AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಯಡಿಯೂರಪ್ಪ ಬಳಿ ಕನ್ನಡ ಚಿತ್ರರಂಗದ ಪರವಾಗಿ ವಿಶೇಷ ಬೇಡಿಕೆ ಇಟ್ಟ ಕಿಚ್ಚ ಸುದೀಪ್​

ನಟ ಕಿಚ್ಚ ಸುದೀಪ್​ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಭಿನ್ನ ಸಿನಿಮಾಗಳಲ್ಲಿ ನಟಿಸಿ ಸುದೀಪ್​ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್​ ಅವರನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಸನ್ಮಾನ ಮಾಡಿದ್ದಾರೆ. 

ಮುಖ್ಯಮಂತ್ರಿ ಯಡಿಯೂರಪ್ಪ ಬಳಿ ಕನ್ನಡ ಚಿತ್ರರಂಗದ ಪರವಾಗಿ ವಿಶೇಷ ಬೇಡಿಕೆ ಇಟ್ಟ ಕಿಚ್ಚ ಸುದೀಪ್​
ಕಿಚ್ಚ ಸುದೀಪ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
TV9 Web
| Edited By: |

Updated on:Apr 06, 2022 | 7:06 PM

Share

ಬೆಂಗಳೂರು: ಕೊರೊನಾ ಮತ್ತು ಲಾಕ್​ಡೌನ್ ಬಳಿಕ ಥಿಯೇಟರ್​ಗಳನ್ನು ತೆರೆಯಲು ಅವಕಾಶ ನೀಡಿದ್ದಕ್ಕೆ ಹಾಗೂ ಸಿನಿಮಾ ಹಾಲ್​ಗಳಲ್ಲಿ ಶೇ. 100ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಿದ್ದಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಇದೇ ವೇಳೆ ವಿಶೇಷ ಬೇಡಿಕೆ ಒಂದನ್ನು ಇಟ್ಟಿದ್ದಾರೆ. 

ನಟ ಕಿಚ್ಚ ಸುದೀಪ್​ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಭಿನ್ನ ಸಿನಿಮಾಗಳಲ್ಲಿ ನಟಿಸಿ ಸುದೀಪ್​ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್​ ಅವರನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಸನ್ಮಾನ ಮಾಡಿದ್ದಾರೆ. ಸುದೀಪ್ ಸಿನಿ ಬದುಕಿನ 25ನೇ ವರ್ಷದ ಸಮಾರಂಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಹಿತ ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿದ್ದಾರೆ. ಈ ವೇಳೆ ಸುದೀಪ್ ಯಡಿಯೂರಪ್ಪಗೆ ಈ ಮನವಿ ಇಟ್ಟಿದ್ದಾರೆ.

ಸಿನಿಮಾ ಹಾಲ್​ಗಳತ್ತ ಜನರು ಬರಲು ಶುರುಮಾಡಿದ್ದರಿಂದ ಚಿತ್ರರಂಗ ಉಸಿರಾಡುವಂತಾಗಿದೆ. ಸಿನಿಮಾ ಕೆಲಸಗಾರರು ಜೀವನ ನಡೆಸುವಂತಾಗಿದೆ. ಈ ಅವಕಾಶವನ್ನು ಕಿತ್ತುಕೊಳ್ಳಬಾರದು. ಸಿನಿಮಾ ಮಂದಿರಗಳಲ್ಲಿ ಪ್ರೇಕ್ಷಕರ ಮಿತಿಯನ್ನು ಶೇ. 50ಕ್ಕೆ ಇಳಿಸಬಾರದು ಎಂದು ಯಡಿಯೂರಪ್ಪ ಬಳಿ ಸುದೀಪ್ ಕೇಳಿಕೊಂಡಿದ್ದಾರೆ.

ಒಂದೆಡೆ ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಮಹಾರಾಷ್ಟ್ರ, ಕೇರಳದ ಕೆಲವು ಪ್ರದೇಶಗಳಲ್ಲಿ ಲಾಕ್​ಡೌನ್​ನಂಥ ಕಠಿಣ ಕ್ರಮಗಳನ್ನೂ ತೆಗೆದುಕೊಳ್ಳಲಾಗಿದೆ. ಜತೆಗೆ, ಕರ್ನಾಟಕದಲ್ಲಿ ಕೊವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಡುವೆ, ಸಿನಿರಂಗಕ್ಕೆ ಯಾವುದೇ ಸಮಸ್ಯೆ ಉಂಟಾಗಬಾರದು. ನನ್ನ ಸಿನಿಮಾ ಹಾಗೂ ಇತರ ಎಲ್ಲಾ ಸಿನಿಮಾಗಳಿಗೂ ತೊಂದರೆ ಆಗಬಾರದು ಎಂದು ಕೇಳಿಕೊಂಡಿದ್ದಾರೆ.

ಕೊರೊನಾ ಸೋಂಕಿತರ ಪ್ರಮಾಣ ಮತ್ತೆ ಏರುಗತಿಯಲ್ಲಿ ಸಾಗುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತಜ್ಞರ ಜೊತೆ ಸಮಾಲೋಚನಾ ಸಭೆ ನಡೆಸಿದ್ದಾರೆ. ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿರುವ ಮುಖ್ಯಮಂತ್ರಿಗಳು, ಕಳೆದ 14 ದಿನಗಳಲ್ಲಿ ಪಾಸಿಟಿವ್ ರೇಟ್ ಹೆಚ್ಚಾಗಿದೆ. ದೇವರ ದಯೆಯಿಂದ ಮರಣ ಪ್ರಮಾಣ ಕಡಿಮೆ ಇದೆ. ಆದರೆ, ಯಾವುದೇ ಕಾರಣಕ್ಕೂ ಜನ ಮೈಮರೆಯಬಾರದು ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ ನೈಟ್​ಕರ್ಫ್ಯೂ, ಲಾಕ್​ಡೌನ್​ ಅಥವಾ ಸೀಲ್​ಡೌನ್​ ಬಗ್ಗೆ ಸದ್ಯ ಯಾವುದೇ ಚಿಂತನೆ ಇಲ್ಲ ಎಂದಿರುವ ಯಡಿಯೂಪ್ಪ, ಜನರು ಸ್ವತಃ ಜಾಗೃತಿ ವಹಿಸಿ ಅಂತಹ ಕಠಿಣ ನಿರ್ಧಾರ ಕೈಗೊಳ್ಳದಂತೆ ನಡೆದುಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.

ಎರಡನೆ ಅಲೆಯ ಮುನ್ಸೂಚನೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೆಚ್ಚು ಪಾಸಿಟಿವ್ ಇರುವ ಜಿಲ್ಲೆಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸುವುದು, ದೊಡ್ಡ ದೊಡ್ಡ ಅಪಾರ್ಟ್​ಮೆಂಟ್​ಗಳಲ್ಲಿ ಲಸಿಕೆ ನೀಡುವುದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರಿಗೆ ತಕ್ಷಣ ಲಸಿಕೆ ನೀಡುವುದು ಸೇರಿದಂತೆ ಲಸಿಕೆ ವಿತರಣೆ ಕಾರ್ಯವನ್ನು ಚುರುಕುಗೊಳಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Kichcha Sudeep: ನೀವು ಕೊಟ್ಟ ಪ್ರೀತಿ ಎದುರು ಬಾಕ್ಸ್​ ಆಫೀಸ್​ ಗಳಿಕೆ ಏನೂ ಅಲ್ಲ; ಕಿಚ್ಚ ಸುದೀಪ್​

Kichcha Sudeep: ಉಪ್ಪಿ ಹೇಳಿದ್ದನ್ನು ಗಂಭೀರವಾಗಿ ತೆಗೆದುಕೊಂಡಿದ್ದಕ್ಕೇ ನಾನು ಹೀರೋ ಆದೆ: ಸುದೀಪ್

Published On - 9:41 pm, Mon, 15 March 21

Follow Us
Web contact
Web contact

TV9 Kannada

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ