AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಯಡಿಯೂರಪ್ಪ ನಿವಾಸಕ್ಕೆ ತೆರಳಿದ ಕಿಚ್ಚ ಸುದೀಪ್​! ದಿಢೀರ್ ಭೇಟಿಗೆ ಕಾರಣ ಏನು?

ಕಿಚ್ಚ ಸುದೀಪ್​ ರಾಜಕೀಯದಿಂದ ಆದಷ್ಟು ದೂರು ಉಳಿದುಕೊಂಡಿದ್ದಾರೆ. ಆದರೆ ಈಗ ಅವರು ದಿಢೀರ್​ ಅಂತ ಸಿಎಂ ಮನೆಗೆ ಭೇಟಿ ನೀಡಿರುವುದು ಅಚ್ಚರಿ ಮೂಡಿಸಿದೆ.

ಸಿಎಂ ಯಡಿಯೂರಪ್ಪ ನಿವಾಸಕ್ಕೆ ತೆರಳಿದ ಕಿಚ್ಚ ಸುದೀಪ್​! ದಿಢೀರ್ ಭೇಟಿಗೆ ಕಾರಣ ಏನು?
ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಸುದೀಪ್​
ಮದನ್​ ಕುಮಾರ್​
| Edited By: |

Updated on:Mar 18, 2021 | 3:31 PM

Share

ಚಿತ್ರರಂಗದಲ್ಲಿ ನಟ ಕಿಚ್ಚ ಸುದೀಪ್​ ಸಖತ್​ ಬ್ಯುಸಿ ಆಗಿದ್ದಾರೆ. ಅವರು ಇತ್ತೀಚೆಗಷ್ಟೇ ಬಣ್ಣದ ಲೋಕದಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ. ಈ ನಡುವೆ ರಾಜಕೀಯದ ಬಗ್ಗೆ ಅವರು ಗಮನ ಹರಿಸುತ್ತಿದ್ದಾರಾ? ಹಾಗೇನೂ ಇಲ್ಲ. ಆದರೂ ಕೂಡ ಅವರು ಸಿಎಂ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿರುವ ವಿಚಾರ ಹೆಚ್ಚು ಚರ್ಚೆ ಆಗುತ್ತಿದೆ. ಫೋಟೋಗಳು ವೈರಲ್​ ಆಗಿವೆ.

ಗುರುವಾರ (ಮಾ.18) ಸಿಎಂ ಕಾವೇರಿ ನಿವಾಸಕ್ಕೆ ತೆರಳಿದ ಸುದೀಪ್​ ಅವರು ಯಡಿಯೂರಪ್ಪ ಅವರನ್ನು ಭೇಟಿ ಆಗಿದ್ದಾರೆ. ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಮುಖ್ಯಮಂತ್ರಿಗಳನ್ನು ಕಿಚ್ಚ ಸನ್ಮಾನಿಸಿದ್ದಾರೆ. ಈ ಫೋಟೋಗಳು ಸುದೀಪ್​ ಅಭಿಮಾನಿಗಳ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹರಿದಾಡುತ್ತಿವೆ. ಅಷ್ಟಕ್ಕೂ ಸುದೀಪ್​ ಹೀಗೆ ದಿಢೀರ್​ ಎಂದು ಸಿಎಂ ಭೇಟಿ ಮಾಡಿದ್ದೇಕೆ ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ.

ಕಾರಣ ಇಷ್ಟೇ, ಇತ್ತೀಚೆಗಷ್ಟೇ ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ‘ಕೋಟಿಗೊಬ್ಬ 3’ ಸಿನಿಮಾ ತಂಡದಿಂದ ದೊಡ್ಡ ಸಮಾರಂಭ ಮಾಡಲಾಗಿತ್ತು. ಚಿತ್ರರಂಗದಲ್ಲಿ ಸುದೀಪ್​ 25 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಮುಖ್ಯಮಂತ್ರಿಗಳಿಂದ ಸನ್ಮಾನ ಮಾಡಿಸಲಾಯಿತು. ಆ ವೇಳೆ ತಮ್ಮ ನಿವಾಸಕ್ಕೆ ಬರುವಂತೆ ಸುದೀಪ್​ಗೆ ಸಿಎಂ ಆಹ್ವಾನ ನೀಡಿದ್ದರು ಎನ್ನಲಾಗಿದೆ. ಹಾಗಾಗಿ ಸುದೀಪ್​ ಗುರುವಾರ ಬೆಳಗ್ಗೆ ಸಿಎಂ ಕಾವೇರಿ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ.

ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏ.29ರಂದು ಅದ್ದೂರಿಯಾಗಿ ರಿಲೀಸ್​ ಆಗಲಿದೆ. ಅದರ ಜೊತೆಗೆ ‘ವಿಕ್ರಾಂತ್​ ರೋಣ’ ಸಿನಿಮಾದ ಕೆಲಸಗಳಲ್ಲೂ ಸುದೀಪ್​ ಬ್ಯುಸಿ ಆಗಿದ್ದಾರೆ. ಅನೂಪ್​ ಭಂಡಾರಿ ನಿರ್ದೇಶನ ಮಾಡುತ್ತಿರುವ ಆ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಸಿನಿಮಾ ಮಾತ್ರವಲ್ಲದೆ, ಬಿಗ್​ ಬಾಸ್​ ಕನ್ನಡ ಸೀಸನ್​ 8 ನಿರೂಪಣೆಯ ಜವಾಬ್ದಾರಿಯನ್ನೂ ಸುದೀಪ್​ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ.

Kichcha Sudeeep meets CM BS Yediyurappa

ಯಡಿಯೂರಪ್ಪ ಅವರನ್ನು ಸನ್ಮಾನಿಸಿದ ಸುದೀಪ್​

ಇದನ್ನೂ ಓದಿ: ರವಿಚಂದ್ರನ್​ ಸದಾ ಕಪ್ಪು ಬಟ್ಟೆ ಹಾಕೋದು ಯಾಕೆ? ಎಲ್ಲರ ಎದುರು ಗುಟ್ಟು ರಟ್ಟು ಮಾಡಿದ ಸುದೀಪ್​!

ಮುಖ್ಯಮಂತ್ರಿ ಯಡಿಯೂರಪ್ಪ ಬಳಿ ಕನ್ನಡ ಚಿತ್ರರಂಗದ ಪರವಾಗಿ ವಿಶೇಷ ಬೇಡಿಕೆ ಇಟ್ಟ ಕಿಚ್ಚ ಸುದೀಪ್​

Published On - 3:23 pm, Thu, 18 March 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?