AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ಜನ್ಮದಿನಕ್ಕೆ ಕಾಮನ್​ ಡಿಪಿ ಅನಾವರಣ ಮಾಡಿದ ಸುದೀಪ್​; ಫೋಟೋ ನೋಡಿ ಫ್ಯಾನ್ಸ್​ ಫಿದಾ

S Dhoni 40th birthday CDP:ಜುಲೈ 7ರಂದು ಧೋನಿ ಜನ್ಮದಿನ. ಅವರು 40ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಸುದೀಪ್​ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ.

ಧೋನಿ ಜನ್ಮದಿನಕ್ಕೆ ಕಾಮನ್​ ಡಿಪಿ ಅನಾವರಣ ಮಾಡಿದ ಸುದೀಪ್​; ಫೋಟೋ ನೋಡಿ ಫ್ಯಾನ್ಸ್​ ಫಿದಾ
ಧೋನಿ-ಸುದೀಪ್​
ರಾಜೇಶ್ ದುಗ್ಗುಮನೆ
|

Updated on: Jul 01, 2021 | 8:41 PM

Share

ನಟ ಕಿಚ್ಚ ಸುದೀಪ್​ ಸಿನಿಮಾ ರಂಗದಲ್ಲಿ ಮಾತ್ರವಲ್ಲದೆ, ಕ್ರಿಕೆಟ್​ ಕ್ಷೇತ್ರದಲ್ಲೂ ಆಸಕ್ತಿ ಹೊಂದಿದ್ದಾರೆ. ಚಿತ್ರರಂಗದ ಕಲಾವಿದರನ್ನು ಒಂದೆಡೆ ಸೇರಿಸಿ ಅವರು ಟೂರ್ನಿಯನ್ನು ಕೂಡ ನಡೆಸಿದ್ದಾರೆ. ಈಗ ಭಾರತ ತಂಡದ ಮಾಜಿ ನಾಯಕ​ ಎಂ.ಎಸ್. ಧೋನಿ ಜನ್ಮದಿನದ ಅಂಗವಾಗಿ ಸುದೀಪ್ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳ ಬರ್ತ್​ಡೇ ಬಂತೆಂದರೆ ಅಭಿಮಾನಿಗಳು ಕಾಮನ್​ ಡಿಪಿ ಅನಾವರಣ ಮಾಡುತ್ತಾರೆ. ಈ ಫೋಟೋವನ್ನು ಸೋಶಿಯಲ್ ಮೀಡಿಯಾ ಅಕೌಂಟ್​ಗಳಲ್ಲಿ ಪ್ರೊಫೈಲ್​ ಪಿಕ್ಚರ್​ ಹಾಕಿಕೊಂಡು ಸಂಭ್ರಮಿಸುತ್ತಾರೆ. ಈಗ ಜುಲೈ 7ರಂದು ಧೋನಿ ಜನ್ಮದಿನ. ಅವರು 40ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಸುದೀಪ್​ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ.

ಚೆನ್ನೈ ಸೂಪರ್​ ಕಿಂಗ್ಸ್​ ಜೆರ್ಸಿಯ ಅರ್ಧ ಭಾಗ ಹಾಗೂ ಟೀಂ ಇಂಡಿಯಾ ಜೆರ್ಸಿಯ ಅರ್ಧಭಾಗವನ್ನು ತೊಟ್ಟಂತೆ ಕಾಣುವ ಫೋಟೋದಲ್ಲಿ ಮಹಿ ಮಿಂಚಿದ್ದಾರೆ. ಇದರ ಹಿಂಭಾಗದಲ್ಲಿ ಸಿಂಹ, ವಿಶ್ವಕಪ್​, ಧೋನಿ ನಾನಾ ರೀತಿಯ ಜೆರ್ಸಿ ತೊಟ್ಟಿರುವ ಫೋಟೋಗಳಿವೆ. ಒಟ್ಟಿನಲ್ಲಿ ಇದನ್ನು ನೋಡಿ ಧೋನಿ ಹಾಗೂ ಸುದೀಪ್​ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

‘ಇವರು ಎಲ್ಲರ ಹೀರೋ. ಇವರು ಎಲ್ಲರ ಫೇವರಿಟ್​, ಇವರು ಎಲ್ಲರ ಸ್ಟಾರ್​, ಇವರು ಎಲ್ಲರ ಸ್ಫೂರ್ತಿ, ಎಂಎಸ್​ ಧೋನಿ ಅವರ ಕಾಮನ್​ ಡಿಪಿ ಅನಾವರಣ ಮಾಡುತ್ತಿರುವುದಕ್ಕೆ ಸಂತಸವಾಗುತ್ತಿದೆ. ಅದೂ, ನಟನಾಗಿ ಅಲ್ಲ, ಓರ್ವ ಫ್ಯಾನ್​ ಆಗಿ. ನಿಮಗೆ ಜನ್ಮ ದಿನದ ಶುಭಾಶಯ’ ಎಂದು ಸುದೀಪ್​ ಬರೆದುಕೊಂಡಿದ್ದಾರೆ.

ಟ್ವೀಟ್​ ಮಾಡಿದ ಒಂದು ಗಂಟೆಯಲ್ಲಿ ಈ ಪೋಸ್ಟ್​ 10 ಸಾವಿರ ಲೈಕ್ಸ್​ ಗಿಟ್ಟಿಸಿಕೊಂಡಿದೆ.

ಇದನ್ನೂ ಓದಿ: ‘ಅಗ್ನಿಸಾಕ್ಷಿ’ ಶೂಟಿಂಗ್ ವೇಳೆ ವೈಷ್ಣವಿ ಕೈಯಲ್ಲಿ ಯಾವಾಗಲೂ ಇರ್ತಿತ್ತು ರೇಷ್ಮೆ ಸೀರೆ; ಸುದೀಪ್ ಬಿಚ್ಚಿಟ್ಟ ಅಚ್ಚರಿಯ ವಿಚಾರ

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್