AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಐರನ್ ಲೆಗ್ ಎನ್ನುತ್ತಿದ್ದರು’; ಸುದೀಪ್ ಆರಂಭದಲ್ಲಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ

ಕಿಚ್ಚ ಸುದೀಪ್ ಅವರ ಸೂಪರ್‌ಸ್ಟಾರ್ ಪಯಣ ಸುಲಭವಲ್ಲ. ಆರಂಭದಲ್ಲಿ 'ಐರನ್ ಲೆಗ್' ಮತ್ತು 'ಲತ್ತೆ' ಎಂಬ ಟೀಕೆಗಳನ್ನು ಎದುರಿಸಿದರು. ಹಲವು ಸಿನಿಮಾಗಳು ಯಶಸ್ಸು ಕಾಣಲಿಲ್ಲ. ಧಾರಾವಾಹಿಗಳಲ್ಲಿ ನಟಿಸಿ, ಸಪೋರ್ಟಿಂಗ್ ಪಾತ್ರಗಳ ಮೂಲಕ ಪುಟಿದೆದ್ದರು. 'ಹುಚ್ಚ' ಸಿನಿಮಾ ಯಶಸ್ಸಿನೊಂದಿಗೆ 'ಕಿಚ್ಚ' ಎಂಬ ಬಿರುದು ಪಡೆದು, ತಮ್ಮ ಕಠಿಣ ಪರಿಶ್ರಮದಿಂದ ಸ್ಟಾರ್ ಸ್ಥಾನಕ್ಕೇರಿದರು.

‘ನನ್ನ ಐರನ್ ಲೆಗ್ ಎನ್ನುತ್ತಿದ್ದರು’; ಸುದೀಪ್ ಆರಂಭದಲ್ಲಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ
ಸುದೀಪ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Nov 04, 2025 | 8:03 AM

Share

ಸೂಪರ್ ಸ್ಟಾರ್ ಆದ ಪ್ರತಿ ಹೀರೋಗಳ ಹಿಂದೆ ಒಂದು ಶ್ರಮ ಇರುತ್ತದೆ. ಆ ಶ್ರಮ ಎಲ್ಲರಿಗೂ ಕಾಣಿಸಿರೋದಿಲ್ಲ. ಕೆಲವರು ಇದನ್ನು ಹೇಳಿಕೊಂಡರೆ, ಇನ್ನೂ ಕೆಲವರು ಮೌನ ವಹಿಸುತ್ತಾರೆ. ಕಿಚ್ಚ ಸುದೀಪ್ ಅವರು ಇಂದು ಸ್ಟಾರ್ ಹೀರೋ. ಅವರು ಮಾಡಿದ ಸಾಧನೆ ತುಂಬಾನೇ ದೊಡ್ಡದು. ಆದರೆ, ಮೊದಲು ಅವರು ಈ ರೀತಿ ಇರಲಿಲ್ಲ. ಅವರು ತುಂಬಾನೇ ಕಷ್ಟಪಟ್ಟಿದ್ದರು. ಈ ಬಗ್ಗೆ ಸುದೀಪ್ ಅವರೇ ಮೊದಲು ಹೇಳಿಕೊಂಡಿದ್ದರು. ಅವರನ್ನು ಅನೇಕರು ಲತ್ತೆ ಎಂದು ಕರೆಯುತ್ತಿದ್ದರಂತೆ.

ತಮಿಳಿನ ಸಂದರ್ಶನ ಒಂದರಲ್ಲಿ ಸುದೀಪ್ ಮಾತನಾಡಿದ್ದರು. ‘ಎರಡು ಸಿನಿಮಾ ಒಪ್ಪಿಕೊಂಡೆ ಎರಡೂ ಸೆಟ್ಟೇರಿಲ್ಲ. ಮೂರನೇ ಸಿನಿಮಾ ಮಾಡಿದೆ, ಯಶಸ್ಸು ಕಾಣಲಿಲ್ಲ. ಆ ಸಮಯದಲ್ಲಿ ಐರನ್ ಲೆಗ್ ಎಂದರು. ನನಗೆ ಅದರ ಅರ್ಥವೇ ಗೊತ್ತಿರಲಿಲ್ಲ. ಆಮೇಲೆ ಯಾರೋ ಬಂದು ಲತ್ತೆ ಎಂಬ ಅರ್ಥ ಇದೆ ಎಂದರು. ಐರನ್ ಎಂದರೆ ಸ್ಟ್ರಾಂಗ್ ಅಲ್ಲವೇ ಎಂದು ಕೇಳಿದೆ. ಆಗ ಅವರು ಹಾಗಲ್ಲ ಎಂದರು. ಆಗ ಏನು ಮಾಡಬೇಕು ಎಂಬ ಪ್ರಶ್ನೆ ಮೂಡಿತು’ ಎಂದಿದ್ದರು ಸುದೀಪ್.

‘ಆಗ ನಾನು ಧಾರಾವಾಹಿ ಮಾಡಿದೆ. ಮರಳಿ ಬಂದು ಸಪೋರ್ಟಿಂಗ್ ಪಾತ್ರ ಮಾಡಿದೆ. ಆಗ ಸುನಿಲ್ ದೇಸಾಯಿ ಅವರು ಸಿಕ್ಕರು. ಅವರ ನಿರ್ದೇಶನದ ಸಿನಿಮಾದಲ್ಲಿ ನಟಿಸಿದೆ. ಸಿನಿಮಾ ಒಳ್ಳೆಯ ಹಿಟ್ ಆಯಿತು. ಆದರೆ, ಕೆಲವೇ ದಿನಗಳಲ್ಲಿ ರಾಜ್​ಕುಮಾರ್ ಅಪಹರಣ ಆದರು. ಥಿಯೇಟರ್ ಕ್ಲೋಸ್ ಆಯಿತು. ಮತ್ತೆ ಬಂತು ಐರನ್ ಲೆಗ್’ ಎಂದಿದ್ದರು ಕಿಚ್ಚ.

ಇದನ್ನೂ ಓದಿ: ಗಿಲ್ಲಿಯಷ್ಟು ಅಮಾಯಕ ಯಾರೂ ಇಲ್ಲ: ಕಾವ್ಯ ವಿಚಾರಕ್ಕೆ ಕಾಲೆಳೆದ ಕಿಚ್ಚ ಸುದೀಪ್

‘ಹುಚ್ಚ ಸಿನಿಮಾ ರಿಲೀಸ್ ಆಯಿತು. ಥಿಯೇಟರ್​ಗೆ ಹೋದೆ ಕೆಲವೇ ಮಂದಿ ಇದ್ದರು. ಆಲ್​ ದಿ ಬೆಸ್ಟ್ ಎಂದರು. ನಾನು ಅಲ್ಲಿಂದ ಹೋದೆ. ಬೇಸರ ಆಗ್ತಾ ಇತ್ತು. ಆ ಬಳಿಕ ಸಿನಿಮಾ ಹೌಸ್​ಫುಲ್ ಆಗೋಕೆ ಪ್ರಾರಂಭ ಆಯ್ತು. ನಾನು ಥಿಯೇಟರ್​ನಲ್ಲಿ ಬಂದಾಗ ಕಿಚ್ಚ ಎಂದು ಕೂಗಿದರು. ನನ್ನ ಹೆಸರು ಆಗ ಯಾರಿಗೂ ಗೊತ್ತಿರಲಿಲ್ಲ. ಅಲ್ಲಿಂದ ಕಿಚ್ಚ ಬಿರುದು ಬಂತು’ ಎಂದು ಸುದೀಪ್ ಅವರು ವಿವರಣೆ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:57 am, Tue, 4 November 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!