AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗದಲ್ಲಿ ಸುದೀಪ್​ ನೆಚ್ಚಿನ ಹೀರೋ ಯಾರು? ವೈರಲ್​ ಆಗುತ್ತಿದೆ ಒಂದು ವಿಡಿಯೋ

ಪ್ರಭಾಸ್​, ಮಹೇಶ್​ ಬಾಬು, ಜ್ಯೂ. ಎನ್​ಟಿಆರ್​ ಹಾಗೂ ಚಿರಂಜೀವಿ ಈ ಸ್ಟಾರ್​ಗಳಲ್ಲಿ ನಿಮಗೆ ಯಾರು ಇಷ್ಟ ಎಂದು ನಿರೂಪಕಿ ಕೇಳಿದ್ದಕ್ಕೆ ಜ್ಯೂ. ಎನ್​ಟಿಆರ್​ ಎಂದು ಸುದೀಪ್​ ಉತ್ತರಿಸಿದ್ದರು. ಆ ವಿಡಿಯೋ ಈಗ ವೈರಲ್​ ಆಗುತ್ತಿದೆ.

ತೆಲುಗು ಚಿತ್ರರಂಗದಲ್ಲಿ ಸುದೀಪ್​ ನೆಚ್ಚಿನ ಹೀರೋ ಯಾರು? ವೈರಲ್​ ಆಗುತ್ತಿದೆ ಒಂದು ವಿಡಿಯೋ
ಕಿಚ್ಚ ಸುದೀಪ್
TV9 Web
| Edited By: |

Updated on: Aug 05, 2021 | 7:54 AM

Share

ಸ್ಯಾಂಡಲ್​ವುಡ್​ ಸ್ಟಾರ್​ ಕಿಚ್ಚ ಸುದೀಪ್​ ಅವರಿಗೆ ಬೇರೆ ಭಾಷೆಯಲ್ಲೂ ಅಭಿಮಾನಿಗಳಿದ್ದಾರೆ. ‘ಬಾಹುಬಲಿ’, ‘ಈಗ’ ಮುಂತಾದ ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ತೆಲುಗು ಚಿತ್ರರಂಗದಲ್ಲೂ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಅವರಿಗೆ ಸ್ನೇಹಿತರು ಇದ್ದಾರೆ. ಅದರಲ್ಲೂ ಟಾಲಿವುಡ್​ನಲ್ಲಿ ಅವರ ಫೇವರಿಟ್​ ನಟ ಯಾರು? ಈ ಪ್ರಶ್ನೆಗೆ ಸ್ವತಃ ಕಿಚ್ಚ ಸುದೀಪ್​ ಉತ್ತರ ನೀಡಿದ್ದರು. ಕೆಲವು ತಿಂಗಳ ಹಿಂದೆ ಅವರು ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದರು. ಆ ವಿಡಿಯೋ ಈಗ ಮತ್ತೆ ವೈರಲ್​ ಆಗುತ್ತಿದೆ. ತಮ್ಮ ಇಷ್ಟದ ಹೀರೋ ಜ್ಯೂ. ಎನ್​ಟಿಆರ್​ ಎಂದು ಸುದೀಪ್​ ಹೇಳಿದ್ದರು. ಯಾಕೆ?

ಪ್ರಭಾಸ್​, ಮಹೇಶ್​ ಬಾಬು, ಜ್ಯೂ. ಎನ್​ಟಿಆರ್​ ಹಾಗೂ ಚಿರಂಜೀವಿ ಈ ಸ್ಟಾರ್​ಗಳಲ್ಲಿ ನಿಮಗೆ ಯಾರು ಇಷ್ಟ ಎಂದು ನಿರೂಪಕಿ ಕೇಳಿದ್ದಕ್ಕೆ ಜ್ಯೂ. ಎನ್​ಟಿಆರ್​ ಎಂದು ಸುದೀಪ್​ ಉತ್ತರಿಸಿದ್ದರು. ‘ಅವರ ಪ್ರಾರಂಭದ ದಿನಗಳಿಂದಲೂ ನಾನು ಅವರನ್ನು ಗಮನಿಸುತ್ತಿದ್ದೇನೆ. ಇತ್ತೀಚೆಗಿನ ಆರ್​ಆರ್​ಆರ್​ ಟೀಸರ್​ ಕೂಡ ನೋಡಿದ್ದೇನೆ. ಮೊದಲು ಅವರು ದಪ್ಪ ಇದ್ದರು. ಆದರೆ ಈಗ ಪಾತ್ರಕ್ಕಾಗಿ ದೇಹ ಹುರಿಗೊಳಿಸಿಕೊಂಡಿದ್ದಾರೆ’ ಎಂದು ಸುದೀಪ್​ ಹೇಳಿದ್ದರು.

ಅಷ್ಟಕ್ಕೂ ಈ ಹಳೇ ವಿಡಿಯೋ ಈಗ ಯಾಕೆ ವೈರಲ್​ ಆಗುತ್ತಿದೆ? ಸದ್ಯ ಜ್ಯೂ. ಎನ್​ಟಿಆರ್​ ನಟನೆಯ ಆರ್​ಆರ್​ಆರ್​ ಸಿನಿಮಾ ಬಿಡುಗಡೆಗೆ ಹತ್ತಿರ ಆಗುತ್ತಿದೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಯಿತು. ನಿಧಾನಕ್ಕೆ ಚಿತ್ರದ ಪ್ರಚಾರ ಕಾರ್ಯಗಳಿಗೆ ತಂಡ ಚಾಲನೆ ನೀಡಿದೆ. ಅತ್ತ ಅಭಿಮಾನಿಗಳು ಕೂಡ ಪ್ರಚಾರದಲ್ಲಿ ಭಾಗವಹಿಸುತ್ತಿದ್ದಾರೆ. ತಮ್ಮ ನೆಚ್ಚಿನ ಹೀರೋ ಜ್ಯೂ. ಎನ್​ಟಿಆರ್​ಗೆ ಸಂಬಂಧಿಸಿದ ಹಳೇ ವಿಡಿಯೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ಪ್ರಚಾರಕ್ಕೆ ಸಹಕಾರಿ ಆಗುತ್ತಿದ್ದಾರೆ. ಅದೇ ಕಾರಣಕ್ಕೆ ಈ ಸಂದರ್ಶನದ ವಿಡಿಯೋ ಮತ್ತೆ ವೈರಲ್​ ಆಗುತ್ತಿದೆ.

ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ಮುಖ್ಯಭೂಮಿಕೆ ನಿಭಾಯಿಸಿರುವ ಆರ್​ಆರ್​ಆರ್​ ಚಿತ್ರಕ್ಕೆ ರಾಜಮೌಳಿ ನಿರ್ದೇಶನ ಮಾಡಿದ್ದಾರೆ. ನಾಯಕಿಯಾಗಿ ಬಾಲಿವುಡ್​ ಬೆಡಗಿ ಆಲಿಯಾ ಭಟ್​ ನಟಿಸಿದ್ದಾರೆ. ಅಜಯ್​ ದೇವಗನ್​ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:

ಕನ್ನಡ ಶಾಲೆಗಾಗಿ ಮತ್ತೊಂದು ಮಹತ್ವದ ಕಾರ್ಯ ಕೈಗೊಂಡ ಕಿಚ್ಚ ಸುದೀಪ್​ ಚಾರಿಟೇಬಲ್​ ಟ್ರಸ್ಟ್​

Roar of RRR: ಅಬ್ಬಬ್ಬಾ… ಆರ್​ಆರ್​ಆರ್​ ಮೇಕಿಂಗ್​ ಹೀಗಿದೆ, ಇನ್ನು ಸಿನಿಮಾ ಹೇಗಿರಬಹುದು?

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!