AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕಿಚ್ಚ ಸುದೀಪ್ ಆರೋಗ್ಯಕ್ಕಾಗಿ ವಿಡಿಯೋ ಮಾಡಿ ಪ್ರಾರ್ಥಿಸಿದ ಜಪಾನ್​ ಮಹಿಳೆ

ನಟ ಸುದೀಪ್​ ಅವರು ಜಪಾನ್​ನಲ್ಲಿಯೂ ಅಭಿಮಾನಿಗಳನ್ನು ಹೊಂದಿದ್ದಾರೆ. ಅದಕ್ಕೆ ಒಂದು ವಿಡಿಯೋ ಸಾಕ್ಷಿ ಒದಗಿಸುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಆ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.

Kichcha Sudeep: ಕಿಚ್ಚ ಸುದೀಪ್ ಆರೋಗ್ಯಕ್ಕಾಗಿ ವಿಡಿಯೋ ಮಾಡಿ ಪ್ರಾರ್ಥಿಸಿದ ಜಪಾನ್​ ಮಹಿಳೆ
ಜಪಾನ್​ನಲ್ಲಿರುವ ಸುದೀಪ್​ ಅಭಿಮಾನಿ
ಮದನ್​ ಕುಮಾರ್​
| Edited By: |

Updated on: Apr 26, 2021 | 5:12 PM

Share

ಕಿಚ್ಚ ಸುದೀಪ್​ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಬರೀ ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶದಲ್ಲಿ ಅವರ ಸಿನಿಮಾಗಳನ್ನು ನೋಡಿ ಸಿನಿಪ್ರಿಯರು ಎಂಜಾಯ್​ ಮಾಡುತ್ತಾರೆ. ಅಷ್ಟೇ ಅಲ್ಲ, ಜಪಾನ್​ನಲ್ಲಿಯೂ ಸುದೀಪ್​ ಅಭಿಮಾನಿಗಳನ್ನು ಹೊಂದಿದ್ದಾರೆ. ಅದಕ್ಕೆ ಒಂದು ವಿಡಿಯೋ ಸಾಕ್ಷಿ ಒದಗಿಸುತ್ತಿದೆ. ಜಪಾನಿನ ಮಹಿಳೆಯೊಬ್ಬರು ಸುದೀಪ್​ಗಾಗಿ ಒಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಅದು ಈಗ ಎಲ್ಲ ಕಡೆ ವೈರಲ್​ ಆಗುತ್ತಿದೆ.

ಕಳೆದ ಕೆಲವು ದಿನಗಳಿಂದ ಕಿಚ್ಚ ಸುದೀಪ್​ ಅವರ ಆರೋಗ್ಯದಲ್ಲಿ ವ್ಯತ್ಯಯ ಆಗಿದೆ. ಶೂಟಿಂಗ್​ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್​ ಹಾಕಿ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಚಿಕಿತ್ಸೆ ಮುಂದುವರಿಯುತ್ತಿದೆ. ಆದರೂ ಅವರು ಪೂರ್ತಿ ಗುಣಮುಖರಾಗಿಲ್ಲ. ಈ ಸಂದರ್ಭದಲ್ಲಿ ಅವರ ಆರೋಗ್ಯಕ್ಕಾಗಿ ಲಕ್ಷಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಅದರಲ್ಲಿ ಜಪಾನಿನ ಮಹಿಳೆ ಕೂಡ ಇದ್ದಾರೆ. ಕಿಚ್ಚ ಬೇಗ ಗುಣಮುಖರಾಗಲಿ ಎಂದು ಆ ಮಹಿಳೆ ಹಾರೈಸಿದ್ದಾರೆ.

‘ನಮಸ್ಕಾರ ಸುದೀಪ್​ ಸರ್​. ಈಗ ಹೇಗಿದ್ದೀರಿ? ನೀವು ಬೇಗ ಗುಣಮುಖರಾಗಿ ಎಂದು ಪ್ರಾರ್ಥನೆ ಮಾಡುತ್ತಿದ್ದೇನೆ. ನನ್ನ ಹೃದಯದಾಳದಿಂದ ಈ ಮಾತು ಹೇಳುತ್ತಿದ್ದೇನೆ. ದಯವಿಟ್ಟು ನಿಮ್ಮ ಕಾಳಜಿ ವಹಿಸಿ. ಜಪಾನ್​ನಿಂದ ನಿಮಗಿದು ಪ್ರೀತಿಯ ಸಂದೇಶ’ ಎಂದು ಆ​ ಮಹಿಳೆ ವಿಡಿಯೋದಲ್ಲಿ ಮಾತನಾಡಿದ್ದಾರೆ. ಇದನ್ನು ಕಿಚ್ಚನ ಅಭಿಮಾನಿಗಳು ತಮ್ಮ ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಅನಾರೋಗ್ಯದ ಕಾರಣದಿಂದ ಸುದೀಪ್​ ಅವರು ಬಿಗ್​ ಬಾಸ್​ ಕಾರ್ಯಕ್ರಮಕ್ಕೂ ಗೈರಾಗಿದ್ದಾರೆ. ಅವರು ಇಲ್ಲದ ಕಾರಣ ವಾರದ ಕಥೆ ಕಿಚ್ಚನ ಜೊತೆ ಮತ್ತು ಸೂಪರ್​ ಸಂಡೇ ವಿತ್​ ಸುದೀಪ ಎಪಿಸೋಡ್​ಗಳನ್ನು ರದ್ದು ಮಾಡಲಾಗಿದೆ. ಸ್ಪರ್ಧಿಗಳಿಗೆ ಎಂದಿನಂತೆ ಟಾಸ್ಕ್​ಗಳನ್ನು ನೀಡುವ ಮೂಲಕ ಶನಿವಾರವನ್ನು ಎಂಗೇಜ್​ ಮಾಡಲಾಗುತ್ತಿದೆ. ಭಾನುವಾರ ಸುದೀಪ್​ ಇಲ್ಲದೆಯೂ ಎಲಿಮಿನೇಷನ್​ ನಡೆದಿದೆ. ಕಳೆದ ಎರಡು ವಾರದ ವೀಕೆಂಡ್​ ಇದೇ ರೀತಿ ಮುಂದುವರಿದುಕೊಂಡು ಬಂದಿದೆ.

ಸುದೀಪ್​ಗೆ ಅನಾರೋಗ್ಯ ಎಂಬ ವಿಷಯ ಗೊತ್ತಾಗುತ್ತಿದ್ದಂತೆಯೇ ಬಿಗ್ ಬಾಸ್​ ಸ್ಪರ್ಧಿಗಳಿಗೆ ತುಂಬ ಬೇಸರವಾಗಿತ್ತು. ಅವರೆಲ್ಲರೂ ಪ್ರೀತಿಯಿಂದ ಸುದೀಪ್​ಗೆ ಪತ್ರ ಬರೆದು, ಅಡುಗೆ ಮಾಡಿ ಕಳಿಸಿದ್ದರು. ಅದಕ್ಕೆ ​ಪ್ರತಿಕ್ರಿಯಿಸಿದ ಸುದೀಪ್​ ಅವರು ಆದಷ್ಟು ಬೇಗ ಗುಣಮುಖವಾಗಿ ಬರುತ್ತೇನೆ ಎಂದು ಭರವಸೆ ನೀಡಿದ್ದರು. ಮುಂದಿನ ವಾರವಾದರೂ ವೀಕೆಂಡ್​ ಎಪಿಸೋಡ್​ಗಳನ್ನು ಕಿಚ್ಚ ನಡೆಸಿಕೊಡಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೆ, ಅನೇಕ ಸೆಲೆಬ್ರಿಟಿಗಳು ಕೂಡ ಸುದೀಪ್​ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: Kichcha Sudeep: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಮನೆಯಲ್ಲಿ ಕೊನೆಗೂ ಕೇಳ್ತು ಸುದೀಪ್​ ಧ್ವನಿ!

Kichcha Sudeep: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಮನೆಯಲ್ಲಿ ಕೊನೆಗೂ ಕೇಳ್ತು ಸುದೀಪ್​ ಧ್ವನಿ!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ