AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಯಡಿಯೂರಪ್ಪ ನಿವಾಸಕ್ಕೆ ತೆರಳಿದ ಕಿಚ್ಚ ಸುದೀಪ್​! ದಿಢೀರ್ ಭೇಟಿಗೆ ಕಾರಣ ಏನು?

ಕಿಚ್ಚ ಸುದೀಪ್​ ರಾಜಕೀಯದಿಂದ ಆದಷ್ಟು ದೂರು ಉಳಿದುಕೊಂಡಿದ್ದಾರೆ. ಆದರೆ ಈಗ ಅವರು ದಿಢೀರ್​ ಅಂತ ಸಿಎಂ ಮನೆಗೆ ಭೇಟಿ ನೀಡಿರುವುದು ಅಚ್ಚರಿ ಮೂಡಿಸಿದೆ.

ಸಿಎಂ ಯಡಿಯೂರಪ್ಪ ನಿವಾಸಕ್ಕೆ ತೆರಳಿದ ಕಿಚ್ಚ ಸುದೀಪ್​! ದಿಢೀರ್ ಭೇಟಿಗೆ ಕಾರಣ ಏನು?
ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಸುದೀಪ್​
ಮದನ್​ ಕುಮಾರ್​
| Edited By: |

Updated on:Mar 18, 2021 | 3:31 PM

Share

ಚಿತ್ರರಂಗದಲ್ಲಿ ನಟ ಕಿಚ್ಚ ಸುದೀಪ್​ ಸಖತ್​ ಬ್ಯುಸಿ ಆಗಿದ್ದಾರೆ. ಅವರು ಇತ್ತೀಚೆಗಷ್ಟೇ ಬಣ್ಣದ ಲೋಕದಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ. ಈ ನಡುವೆ ರಾಜಕೀಯದ ಬಗ್ಗೆ ಅವರು ಗಮನ ಹರಿಸುತ್ತಿದ್ದಾರಾ? ಹಾಗೇನೂ ಇಲ್ಲ. ಆದರೂ ಕೂಡ ಅವರು ಸಿಎಂ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿರುವ ವಿಚಾರ ಹೆಚ್ಚು ಚರ್ಚೆ ಆಗುತ್ತಿದೆ. ಫೋಟೋಗಳು ವೈರಲ್​ ಆಗಿವೆ.

ಗುರುವಾರ (ಮಾ.18) ಸಿಎಂ ಕಾವೇರಿ ನಿವಾಸಕ್ಕೆ ತೆರಳಿದ ಸುದೀಪ್​ ಅವರು ಯಡಿಯೂರಪ್ಪ ಅವರನ್ನು ಭೇಟಿ ಆಗಿದ್ದಾರೆ. ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಮುಖ್ಯಮಂತ್ರಿಗಳನ್ನು ಕಿಚ್ಚ ಸನ್ಮಾನಿಸಿದ್ದಾರೆ. ಈ ಫೋಟೋಗಳು ಸುದೀಪ್​ ಅಭಿಮಾನಿಗಳ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹರಿದಾಡುತ್ತಿವೆ. ಅಷ್ಟಕ್ಕೂ ಸುದೀಪ್​ ಹೀಗೆ ದಿಢೀರ್​ ಎಂದು ಸಿಎಂ ಭೇಟಿ ಮಾಡಿದ್ದೇಕೆ ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ.

ಕಾರಣ ಇಷ್ಟೇ, ಇತ್ತೀಚೆಗಷ್ಟೇ ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ‘ಕೋಟಿಗೊಬ್ಬ 3’ ಸಿನಿಮಾ ತಂಡದಿಂದ ದೊಡ್ಡ ಸಮಾರಂಭ ಮಾಡಲಾಗಿತ್ತು. ಚಿತ್ರರಂಗದಲ್ಲಿ ಸುದೀಪ್​ 25 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಮುಖ್ಯಮಂತ್ರಿಗಳಿಂದ ಸನ್ಮಾನ ಮಾಡಿಸಲಾಯಿತು. ಆ ವೇಳೆ ತಮ್ಮ ನಿವಾಸಕ್ಕೆ ಬರುವಂತೆ ಸುದೀಪ್​ಗೆ ಸಿಎಂ ಆಹ್ವಾನ ನೀಡಿದ್ದರು ಎನ್ನಲಾಗಿದೆ. ಹಾಗಾಗಿ ಸುದೀಪ್​ ಗುರುವಾರ ಬೆಳಗ್ಗೆ ಸಿಎಂ ಕಾವೇರಿ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ.

ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏ.29ರಂದು ಅದ್ದೂರಿಯಾಗಿ ರಿಲೀಸ್​ ಆಗಲಿದೆ. ಅದರ ಜೊತೆಗೆ ‘ವಿಕ್ರಾಂತ್​ ರೋಣ’ ಸಿನಿಮಾದ ಕೆಲಸಗಳಲ್ಲೂ ಸುದೀಪ್​ ಬ್ಯುಸಿ ಆಗಿದ್ದಾರೆ. ಅನೂಪ್​ ಭಂಡಾರಿ ನಿರ್ದೇಶನ ಮಾಡುತ್ತಿರುವ ಆ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಸಿನಿಮಾ ಮಾತ್ರವಲ್ಲದೆ, ಬಿಗ್​ ಬಾಸ್​ ಕನ್ನಡ ಸೀಸನ್​ 8 ನಿರೂಪಣೆಯ ಜವಾಬ್ದಾರಿಯನ್ನೂ ಸುದೀಪ್​ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ.

Kichcha Sudeeep meets CM BS Yediyurappa

ಯಡಿಯೂರಪ್ಪ ಅವರನ್ನು ಸನ್ಮಾನಿಸಿದ ಸುದೀಪ್​

ಇದನ್ನೂ ಓದಿ: ರವಿಚಂದ್ರನ್​ ಸದಾ ಕಪ್ಪು ಬಟ್ಟೆ ಹಾಕೋದು ಯಾಕೆ? ಎಲ್ಲರ ಎದುರು ಗುಟ್ಟು ರಟ್ಟು ಮಾಡಿದ ಸುದೀಪ್​!

ಮುಖ್ಯಮಂತ್ರಿ ಯಡಿಯೂರಪ್ಪ ಬಳಿ ಕನ್ನಡ ಚಿತ್ರರಂಗದ ಪರವಾಗಿ ವಿಶೇಷ ಬೇಡಿಕೆ ಇಟ್ಟ ಕಿಚ್ಚ ಸುದೀಪ್​

Published On - 3:23 pm, Thu, 18 March 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್