AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗದಲ್ಲಿ ಸುದೀಪ್​ ನೆಚ್ಚಿನ ಹೀರೋ ಯಾರು? ವೈರಲ್​ ಆಗುತ್ತಿದೆ ಒಂದು ವಿಡಿಯೋ

ಪ್ರಭಾಸ್​, ಮಹೇಶ್​ ಬಾಬು, ಜ್ಯೂ. ಎನ್​ಟಿಆರ್​ ಹಾಗೂ ಚಿರಂಜೀವಿ ಈ ಸ್ಟಾರ್​ಗಳಲ್ಲಿ ನಿಮಗೆ ಯಾರು ಇಷ್ಟ ಎಂದು ನಿರೂಪಕಿ ಕೇಳಿದ್ದಕ್ಕೆ ಜ್ಯೂ. ಎನ್​ಟಿಆರ್​ ಎಂದು ಸುದೀಪ್​ ಉತ್ತರಿಸಿದ್ದರು. ಆ ವಿಡಿಯೋ ಈಗ ವೈರಲ್​ ಆಗುತ್ತಿದೆ.

ತೆಲುಗು ಚಿತ್ರರಂಗದಲ್ಲಿ ಸುದೀಪ್​ ನೆಚ್ಚಿನ ಹೀರೋ ಯಾರು? ವೈರಲ್​ ಆಗುತ್ತಿದೆ ಒಂದು ವಿಡಿಯೋ
ಕಿಚ್ಚ ಸುದೀಪ್
TV9 Web
| Edited By: |

Updated on: Aug 05, 2021 | 7:54 AM

Share

ಸ್ಯಾಂಡಲ್​ವುಡ್​ ಸ್ಟಾರ್​ ಕಿಚ್ಚ ಸುದೀಪ್​ ಅವರಿಗೆ ಬೇರೆ ಭಾಷೆಯಲ್ಲೂ ಅಭಿಮಾನಿಗಳಿದ್ದಾರೆ. ‘ಬಾಹುಬಲಿ’, ‘ಈಗ’ ಮುಂತಾದ ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ತೆಲುಗು ಚಿತ್ರರಂಗದಲ್ಲೂ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಅವರಿಗೆ ಸ್ನೇಹಿತರು ಇದ್ದಾರೆ. ಅದರಲ್ಲೂ ಟಾಲಿವುಡ್​ನಲ್ಲಿ ಅವರ ಫೇವರಿಟ್​ ನಟ ಯಾರು? ಈ ಪ್ರಶ್ನೆಗೆ ಸ್ವತಃ ಕಿಚ್ಚ ಸುದೀಪ್​ ಉತ್ತರ ನೀಡಿದ್ದರು. ಕೆಲವು ತಿಂಗಳ ಹಿಂದೆ ಅವರು ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದರು. ಆ ವಿಡಿಯೋ ಈಗ ಮತ್ತೆ ವೈರಲ್​ ಆಗುತ್ತಿದೆ. ತಮ್ಮ ಇಷ್ಟದ ಹೀರೋ ಜ್ಯೂ. ಎನ್​ಟಿಆರ್​ ಎಂದು ಸುದೀಪ್​ ಹೇಳಿದ್ದರು. ಯಾಕೆ?

ಪ್ರಭಾಸ್​, ಮಹೇಶ್​ ಬಾಬು, ಜ್ಯೂ. ಎನ್​ಟಿಆರ್​ ಹಾಗೂ ಚಿರಂಜೀವಿ ಈ ಸ್ಟಾರ್​ಗಳಲ್ಲಿ ನಿಮಗೆ ಯಾರು ಇಷ್ಟ ಎಂದು ನಿರೂಪಕಿ ಕೇಳಿದ್ದಕ್ಕೆ ಜ್ಯೂ. ಎನ್​ಟಿಆರ್​ ಎಂದು ಸುದೀಪ್​ ಉತ್ತರಿಸಿದ್ದರು. ‘ಅವರ ಪ್ರಾರಂಭದ ದಿನಗಳಿಂದಲೂ ನಾನು ಅವರನ್ನು ಗಮನಿಸುತ್ತಿದ್ದೇನೆ. ಇತ್ತೀಚೆಗಿನ ಆರ್​ಆರ್​ಆರ್​ ಟೀಸರ್​ ಕೂಡ ನೋಡಿದ್ದೇನೆ. ಮೊದಲು ಅವರು ದಪ್ಪ ಇದ್ದರು. ಆದರೆ ಈಗ ಪಾತ್ರಕ್ಕಾಗಿ ದೇಹ ಹುರಿಗೊಳಿಸಿಕೊಂಡಿದ್ದಾರೆ’ ಎಂದು ಸುದೀಪ್​ ಹೇಳಿದ್ದರು.

ಅಷ್ಟಕ್ಕೂ ಈ ಹಳೇ ವಿಡಿಯೋ ಈಗ ಯಾಕೆ ವೈರಲ್​ ಆಗುತ್ತಿದೆ? ಸದ್ಯ ಜ್ಯೂ. ಎನ್​ಟಿಆರ್​ ನಟನೆಯ ಆರ್​ಆರ್​ಆರ್​ ಸಿನಿಮಾ ಬಿಡುಗಡೆಗೆ ಹತ್ತಿರ ಆಗುತ್ತಿದೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಯಿತು. ನಿಧಾನಕ್ಕೆ ಚಿತ್ರದ ಪ್ರಚಾರ ಕಾರ್ಯಗಳಿಗೆ ತಂಡ ಚಾಲನೆ ನೀಡಿದೆ. ಅತ್ತ ಅಭಿಮಾನಿಗಳು ಕೂಡ ಪ್ರಚಾರದಲ್ಲಿ ಭಾಗವಹಿಸುತ್ತಿದ್ದಾರೆ. ತಮ್ಮ ನೆಚ್ಚಿನ ಹೀರೋ ಜ್ಯೂ. ಎನ್​ಟಿಆರ್​ಗೆ ಸಂಬಂಧಿಸಿದ ಹಳೇ ವಿಡಿಯೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ಪ್ರಚಾರಕ್ಕೆ ಸಹಕಾರಿ ಆಗುತ್ತಿದ್ದಾರೆ. ಅದೇ ಕಾರಣಕ್ಕೆ ಈ ಸಂದರ್ಶನದ ವಿಡಿಯೋ ಮತ್ತೆ ವೈರಲ್​ ಆಗುತ್ತಿದೆ.

ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ಮುಖ್ಯಭೂಮಿಕೆ ನಿಭಾಯಿಸಿರುವ ಆರ್​ಆರ್​ಆರ್​ ಚಿತ್ರಕ್ಕೆ ರಾಜಮೌಳಿ ನಿರ್ದೇಶನ ಮಾಡಿದ್ದಾರೆ. ನಾಯಕಿಯಾಗಿ ಬಾಲಿವುಡ್​ ಬೆಡಗಿ ಆಲಿಯಾ ಭಟ್​ ನಟಿಸಿದ್ದಾರೆ. ಅಜಯ್​ ದೇವಗನ್​ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:

ಕನ್ನಡ ಶಾಲೆಗಾಗಿ ಮತ್ತೊಂದು ಮಹತ್ವದ ಕಾರ್ಯ ಕೈಗೊಂಡ ಕಿಚ್ಚ ಸುದೀಪ್​ ಚಾರಿಟೇಬಲ್​ ಟ್ರಸ್ಟ್​

Roar of RRR: ಅಬ್ಬಬ್ಬಾ… ಆರ್​ಆರ್​ಆರ್​ ಮೇಕಿಂಗ್​ ಹೀಗಿದೆ, ಇನ್ನು ಸಿನಿಮಾ ಹೇಗಿರಬಹುದು?

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ