AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಐರನ್ ಲೆಗ್ ಎನ್ನುತ್ತಿದ್ದರು’; ಸುದೀಪ್ ಆರಂಭದಲ್ಲಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ

ಕಿಚ್ಚ ಸುದೀಪ್ ಅವರ ಸೂಪರ್‌ಸ್ಟಾರ್ ಪಯಣ ಸುಲಭವಲ್ಲ. ಆರಂಭದಲ್ಲಿ 'ಐರನ್ ಲೆಗ್' ಮತ್ತು 'ಲತ್ತೆ' ಎಂಬ ಟೀಕೆಗಳನ್ನು ಎದುರಿಸಿದರು. ಹಲವು ಸಿನಿಮಾಗಳು ಯಶಸ್ಸು ಕಾಣಲಿಲ್ಲ. ಧಾರಾವಾಹಿಗಳಲ್ಲಿ ನಟಿಸಿ, ಸಪೋರ್ಟಿಂಗ್ ಪಾತ್ರಗಳ ಮೂಲಕ ಪುಟಿದೆದ್ದರು. 'ಹುಚ್ಚ' ಸಿನಿಮಾ ಯಶಸ್ಸಿನೊಂದಿಗೆ 'ಕಿಚ್ಚ' ಎಂಬ ಬಿರುದು ಪಡೆದು, ತಮ್ಮ ಕಠಿಣ ಪರಿಶ್ರಮದಿಂದ ಸ್ಟಾರ್ ಸ್ಥಾನಕ್ಕೇರಿದರು.

‘ನನ್ನ ಐರನ್ ಲೆಗ್ ಎನ್ನುತ್ತಿದ್ದರು’; ಸುದೀಪ್ ಆರಂಭದಲ್ಲಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ
ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 04, 2025 | 8:03 AM

Share

ಸೂಪರ್ ಸ್ಟಾರ್ ಆದ ಪ್ರತಿ ಹೀರೋಗಳ ಹಿಂದೆ ಒಂದು ಶ್ರಮ ಇರುತ್ತದೆ. ಆ ಶ್ರಮ ಎಲ್ಲರಿಗೂ ಕಾಣಿಸಿರೋದಿಲ್ಲ. ಕೆಲವರು ಇದನ್ನು ಹೇಳಿಕೊಂಡರೆ, ಇನ್ನೂ ಕೆಲವರು ಮೌನ ವಹಿಸುತ್ತಾರೆ. ಕಿಚ್ಚ ಸುದೀಪ್ ಅವರು ಇಂದು ಸ್ಟಾರ್ ಹೀರೋ. ಅವರು ಮಾಡಿದ ಸಾಧನೆ ತುಂಬಾನೇ ದೊಡ್ಡದು. ಆದರೆ, ಮೊದಲು ಅವರು ಈ ರೀತಿ ಇರಲಿಲ್ಲ. ಅವರು ತುಂಬಾನೇ ಕಷ್ಟಪಟ್ಟಿದ್ದರು. ಈ ಬಗ್ಗೆ ಸುದೀಪ್ ಅವರೇ ಮೊದಲು ಹೇಳಿಕೊಂಡಿದ್ದರು. ಅವರನ್ನು ಅನೇಕರು ಲತ್ತೆ ಎಂದು ಕರೆಯುತ್ತಿದ್ದರಂತೆ.

ತಮಿಳಿನ ಸಂದರ್ಶನ ಒಂದರಲ್ಲಿ ಸುದೀಪ್ ಮಾತನಾಡಿದ್ದರು. ‘ಎರಡು ಸಿನಿಮಾ ಒಪ್ಪಿಕೊಂಡೆ ಎರಡೂ ಸೆಟ್ಟೇರಿಲ್ಲ. ಮೂರನೇ ಸಿನಿಮಾ ಮಾಡಿದೆ, ಯಶಸ್ಸು ಕಾಣಲಿಲ್ಲ. ಆ ಸಮಯದಲ್ಲಿ ಐರನ್ ಲೆಗ್ ಎಂದರು. ನನಗೆ ಅದರ ಅರ್ಥವೇ ಗೊತ್ತಿರಲಿಲ್ಲ. ಆಮೇಲೆ ಯಾರೋ ಬಂದು ಲತ್ತೆ ಎಂಬ ಅರ್ಥ ಇದೆ ಎಂದರು. ಐರನ್ ಎಂದರೆ ಸ್ಟ್ರಾಂಗ್ ಅಲ್ಲವೇ ಎಂದು ಕೇಳಿದೆ. ಆಗ ಅವರು ಹಾಗಲ್ಲ ಎಂದರು. ಆಗ ಏನು ಮಾಡಬೇಕು ಎಂಬ ಪ್ರಶ್ನೆ ಮೂಡಿತು’ ಎಂದಿದ್ದರು ಸುದೀಪ್.

‘ಆಗ ನಾನು ಧಾರಾವಾಹಿ ಮಾಡಿದೆ. ಮರಳಿ ಬಂದು ಸಪೋರ್ಟಿಂಗ್ ಪಾತ್ರ ಮಾಡಿದೆ. ಆಗ ಸುನಿಲ್ ದೇಸಾಯಿ ಅವರು ಸಿಕ್ಕರು. ಅವರ ನಿರ್ದೇಶನದ ಸಿನಿಮಾದಲ್ಲಿ ನಟಿಸಿದೆ. ಸಿನಿಮಾ ಒಳ್ಳೆಯ ಹಿಟ್ ಆಯಿತು. ಆದರೆ, ಕೆಲವೇ ದಿನಗಳಲ್ಲಿ ರಾಜ್​ಕುಮಾರ್ ಅಪಹರಣ ಆದರು. ಥಿಯೇಟರ್ ಕ್ಲೋಸ್ ಆಯಿತು. ಮತ್ತೆ ಬಂತು ಐರನ್ ಲೆಗ್’ ಎಂದಿದ್ದರು ಕಿಚ್ಚ.

ಇದನ್ನೂ ಓದಿ: ಗಿಲ್ಲಿಯಷ್ಟು ಅಮಾಯಕ ಯಾರೂ ಇಲ್ಲ: ಕಾವ್ಯ ವಿಚಾರಕ್ಕೆ ಕಾಲೆಳೆದ ಕಿಚ್ಚ ಸುದೀಪ್

‘ಹುಚ್ಚ ಸಿನಿಮಾ ರಿಲೀಸ್ ಆಯಿತು. ಥಿಯೇಟರ್​ಗೆ ಹೋದೆ ಕೆಲವೇ ಮಂದಿ ಇದ್ದರು. ಆಲ್​ ದಿ ಬೆಸ್ಟ್ ಎಂದರು. ನಾನು ಅಲ್ಲಿಂದ ಹೋದೆ. ಬೇಸರ ಆಗ್ತಾ ಇತ್ತು. ಆ ಬಳಿಕ ಸಿನಿಮಾ ಹೌಸ್​ಫುಲ್ ಆಗೋಕೆ ಪ್ರಾರಂಭ ಆಯ್ತು. ನಾನು ಥಿಯೇಟರ್​ನಲ್ಲಿ ಬಂದಾಗ ಕಿಚ್ಚ ಎಂದು ಕೂಗಿದರು. ನನ್ನ ಹೆಸರು ಆಗ ಯಾರಿಗೂ ಗೊತ್ತಿರಲಿಲ್ಲ. ಅಲ್ಲಿಂದ ಕಿಚ್ಚ ಬಿರುದು ಬಂತು’ ಎಂದು ಸುದೀಪ್ ಅವರು ವಿವರಣೆ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:57 am, Tue, 4 November 25

Follow Us
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್