆಯೇ, ಹೈದರಾಬಾದ್​ನ ಗಚಿಬೌಲಿ ಭಾಗದಲ್ಲಿ ಇತ್ತೀಚೆಗೆ ಸುದೀಪ್​ ಮನೆ ಖರೀದಿ ಮಾಡಿದ್ದಾರೆ. ಈ ಮನೆಯ ಬೆಲೆ ಬರೋಬ್ಬರಿ 5 ಕೋಟಿ ರೂಪಾಯಿ ಎನ್ನಲಾಗಿದೆ! ಈ ಮನೆ ತುಂಬಾನೇ ಐಷಾರಾಮಿ ಆಗಿದ್ದು, ಹೈದರಾಬಾದ್​ಗೆ ಶೂಟಿಂಗ್​ಗೆ ತೆರಳಿದಾಗ ಸುದೀಪ್​ ಇಲ್ಲಿಯೇ ವಾಸ ಮಾಡಲಿದ್ದಾರಂತೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಸುದೀಪ್​ ‘ಕೋಟಿಗೊಬ್ಬ 3’ ಹಾಗೂ ‘ಫ್ಯಾಂಟಮ್’ ಚಿತ್ರಗಳಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಇದರ ಜೊತೆಗೆ ಶೀಘ್ರದಲ್ಲೇ ಪ್ರಸಾರವಾಗಲಿರುವ ಕನ್ನಡದ ಬಿಗ್​ಬಾಸ್​ ನಿರ್ವಹಣೆಯ ಜವಾಬ್ದಾರಿ ಕೂಡ ಸುದೀಪ್​ ಅವರದ್ದೇ.

ಇದನ್ನೂ ಓದಿ: ದೀಪಾವಳಿಗೆ ಕಿಚ್ಚನ ಧಮಾಲ್​: ಹಬ್ಬದಂದು ‘ಪಟಾಕಿ ಪೋರಿ’ ಹಿಂದೆ ಬಿದ್ದ ಸುದೀಪ್​!

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ