AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗದಲ್ಲಿ ಸುದೀಪ್​ ನೆಚ್ಚಿನ ಹೀರೋ ಯಾರು? ವೈರಲ್​ ಆಗುತ್ತಿದೆ ಒಂದು ವಿಡಿಯೋ

ಪ್ರಭಾಸ್​, ಮಹೇಶ್​ ಬಾಬು, ಜ್ಯೂ. ಎನ್​ಟಿಆರ್​ ಹಾಗೂ ಚಿರಂಜೀವಿ ಈ ಸ್ಟಾರ್​ಗಳಲ್ಲಿ ನಿಮಗೆ ಯಾರು ಇಷ್ಟ ಎಂದು ನಿರೂಪಕಿ ಕೇಳಿದ್ದಕ್ಕೆ ಜ್ಯೂ. ಎನ್​ಟಿಆರ್​ ಎಂದು ಸುದೀಪ್​ ಉತ್ತರಿಸಿದ್ದರು. ಆ ವಿಡಿಯೋ ಈಗ ವೈರಲ್​ ಆಗುತ್ತಿದೆ.

ತೆಲುಗು ಚಿತ್ರರಂಗದಲ್ಲಿ ಸುದೀಪ್​ ನೆಚ್ಚಿನ ಹೀರೋ ಯಾರು? ವೈರಲ್​ ಆಗುತ್ತಿದೆ ಒಂದು ವಿಡಿಯೋ
ಕಿಚ್ಚ ಸುದೀಪ್
TV9 Web
| Edited By: |

Updated on: Aug 05, 2021 | 7:54 AM

Share

ಸ್ಯಾಂಡಲ್​ವುಡ್​ ಸ್ಟಾರ್​ ಕಿಚ್ಚ ಸುದೀಪ್​ ಅವರಿಗೆ ಬೇರೆ ಭಾಷೆಯಲ್ಲೂ ಅಭಿಮಾನಿಗಳಿದ್ದಾರೆ. ‘ಬಾಹುಬಲಿ’, ‘ಈಗ’ ಮುಂತಾದ ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ತೆಲುಗು ಚಿತ್ರರಂಗದಲ್ಲೂ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಅವರಿಗೆ ಸ್ನೇಹಿತರು ಇದ್ದಾರೆ. ಅದರಲ್ಲೂ ಟಾಲಿವುಡ್​ನಲ್ಲಿ ಅವರ ಫೇವರಿಟ್​ ನಟ ಯಾರು? ಈ ಪ್ರಶ್ನೆಗೆ ಸ್ವತಃ ಕಿಚ್ಚ ಸುದೀಪ್​ ಉತ್ತರ ನೀಡಿದ್ದರು. ಕೆಲವು ತಿಂಗಳ ಹಿಂದೆ ಅವರು ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದರು. ಆ ವಿಡಿಯೋ ಈಗ ಮತ್ತೆ ವೈರಲ್​ ಆಗುತ್ತಿದೆ. ತಮ್ಮ ಇಷ್ಟದ ಹೀರೋ ಜ್ಯೂ. ಎನ್​ಟಿಆರ್​ ಎಂದು ಸುದೀಪ್​ ಹೇಳಿದ್ದರು. ಯಾಕೆ?

ಪ್ರಭಾಸ್​, ಮಹೇಶ್​ ಬಾಬು, ಜ್ಯೂ. ಎನ್​ಟಿಆರ್​ ಹಾಗೂ ಚಿರಂಜೀವಿ ಈ ಸ್ಟಾರ್​ಗಳಲ್ಲಿ ನಿಮಗೆ ಯಾರು ಇಷ್ಟ ಎಂದು ನಿರೂಪಕಿ ಕೇಳಿದ್ದಕ್ಕೆ ಜ್ಯೂ. ಎನ್​ಟಿಆರ್​ ಎಂದು ಸುದೀಪ್​ ಉತ್ತರಿಸಿದ್ದರು. ‘ಅವರ ಪ್ರಾರಂಭದ ದಿನಗಳಿಂದಲೂ ನಾನು ಅವರನ್ನು ಗಮನಿಸುತ್ತಿದ್ದೇನೆ. ಇತ್ತೀಚೆಗಿನ ಆರ್​ಆರ್​ಆರ್​ ಟೀಸರ್​ ಕೂಡ ನೋಡಿದ್ದೇನೆ. ಮೊದಲು ಅವರು ದಪ್ಪ ಇದ್ದರು. ಆದರೆ ಈಗ ಪಾತ್ರಕ್ಕಾಗಿ ದೇಹ ಹುರಿಗೊಳಿಸಿಕೊಂಡಿದ್ದಾರೆ’ ಎಂದು ಸುದೀಪ್​ ಹೇಳಿದ್ದರು.

ಅಷ್ಟಕ್ಕೂ ಈ ಹಳೇ ವಿಡಿಯೋ ಈಗ ಯಾಕೆ ವೈರಲ್​ ಆಗುತ್ತಿದೆ? ಸದ್ಯ ಜ್ಯೂ. ಎನ್​ಟಿಆರ್​ ನಟನೆಯ ಆರ್​ಆರ್​ಆರ್​ ಸಿನಿಮಾ ಬಿಡುಗಡೆಗೆ ಹತ್ತಿರ ಆಗುತ್ತಿದೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಯಿತು. ನಿಧಾನಕ್ಕೆ ಚಿತ್ರದ ಪ್ರಚಾರ ಕಾರ್ಯಗಳಿಗೆ ತಂಡ ಚಾಲನೆ ನೀಡಿದೆ. ಅತ್ತ ಅಭಿಮಾನಿಗಳು ಕೂಡ ಪ್ರಚಾರದಲ್ಲಿ ಭಾಗವಹಿಸುತ್ತಿದ್ದಾರೆ. ತಮ್ಮ ನೆಚ್ಚಿನ ಹೀರೋ ಜ್ಯೂ. ಎನ್​ಟಿಆರ್​ಗೆ ಸಂಬಂಧಿಸಿದ ಹಳೇ ವಿಡಿಯೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ಪ್ರಚಾರಕ್ಕೆ ಸಹಕಾರಿ ಆಗುತ್ತಿದ್ದಾರೆ. ಅದೇ ಕಾರಣಕ್ಕೆ ಈ ಸಂದರ್ಶನದ ವಿಡಿಯೋ ಮತ್ತೆ ವೈರಲ್​ ಆಗುತ್ತಿದೆ.

ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ಮುಖ್ಯಭೂಮಿಕೆ ನಿಭಾಯಿಸಿರುವ ಆರ್​ಆರ್​ಆರ್​ ಚಿತ್ರಕ್ಕೆ ರಾಜಮೌಳಿ ನಿರ್ದೇಶನ ಮಾಡಿದ್ದಾರೆ. ನಾಯಕಿಯಾಗಿ ಬಾಲಿವುಡ್​ ಬೆಡಗಿ ಆಲಿಯಾ ಭಟ್​ ನಟಿಸಿದ್ದಾರೆ. ಅಜಯ್​ ದೇವಗನ್​ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:

ಕನ್ನಡ ಶಾಲೆಗಾಗಿ ಮತ್ತೊಂದು ಮಹತ್ವದ ಕಾರ್ಯ ಕೈಗೊಂಡ ಕಿಚ್ಚ ಸುದೀಪ್​ ಚಾರಿಟೇಬಲ್​ ಟ್ರಸ್ಟ್​

Roar of RRR: ಅಬ್ಬಬ್ಬಾ… ಆರ್​ಆರ್​ಆರ್​ ಮೇಕಿಂಗ್​ ಹೀಗಿದೆ, ಇನ್ನು ಸಿನಿಮಾ ಹೇಗಿರಬಹುದು?

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್