AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ಜನ್ಮದಿನಕ್ಕೆ ಕಾಮನ್​ ಡಿಪಿ ಅನಾವರಣ ಮಾಡಿದ ಸುದೀಪ್​; ಫೋಟೋ ನೋಡಿ ಫ್ಯಾನ್ಸ್​ ಫಿದಾ

S Dhoni 40th birthday CDP:ಜುಲೈ 7ರಂದು ಧೋನಿ ಜನ್ಮದಿನ. ಅವರು 40ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಸುದೀಪ್​ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ.

ಧೋನಿ ಜನ್ಮದಿನಕ್ಕೆ ಕಾಮನ್​ ಡಿಪಿ ಅನಾವರಣ ಮಾಡಿದ ಸುದೀಪ್​; ಫೋಟೋ ನೋಡಿ ಫ್ಯಾನ್ಸ್​ ಫಿದಾ
ಧೋನಿ-ಸುದೀಪ್​
Follow us
ರಾಜೇಶ್ ದುಗ್ಗುಮನೆ
|

Updated on: Jul 01, 2021 | 8:41 PM

ನಟ ಕಿಚ್ಚ ಸುದೀಪ್​ ಸಿನಿಮಾ ರಂಗದಲ್ಲಿ ಮಾತ್ರವಲ್ಲದೆ, ಕ್ರಿಕೆಟ್​ ಕ್ಷೇತ್ರದಲ್ಲೂ ಆಸಕ್ತಿ ಹೊಂದಿದ್ದಾರೆ. ಚಿತ್ರರಂಗದ ಕಲಾವಿದರನ್ನು ಒಂದೆಡೆ ಸೇರಿಸಿ ಅವರು ಟೂರ್ನಿಯನ್ನು ಕೂಡ ನಡೆಸಿದ್ದಾರೆ. ಈಗ ಭಾರತ ತಂಡದ ಮಾಜಿ ನಾಯಕ​ ಎಂ.ಎಸ್. ಧೋನಿ ಜನ್ಮದಿನದ ಅಂಗವಾಗಿ ಸುದೀಪ್ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳ ಬರ್ತ್​ಡೇ ಬಂತೆಂದರೆ ಅಭಿಮಾನಿಗಳು ಕಾಮನ್​ ಡಿಪಿ ಅನಾವರಣ ಮಾಡುತ್ತಾರೆ. ಈ ಫೋಟೋವನ್ನು ಸೋಶಿಯಲ್ ಮೀಡಿಯಾ ಅಕೌಂಟ್​ಗಳಲ್ಲಿ ಪ್ರೊಫೈಲ್​ ಪಿಕ್ಚರ್​ ಹಾಕಿಕೊಂಡು ಸಂಭ್ರಮಿಸುತ್ತಾರೆ. ಈಗ ಜುಲೈ 7ರಂದು ಧೋನಿ ಜನ್ಮದಿನ. ಅವರು 40ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಸುದೀಪ್​ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ.

ಚೆನ್ನೈ ಸೂಪರ್​ ಕಿಂಗ್ಸ್​ ಜೆರ್ಸಿಯ ಅರ್ಧ ಭಾಗ ಹಾಗೂ ಟೀಂ ಇಂಡಿಯಾ ಜೆರ್ಸಿಯ ಅರ್ಧಭಾಗವನ್ನು ತೊಟ್ಟಂತೆ ಕಾಣುವ ಫೋಟೋದಲ್ಲಿ ಮಹಿ ಮಿಂಚಿದ್ದಾರೆ. ಇದರ ಹಿಂಭಾಗದಲ್ಲಿ ಸಿಂಹ, ವಿಶ್ವಕಪ್​, ಧೋನಿ ನಾನಾ ರೀತಿಯ ಜೆರ್ಸಿ ತೊಟ್ಟಿರುವ ಫೋಟೋಗಳಿವೆ. ಒಟ್ಟಿನಲ್ಲಿ ಇದನ್ನು ನೋಡಿ ಧೋನಿ ಹಾಗೂ ಸುದೀಪ್​ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

‘ಇವರು ಎಲ್ಲರ ಹೀರೋ. ಇವರು ಎಲ್ಲರ ಫೇವರಿಟ್​, ಇವರು ಎಲ್ಲರ ಸ್ಟಾರ್​, ಇವರು ಎಲ್ಲರ ಸ್ಫೂರ್ತಿ, ಎಂಎಸ್​ ಧೋನಿ ಅವರ ಕಾಮನ್​ ಡಿಪಿ ಅನಾವರಣ ಮಾಡುತ್ತಿರುವುದಕ್ಕೆ ಸಂತಸವಾಗುತ್ತಿದೆ. ಅದೂ, ನಟನಾಗಿ ಅಲ್ಲ, ಓರ್ವ ಫ್ಯಾನ್​ ಆಗಿ. ನಿಮಗೆ ಜನ್ಮ ದಿನದ ಶುಭಾಶಯ’ ಎಂದು ಸುದೀಪ್​ ಬರೆದುಕೊಂಡಿದ್ದಾರೆ.

ಟ್ವೀಟ್​ ಮಾಡಿದ ಒಂದು ಗಂಟೆಯಲ್ಲಿ ಈ ಪೋಸ್ಟ್​ 10 ಸಾವಿರ ಲೈಕ್ಸ್​ ಗಿಟ್ಟಿಸಿಕೊಂಡಿದೆ.

ಇದನ್ನೂ ಓದಿ: ‘ಅಗ್ನಿಸಾಕ್ಷಿ’ ಶೂಟಿಂಗ್ ವೇಳೆ ವೈಷ್ಣವಿ ಕೈಯಲ್ಲಿ ಯಾವಾಗಲೂ ಇರ್ತಿತ್ತು ರೇಷ್ಮೆ ಸೀರೆ; ಸುದೀಪ್ ಬಿಚ್ಚಿಟ್ಟ ಅಚ್ಚರಿಯ ವಿಚಾರ

ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ