AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ದಿನಕ್ಕೆ 35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಮಾರ್ಕ್’; ದಾಖಲೆ ನಿರ್ಮಾಣ

ಕಿಚ್ಚ ಸುದೀಪ್ ನಟನೆಯ 'ಮ್ಯಾಕ್ಸ್' ಸಿನಿಮಾ ನಾಲ್ಕು ದಿನಗಳಲ್ಲಿ ಬರೋಬ್ಬರಿ 35 ಕೋಟಿ ರೂಪಾಯಿ ಗಳಿಸಿದೆ. ಕ್ರಿಸ್‌ಮಸ್ ರಜೆಗಳ ಲಾಭ ಪಡೆದು, ಮೊದಲ ದಿನ 15 ಕೋಟಿ ಕಲೆಕ್ಷನ್ ಮಾಡಿತ್ತು. ವಿತರಕರು ಇದನ್ನು ಕಮರ್ಷಿಯಲ್ ಹಿಟ್ ಎಂದು ಘೋಷಿಸಿದ್ದು, ಕರ್ನಾಟಕದಾದ್ಯಂತ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಸುದೀಪ್ ಅವರ ಅಭಿಮಾನಿಗಳು ಚಿತ್ರವನ್ನು ಮೆಚ್ಚಿ, ಇದು ಕ್ರಿಸ್‌ಮಸ್ ಬ್ಲಾಕ್‌ಬಸ್ಟರ್ ಎಂದು ಸಂಭ್ರಮಿಸಿದ್ದಾರೆ.

ನಾಲ್ಕು ದಿನಕ್ಕೆ 35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಮಾರ್ಕ್’; ದಾಖಲೆ ನಿರ್ಮಾಣ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Dec 29, 2025 | 3:09 PM

Share

ಕಿಚ್ಚ ಸುದೀಪ್ ಅವರ ‘ಮಾರ್ಕ್’ ಸಿನಿಮಾ (Mark Movie) ಡಿಸೆಂಬರ್ 25ರಂದು ರಿಲೀಸ್ ಆಯಿತು. ಈ ಸಿನಿಮಾ ಮೊದಲ ದಿನ 15 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ವರದಿ ಆಗಿತ್ತು. ಪರೋಕ್ಷವಾಗಿ ಇದನ್ನು ಸುದೀಪ್ ಕೊಡ ಒಪ್ಪಿಕೊಂಡರು. ಈಗ ನಾಲ್ಕು ದಿನದ ಗಳಿಕೆ ಲೆಕ್ಕಾಚಾರವನ್ನು ಚಿತ್ರತಂಡ ನೀಡಿದೆ. ಈ ಸಿನಿಮಾ ನಾಲ್ಕು ದಿನಕ್ಕೆ ಬರೋಬ್ಬರಿ 35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಕ್ರಿಸ್​ಮಸ್ ವಿನ್ನರ್ ಆಗಿ ಸಿನಿಮಾ ಹೊರ ಹೊಮ್ಮಿದೆ.

‘ಮಾರ್ಕ್’ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಕೆಲವೇ ತಿಂಗಳಲ್ಲಿ ಸಿನಿಮಾದ ಕೆಲಸವನ್ನು ಸುದೀಪ್ ಮಾಡಿ ಮುಗಿಸಿದ್ದರು. ಈ ನಿರೀಕ್ಷೆಯನ್ನು ತಲುಪಲು ಸಿನಿಮಾ ಯಶಸ್ವಿಯಾಗಿದೆ. ಈ ಚಿತ್ರ ಎಲ್ಲ ಕಡೆಗಳಿಂದ ಅದ್ಭುತ ಕಲೆಕ್ಷನ್ ಮಾಡುತ್ತಾ ಇದೆ. ಈ ಸಿನಿಮಾ ತಂಡದವರು ‘ಕ್ರಿಸ್ಮಸ್ ಬ್ಲಾಕ್​ಬಸ್ಟರ್’ ಎಂದು ಘೋಷಣೆ ಮಾಡಿದ್ದಾರೆ. ಮೊದಲ ನಾಲ್ಕು ದಿನಕ್ಕೆ ಚಿತ್ರ ಇಷ್ಟು ದೊಡ್ಡ ಮೊತ್ತ ಹರಿದು ಬಂದಿರುವುದು ತಂಡದ ಖುಷಿ ಹೆಚ್ಚಿಸಿದೆ. ಈ ಮೂಲಕ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ.

ಕ್ರಿಸ್​ಮಸ್ ಸಂದರ್ಭದಲ್ಲಿ ಸಿನಿಮಾ ರಿಲೀಸ್ ಮಾಡಿದರೆ ಸಾಲು ಸಾಲು ರಜೆಗಳು ಸಿಗುತ್ತವೆ. ಅನೇಕ ಕಂಪನಿಗಳಿಗೆ ವಾರ ಪೂರ್ತಿ ರಜೆ ಇರುತ್ತದೆ. ಕೆಲ ಶಾಲಾ-ಕಾಲೇಜುಗಳು ಕ್ರಿಸ್​​ಮಸ್ ರಜೆ ಘೋಷಣೆ ಮಾಡುತ್ತವೆ. ಇದು ಸಿನಿಮಾಗೆ ಸಹಕಾರಿ ಆಗಿದೆ. ಶನಿವಾರ ಹಾಗೂ ಭಾನುವಾರ ಮಾತ್ರವಲ್ಲದೆ, ಸೋಮವಾರವೂ ಸಿನಿಮಾಗೆ ಉತ್ತಮ ಬುಕಿಂಗ್ ಇದೆ.

ಸಿನಿಮಾ ವಿತರಕರು ‘ಮಾರ್ಕ್’ ಚಿತ್ರವನ್ನು ಕಮರ್ಷಿಯಲ್ ಹಿಟ್ ಎಂದು ಶ್ಲಾಘಿಸಿದ್ದಾರೆ. ಹಿಂದಿಯಲ್ಲಿ ‘ಧುರಂಧರ್’ ಹಾಗೂ ಹಾಲಿವುಡ್​​ನಲ್ಲಿ ‘ಅವತಾರ್ 3’ ಚಿತ್ರಕ್ಕೆ ಟಕ್ಕರ್ ಕೊಟ್ಟು ದೊಡ್ಡ ಮಟ್ಟದ ಗೆಲುವನ್ನು‌ ಈ ಸಿನಿಮಾ ಕಂಡಿದೆ.

ಇದನ್ನೂ ಓದಿ: ‘ಮಾರ್ಕ್’ ಚಿತ್ರದ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸಿಕ್ತು ಸ್ಪಷ್ಟನೆ

ಬೆಂಗಳೂರು ಮಾತ್ರವಲ್ಲದೆ, ಮೈಸೂರು, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಾಮರಾಜನಗರ ಸೇರಿದಂತೆ ರಾಜ್ಯದ ಅನೇಕ ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸಿನಿಮಾ ಹೌಸ್‌ಫುಲ್ ಪ್ರದರ್ಶನಗಳನ್ನು ಕಂಡಿದೆ. ಕಿಚ್ಚ ಸುದೀಪ್ ಅವರ ಸ್ಟೈಲ್, ಸಿನಿಮಾದಲ್ಲಿನ ಅವರ ಮ್ಯಾನರಿಸಂ ಫ್ಯಾನ್ಸ್​ಗೆ ಇಷ್ಟ ಆಗಿದೆ. ‘ಮ್ಯಾಕ್ಸ್’ ಬಳಿಕ ಮತ್ತೊಮ್ಮೆ ಸುದೀಪ್ ಹಾಗೂ ವಿಜಯ್ ಕಾರ್ತಿಕೇಯ ಜೋಡಿ ಬೆಳ್ಳಿಪರದೆ ಮೇಲೆ‌ ಮೋಡಿ‌ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ