AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiccha 46 Teaser: ‘ನಾನು ಮನುಷ್ಯ ಅಲ್ಲ, ರಾಕ್ಷಸ’: ‘ಕಿಚ್ಚ 46’ ಟೀಸರ್​ನಲ್ಲಿ ಸುದೀಪ್​ ಆರ್ಭಟ

Kichcha Sudeep: ಸುದೀಪ್​ ಅವರ ಹೊಸ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ‘ಕಿಚ್ಚ 46’ ಟೀಸರ್​ ನೋಡಲು ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಕಾದಿದ್ದರು.

Kiccha 46 Teaser: ‘ನಾನು ಮನುಷ್ಯ ಅಲ್ಲ, ರಾಕ್ಷಸ’: ‘ಕಿಚ್ಚ 46’ ಟೀಸರ್​ನಲ್ಲಿ ಸುದೀಪ್​ ಆರ್ಭಟ
ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on:Jul 02, 2023 | 12:15 PM

Share

ಕಿಚ್ಚ ಸುದೀಪ್​ (Kichcha Sudeep) ಅವರ 46ನೇ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಡಬಲ್​ ಮಾಡುವ ರೀತಿಯಲ್ಲಿ ಟೀಸರ್​ ಬಿಡುಗಡೆ ಮಾಡಲಾಗಿದೆ. ‘ವಿಕ್ರಾಂತ ರೋಣ’ ಸಿನಿಮಾ ಬಳಿಕ ಸುದೀಪ್​ ಅವರು ಒಪ್ಪಿಕೊಂಡ ಚಿತ್ರ ಇದು. ಈ ಸಿನಿಮಾಗೆ ‘ವಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಕಲೈಪುಲಿ ಎಸ್​. ಧಾನು (Kalaippuli S Thanu) ಅವರು ಬಂಡವಾಳ ಹೂಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರ ಸೆಟ್ಟೇರಿತು. ಪ್ರೊಮೋ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರ ಬಗ್ಗೆ ಕಿಚ್ಚ ಸುದೀಪ್​ ಅವರು ಅಪ್​ಡೇಟ್​ ನೀಡಿದ್ದರು. ಈಗ ಟೀಸರ್​ ರಿಲೀಸ್​ ಆಗಿ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ #Kichcha46 ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ. ಸುದೀಪ್​ ಅಭಿಮಾನಿಗಳ ವಲಯದಲ್ಲಿ ಈ ಟೀಸರ್​ (Kiccha 46 Teaser) ವೈರಲ್​ ಆಗಿದೆ.

‘ಕಿಚ್ಚ 46’ ಚಿತ್ರದ ಟೀಸರ್​ ನೋಡಲು ಅಭಿಮಾನಿಗಳು ಮಾತ್ರವಲ್ಲದೇ ಚಂದನವನದ ಅನೇಕ ಸೆಲೆಬ್ರಿಟಿಗಳು ಕೂಡ ಕಾದಿದ್ದರು. ಡಾಲಿ ಧನಂಜಯ್​, ನಿರೂಪ್​ ಭಂಡಾರಿ, ವಾಸುಕಿ ವೈಭವ್​, ಸಪ್ತಮಿ ಗೌಡ, ಅನೂಪ್​ ಭಂಡಾರಿ, ಡಾರ್ಲಿಂಗ್​ ಕೃಷ್ಣ, ಅಮೃತಾ ಅಯ್ಯಂಗಾರ್​, ನವೀನ್​ ಶಂಕರ್​ ಮುಂತಾದವರು ಪ್ರೊಮೋಷನಲ್​ ವಿಡಿಯೋದಲ್ಲಿ ಕಾಣಿಸಿಕೊಂಡು ಕೌತುಕ ಹೆಚ್ಚಿಸಿದ್ದರು.

ಹಲವು ಪ್ರಾಜೆಕ್ಟ್​ಗಳಿಗೆ ಕಿಚ್ಚ ಸುದೀಪ್​ ಅವರು ಗ್ರೀನ್​ ಸಿಗ್ನಲ್​ ನೀಡಿದ್ದಾರೆ. ಮೂರು ಬ್ಯಾಕ್​ ಟು ಬ್ಯಾಕ್​ ಸಿನಿಮಾವನ್ನು ಒಪ್ಪಿಕೊಂಡಿರುವುದಾಗಿ ತಿಳಿಸುವ ಮೂಲಕ ಅವರು ಅಭಿಮಾನಿಗಳಿಗೆ ಗುಡ್​ ನ್ಯೂಸ್​ ನೀಡಿದ್ದರು. ಆ ಚಿತ್ರಗಳಲ್ಲಿ ಮೊದಲು ಸೆಟ್ಟೇರಿರುವುದು ‘ವಿ ಕ್ರಿಯೇಷನ್ಸ್​’ ಜೊತೆಗಿನ ಸಿನಿಮಾ. ಹಲವು ಕಾರಣಗಳಿಂದಾಗಿ ಈ ಚಿತ್ರ ವಿಶೇಷ ಎನಿಸಿಕೊಂಡಿದೆ.

ಇದನ್ನೂ ಓದಿ: ಜೂ ಕಿಚ್ಚನ ಪರಿಚಯಿಸಿದ ಶಿವರಾಜ್ ಕುಮಾರ್ ಮತ್ತು ರವಿಚಂದ್ರನ್

ತುಂಬ ರಗಡ್​ ಆಗಿ ‘ಕಿಚ್ಚ 46’ ಟೀಸರ್​ ಮೂಡಿಬಂದಿದೆ. ಈ ಸಿನಿಮಾದ ಮೇಕಿಂಗ್​ ಕ್ವಾಲಿಟಿ ಬಗ್ಗೆ ಕೆಲವರಿಗೆ ಅನುಮಾನ ಇತ್ತು. ಅದಕ್ಕೆ ತಕ್ಕ ಉತ್ತರ ನೀಡುವ ರೀತಿಯಲ್ಲಿ, ಬಹಳ ಅದ್ದೂರಿಯಾಗಿ ಟೀಸರ್​ ಚಿತ್ರೀಕರಿಸಲಾಗಿದೆ. ಇದರಲ್ಲಿನ ಡೈಲಾಗ್​ಗಳು ಗಮನ ಸೆಳೆಯುತ್ತಿವೆ. ‘ನಾನು ಯುದ್ಧಕ್ಕೆ ಇಳಿದ ಮೇಲೆ ದಯೆ, ಕ್ಷಮೆ, ಸಂಧಾನ ಇದು ಯಾವುದೂ ಇರೋದಿಲ್ಲ. ನಾನು ಮನುಷ್ಯ ಅಲ್ಲ. ನಾನು ರಾಕ್ಷಸ’ ಎಂದು ಟೀಸರ್​ನ ಕೊನೆಯಲ್ಲಿ ಸುದೀಪ್​ ಹೇಳುವ ಡೈಲಾಗ್​ ಟ್ರೆಂಡ್​ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:09 pm, Sun, 2 July 23

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?