AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕಿಚ್ಚ ಸುದೀಪ್ ಆರೋಗ್ಯಕ್ಕಾಗಿ ವಿಡಿಯೋ ಮಾಡಿ ಪ್ರಾರ್ಥಿಸಿದ ಜಪಾನ್​ ಮಹಿಳೆ

ನಟ ಸುದೀಪ್​ ಅವರು ಜಪಾನ್​ನಲ್ಲಿಯೂ ಅಭಿಮಾನಿಗಳನ್ನು ಹೊಂದಿದ್ದಾರೆ. ಅದಕ್ಕೆ ಒಂದು ವಿಡಿಯೋ ಸಾಕ್ಷಿ ಒದಗಿಸುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಆ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.

Kichcha Sudeep: ಕಿಚ್ಚ ಸುದೀಪ್ ಆರೋಗ್ಯಕ್ಕಾಗಿ ವಿಡಿಯೋ ಮಾಡಿ ಪ್ರಾರ್ಥಿಸಿದ ಜಪಾನ್​ ಮಹಿಳೆ
ಜಪಾನ್​ನಲ್ಲಿರುವ ಸುದೀಪ್​ ಅಭಿಮಾನಿ
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Apr 26, 2021 | 5:12 PM

ಕಿಚ್ಚ ಸುದೀಪ್​ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಬರೀ ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶದಲ್ಲಿ ಅವರ ಸಿನಿಮಾಗಳನ್ನು ನೋಡಿ ಸಿನಿಪ್ರಿಯರು ಎಂಜಾಯ್​ ಮಾಡುತ್ತಾರೆ. ಅಷ್ಟೇ ಅಲ್ಲ, ಜಪಾನ್​ನಲ್ಲಿಯೂ ಸುದೀಪ್​ ಅಭಿಮಾನಿಗಳನ್ನು ಹೊಂದಿದ್ದಾರೆ. ಅದಕ್ಕೆ ಒಂದು ವಿಡಿಯೋ ಸಾಕ್ಷಿ ಒದಗಿಸುತ್ತಿದೆ. ಜಪಾನಿನ ಮಹಿಳೆಯೊಬ್ಬರು ಸುದೀಪ್​ಗಾಗಿ ಒಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಅದು ಈಗ ಎಲ್ಲ ಕಡೆ ವೈರಲ್​ ಆಗುತ್ತಿದೆ.

ಕಳೆದ ಕೆಲವು ದಿನಗಳಿಂದ ಕಿಚ್ಚ ಸುದೀಪ್​ ಅವರ ಆರೋಗ್ಯದಲ್ಲಿ ವ್ಯತ್ಯಯ ಆಗಿದೆ. ಶೂಟಿಂಗ್​ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್​ ಹಾಕಿ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಚಿಕಿತ್ಸೆ ಮುಂದುವರಿಯುತ್ತಿದೆ. ಆದರೂ ಅವರು ಪೂರ್ತಿ ಗುಣಮುಖರಾಗಿಲ್ಲ. ಈ ಸಂದರ್ಭದಲ್ಲಿ ಅವರ ಆರೋಗ್ಯಕ್ಕಾಗಿ ಲಕ್ಷಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಅದರಲ್ಲಿ ಜಪಾನಿನ ಮಹಿಳೆ ಕೂಡ ಇದ್ದಾರೆ. ಕಿಚ್ಚ ಬೇಗ ಗುಣಮುಖರಾಗಲಿ ಎಂದು ಆ ಮಹಿಳೆ ಹಾರೈಸಿದ್ದಾರೆ.

‘ನಮಸ್ಕಾರ ಸುದೀಪ್​ ಸರ್​. ಈಗ ಹೇಗಿದ್ದೀರಿ? ನೀವು ಬೇಗ ಗುಣಮುಖರಾಗಿ ಎಂದು ಪ್ರಾರ್ಥನೆ ಮಾಡುತ್ತಿದ್ದೇನೆ. ನನ್ನ ಹೃದಯದಾಳದಿಂದ ಈ ಮಾತು ಹೇಳುತ್ತಿದ್ದೇನೆ. ದಯವಿಟ್ಟು ನಿಮ್ಮ ಕಾಳಜಿ ವಹಿಸಿ. ಜಪಾನ್​ನಿಂದ ನಿಮಗಿದು ಪ್ರೀತಿಯ ಸಂದೇಶ’ ಎಂದು ಆ​ ಮಹಿಳೆ ವಿಡಿಯೋದಲ್ಲಿ ಮಾತನಾಡಿದ್ದಾರೆ. ಇದನ್ನು ಕಿಚ್ಚನ ಅಭಿಮಾನಿಗಳು ತಮ್ಮ ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಅನಾರೋಗ್ಯದ ಕಾರಣದಿಂದ ಸುದೀಪ್​ ಅವರು ಬಿಗ್​ ಬಾಸ್​ ಕಾರ್ಯಕ್ರಮಕ್ಕೂ ಗೈರಾಗಿದ್ದಾರೆ. ಅವರು ಇಲ್ಲದ ಕಾರಣ ವಾರದ ಕಥೆ ಕಿಚ್ಚನ ಜೊತೆ ಮತ್ತು ಸೂಪರ್​ ಸಂಡೇ ವಿತ್​ ಸುದೀಪ ಎಪಿಸೋಡ್​ಗಳನ್ನು ರದ್ದು ಮಾಡಲಾಗಿದೆ. ಸ್ಪರ್ಧಿಗಳಿಗೆ ಎಂದಿನಂತೆ ಟಾಸ್ಕ್​ಗಳನ್ನು ನೀಡುವ ಮೂಲಕ ಶನಿವಾರವನ್ನು ಎಂಗೇಜ್​ ಮಾಡಲಾಗುತ್ತಿದೆ. ಭಾನುವಾರ ಸುದೀಪ್​ ಇಲ್ಲದೆಯೂ ಎಲಿಮಿನೇಷನ್​ ನಡೆದಿದೆ. ಕಳೆದ ಎರಡು ವಾರದ ವೀಕೆಂಡ್​ ಇದೇ ರೀತಿ ಮುಂದುವರಿದುಕೊಂಡು ಬಂದಿದೆ.

ಸುದೀಪ್​ಗೆ ಅನಾರೋಗ್ಯ ಎಂಬ ವಿಷಯ ಗೊತ್ತಾಗುತ್ತಿದ್ದಂತೆಯೇ ಬಿಗ್ ಬಾಸ್​ ಸ್ಪರ್ಧಿಗಳಿಗೆ ತುಂಬ ಬೇಸರವಾಗಿತ್ತು. ಅವರೆಲ್ಲರೂ ಪ್ರೀತಿಯಿಂದ ಸುದೀಪ್​ಗೆ ಪತ್ರ ಬರೆದು, ಅಡುಗೆ ಮಾಡಿ ಕಳಿಸಿದ್ದರು. ಅದಕ್ಕೆ ​ಪ್ರತಿಕ್ರಿಯಿಸಿದ ಸುದೀಪ್​ ಅವರು ಆದಷ್ಟು ಬೇಗ ಗುಣಮುಖವಾಗಿ ಬರುತ್ತೇನೆ ಎಂದು ಭರವಸೆ ನೀಡಿದ್ದರು. ಮುಂದಿನ ವಾರವಾದರೂ ವೀಕೆಂಡ್​ ಎಪಿಸೋಡ್​ಗಳನ್ನು ಕಿಚ್ಚ ನಡೆಸಿಕೊಡಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೆ, ಅನೇಕ ಸೆಲೆಬ್ರಿಟಿಗಳು ಕೂಡ ಸುದೀಪ್​ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: Kichcha Sudeep: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಮನೆಯಲ್ಲಿ ಕೊನೆಗೂ ಕೇಳ್ತು ಸುದೀಪ್​ ಧ್ವನಿ!

Kichcha Sudeep: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಮನೆಯಲ್ಲಿ ಕೊನೆಗೂ ಕೇಳ್ತು ಸುದೀಪ್​ ಧ್ವನಿ!

ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್