AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ಜನ್ಮದಿನಕ್ಕೆ ಕಾಮನ್​ ಡಿಪಿ ಅನಾವರಣ ಮಾಡಿದ ಸುದೀಪ್​; ಫೋಟೋ ನೋಡಿ ಫ್ಯಾನ್ಸ್​ ಫಿದಾ

S Dhoni 40th birthday CDP:ಜುಲೈ 7ರಂದು ಧೋನಿ ಜನ್ಮದಿನ. ಅವರು 40ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಸುದೀಪ್​ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ.

ಧೋನಿ ಜನ್ಮದಿನಕ್ಕೆ ಕಾಮನ್​ ಡಿಪಿ ಅನಾವರಣ ಮಾಡಿದ ಸುದೀಪ್​; ಫೋಟೋ ನೋಡಿ ಫ್ಯಾನ್ಸ್​ ಫಿದಾ
ಧೋನಿ-ಸುದೀಪ್​
ರಾಜೇಶ್ ದುಗ್ಗುಮನೆ
|

Updated on: Jul 01, 2021 | 8:41 PM

Share

ನಟ ಕಿಚ್ಚ ಸುದೀಪ್​ ಸಿನಿಮಾ ರಂಗದಲ್ಲಿ ಮಾತ್ರವಲ್ಲದೆ, ಕ್ರಿಕೆಟ್​ ಕ್ಷೇತ್ರದಲ್ಲೂ ಆಸಕ್ತಿ ಹೊಂದಿದ್ದಾರೆ. ಚಿತ್ರರಂಗದ ಕಲಾವಿದರನ್ನು ಒಂದೆಡೆ ಸೇರಿಸಿ ಅವರು ಟೂರ್ನಿಯನ್ನು ಕೂಡ ನಡೆಸಿದ್ದಾರೆ. ಈಗ ಭಾರತ ತಂಡದ ಮಾಜಿ ನಾಯಕ​ ಎಂ.ಎಸ್. ಧೋನಿ ಜನ್ಮದಿನದ ಅಂಗವಾಗಿ ಸುದೀಪ್ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳ ಬರ್ತ್​ಡೇ ಬಂತೆಂದರೆ ಅಭಿಮಾನಿಗಳು ಕಾಮನ್​ ಡಿಪಿ ಅನಾವರಣ ಮಾಡುತ್ತಾರೆ. ಈ ಫೋಟೋವನ್ನು ಸೋಶಿಯಲ್ ಮೀಡಿಯಾ ಅಕೌಂಟ್​ಗಳಲ್ಲಿ ಪ್ರೊಫೈಲ್​ ಪಿಕ್ಚರ್​ ಹಾಕಿಕೊಂಡು ಸಂಭ್ರಮಿಸುತ್ತಾರೆ. ಈಗ ಜುಲೈ 7ರಂದು ಧೋನಿ ಜನ್ಮದಿನ. ಅವರು 40ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಸುದೀಪ್​ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ.

ಚೆನ್ನೈ ಸೂಪರ್​ ಕಿಂಗ್ಸ್​ ಜೆರ್ಸಿಯ ಅರ್ಧ ಭಾಗ ಹಾಗೂ ಟೀಂ ಇಂಡಿಯಾ ಜೆರ್ಸಿಯ ಅರ್ಧಭಾಗವನ್ನು ತೊಟ್ಟಂತೆ ಕಾಣುವ ಫೋಟೋದಲ್ಲಿ ಮಹಿ ಮಿಂಚಿದ್ದಾರೆ. ಇದರ ಹಿಂಭಾಗದಲ್ಲಿ ಸಿಂಹ, ವಿಶ್ವಕಪ್​, ಧೋನಿ ನಾನಾ ರೀತಿಯ ಜೆರ್ಸಿ ತೊಟ್ಟಿರುವ ಫೋಟೋಗಳಿವೆ. ಒಟ್ಟಿನಲ್ಲಿ ಇದನ್ನು ನೋಡಿ ಧೋನಿ ಹಾಗೂ ಸುದೀಪ್​ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

‘ಇವರು ಎಲ್ಲರ ಹೀರೋ. ಇವರು ಎಲ್ಲರ ಫೇವರಿಟ್​, ಇವರು ಎಲ್ಲರ ಸ್ಟಾರ್​, ಇವರು ಎಲ್ಲರ ಸ್ಫೂರ್ತಿ, ಎಂಎಸ್​ ಧೋನಿ ಅವರ ಕಾಮನ್​ ಡಿಪಿ ಅನಾವರಣ ಮಾಡುತ್ತಿರುವುದಕ್ಕೆ ಸಂತಸವಾಗುತ್ತಿದೆ. ಅದೂ, ನಟನಾಗಿ ಅಲ್ಲ, ಓರ್ವ ಫ್ಯಾನ್​ ಆಗಿ. ನಿಮಗೆ ಜನ್ಮ ದಿನದ ಶುಭಾಶಯ’ ಎಂದು ಸುದೀಪ್​ ಬರೆದುಕೊಂಡಿದ್ದಾರೆ.

ಟ್ವೀಟ್​ ಮಾಡಿದ ಒಂದು ಗಂಟೆಯಲ್ಲಿ ಈ ಪೋಸ್ಟ್​ 10 ಸಾವಿರ ಲೈಕ್ಸ್​ ಗಿಟ್ಟಿಸಿಕೊಂಡಿದೆ.

ಇದನ್ನೂ ಓದಿ: ‘ಅಗ್ನಿಸಾಕ್ಷಿ’ ಶೂಟಿಂಗ್ ವೇಳೆ ವೈಷ್ಣವಿ ಕೈಯಲ್ಲಿ ಯಾವಾಗಲೂ ಇರ್ತಿತ್ತು ರೇಷ್ಮೆ ಸೀರೆ; ಸುದೀಪ್ ಬಿಚ್ಚಿಟ್ಟ ಅಚ್ಚರಿಯ ವಿಚಾರ

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ