ವಿಘ್ನ ಗಣಪನಿಗೆ ವಂದಿಸಿ ಸುದೀಪ್ ಫ್ಯಾಂಟಮ್ ಚಿತ್ರೀಕರಣ ಮರು ಆರಂಭ

ಕೊರೊನಾ ಹಾವಳಿಯಿಂದ ಕನ್ನಡ ಚಿತ್ರರಂಗ ಸೈಲೆಂಟ್ ಆಗಿತ್ತು. ಸೂಪರ್​ಸ್ಟಾರ್​ಗಳು ಕೂಡ ತಮ್ಮ ಸಿನಿಮಾಗಳಿಗೆ ಬ್ರೇಕ್ ಕೊಟ್ಟು ಮನೆಯಲ್ಲೇ ಇದ್ರೂ. ಆದ್ರೀಗ ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ಮತ್ತೆ ಆರಂಭ ಆಗಿದೆ. ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಷನ್​ನ ಚೊಚ್ಚಲ ಸಿನಿಮಾ ಫ್ಯಾಂಟಮ್ ಒಂದು ಶೆಡ್ಯೂಲ್ ಮುಗಿತ್ತು. ಇನ್ನೇನು ಎರಡನೇ ಹಂತದ ಚಿತ್ರೀಕರಣ ಆರಂಭಿಸಬೇಕು ಎನ್ನುವಷ್ಟರಲ್ಲೇ ಕೊರೊನಾ ವಕ್ಕರಿಸಿದ್ದರಿಂದ ಚಿತ್ರೀಕರಣವನ್ನ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈಗ ಸುಮಾರು ಮೂರೂವರೆ ತಿಂಗಳ ಬಳಿಕ ಮತ್ತೆ ಫ್ಯಾಂಟಮ್ […]

ವಿಘ್ನ ಗಣಪನಿಗೆ ವಂದಿಸಿ ಸುದೀಪ್ ಫ್ಯಾಂಟಮ್ ಚಿತ್ರೀಕರಣ ಮರು ಆರಂಭ
ಸಾಧು ಶ್ರೀನಾಥ್​

Updated on: Jul 16, 2020 | 1:56 PM

ಕೊರೊನಾ ಹಾವಳಿಯಿಂದ ಕನ್ನಡ ಚಿತ್ರರಂಗ ಸೈಲೆಂಟ್ ಆಗಿತ್ತು. ಸೂಪರ್​ಸ್ಟಾರ್​ಗಳು ಕೂಡ ತಮ್ಮ ಸಿನಿಮಾಗಳಿಗೆ ಬ್ರೇಕ್ ಕೊಟ್ಟು ಮನೆಯಲ್ಲೇ ಇದ್ರೂ. ಆದ್ರೀಗ ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ಮತ್ತೆ ಆರಂಭ ಆಗಿದೆ.

ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಷನ್​ನ ಚೊಚ್ಚಲ ಸಿನಿಮಾ ಫ್ಯಾಂಟಮ್ ಒಂದು ಶೆಡ್ಯೂಲ್ ಮುಗಿತ್ತು. ಇನ್ನೇನು ಎರಡನೇ ಹಂತದ ಚಿತ್ರೀಕರಣ ಆರಂಭಿಸಬೇಕು ಎನ್ನುವಷ್ಟರಲ್ಲೇ ಕೊರೊನಾ ವಕ್ಕರಿಸಿದ್ದರಿಂದ ಚಿತ್ರೀಕರಣವನ್ನ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈಗ ಸುಮಾರು ಮೂರೂವರೆ ತಿಂಗಳ ಬಳಿಕ ಮತ್ತೆ ಫ್ಯಾಂಟಮ್ ಚಿತ್ರೀಕರಣವನ್ನ ಹೈದ್ರಾಬಾದಿನ ಅನ್ನಪೂರ್ಣ ಸ್ಟುಡಿಯೋದಲ್ಲಿ ಆರಂಭಿಸಲಾಗಿದೆ.

ವಿಘ್ನೇಶ್ವರನಿಗೆ ಪೂಜೆ ಸಲ್ಲಿಸೋ ಮೂಲಕ ಫ್ಯಾಂಟಮ್ ಚಿತ್ರೀಕರಣ ಆರಂಭ ಮಾಡಲಾಗಿದೆ. ಎಲ್ಲಕ್ಕಿಂತ ವಿಶೇಷ ಅಂದ್ರೆ, ಕನ್ನಡದ ಕಾರ್ಮಿಕರಿಗೆ ಕೆಲಸ ನೀಡಲಾಗಿದೆ. ಕೊರೊನಾದಿಂದಾಗಿ ಕನ್ನಡ ಚಿತ್ರರಂಗದ ಕಾರ್ಮಿಕರು ಸಂಕಷ್ಟದಲ್ಲಿದ್ದರು. ಹೀಗಾಗಿ ಕಾರ್ಮಿಕರ ಒಕ್ಕೂಟ ಫ್ಯಾಂಟಮ್ ಚಿತ್ರತಂಡದ ಬಳಿ ಮನವಿ ಮಾಡಿಕೊಂಡಿತ್ತು. ಆದ್ರಿಂದ ಸ್ವತ: ಸುದೀಪ್ ಅವರೇ ಕರ್ನಾಟಕದ ಕಾರ್ಮಿಕರನ್ನ ಹೈದ್ರಾಬಾದಿಗೆ ಕರೆತರುವಂತೆ ಸೂಚಿಸಿದ್ದರು. ಹೀಗಾಗಿ ಕನ್ನಡ ಚಿತ್ರರಂಗದ ಕಾರ್ಮಿಕರು ಫ್ಯಾಂಟಮ್ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us