AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiccha 46 Teaser: ‘ನಾನು ಮನುಷ್ಯ ಅಲ್ಲ, ರಾಕ್ಷಸ’: ‘ಕಿಚ್ಚ 46’ ಟೀಸರ್​ನಲ್ಲಿ ಸುದೀಪ್​ ಆರ್ಭಟ

Kichcha Sudeep: ಸುದೀಪ್​ ಅವರ ಹೊಸ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ‘ಕಿಚ್ಚ 46’ ಟೀಸರ್​ ನೋಡಲು ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಕಾದಿದ್ದರು.

Kiccha 46 Teaser: ‘ನಾನು ಮನುಷ್ಯ ಅಲ್ಲ, ರಾಕ್ಷಸ’: ‘ಕಿಚ್ಚ 46’ ಟೀಸರ್​ನಲ್ಲಿ ಸುದೀಪ್​ ಆರ್ಭಟ
ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on:Jul 02, 2023 | 12:15 PM

Share

ಕಿಚ್ಚ ಸುದೀಪ್​ (Kichcha Sudeep) ಅವರ 46ನೇ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಡಬಲ್​ ಮಾಡುವ ರೀತಿಯಲ್ಲಿ ಟೀಸರ್​ ಬಿಡುಗಡೆ ಮಾಡಲಾಗಿದೆ. ‘ವಿಕ್ರಾಂತ ರೋಣ’ ಸಿನಿಮಾ ಬಳಿಕ ಸುದೀಪ್​ ಅವರು ಒಪ್ಪಿಕೊಂಡ ಚಿತ್ರ ಇದು. ಈ ಸಿನಿಮಾಗೆ ‘ವಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಕಲೈಪುಲಿ ಎಸ್​. ಧಾನು (Kalaippuli S Thanu) ಅವರು ಬಂಡವಾಳ ಹೂಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರ ಸೆಟ್ಟೇರಿತು. ಪ್ರೊಮೋ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರ ಬಗ್ಗೆ ಕಿಚ್ಚ ಸುದೀಪ್​ ಅವರು ಅಪ್​ಡೇಟ್​ ನೀಡಿದ್ದರು. ಈಗ ಟೀಸರ್​ ರಿಲೀಸ್​ ಆಗಿ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ #Kichcha46 ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ. ಸುದೀಪ್​ ಅಭಿಮಾನಿಗಳ ವಲಯದಲ್ಲಿ ಈ ಟೀಸರ್​ (Kiccha 46 Teaser) ವೈರಲ್​ ಆಗಿದೆ.

‘ಕಿಚ್ಚ 46’ ಚಿತ್ರದ ಟೀಸರ್​ ನೋಡಲು ಅಭಿಮಾನಿಗಳು ಮಾತ್ರವಲ್ಲದೇ ಚಂದನವನದ ಅನೇಕ ಸೆಲೆಬ್ರಿಟಿಗಳು ಕೂಡ ಕಾದಿದ್ದರು. ಡಾಲಿ ಧನಂಜಯ್​, ನಿರೂಪ್​ ಭಂಡಾರಿ, ವಾಸುಕಿ ವೈಭವ್​, ಸಪ್ತಮಿ ಗೌಡ, ಅನೂಪ್​ ಭಂಡಾರಿ, ಡಾರ್ಲಿಂಗ್​ ಕೃಷ್ಣ, ಅಮೃತಾ ಅಯ್ಯಂಗಾರ್​, ನವೀನ್​ ಶಂಕರ್​ ಮುಂತಾದವರು ಪ್ರೊಮೋಷನಲ್​ ವಿಡಿಯೋದಲ್ಲಿ ಕಾಣಿಸಿಕೊಂಡು ಕೌತುಕ ಹೆಚ್ಚಿಸಿದ್ದರು.

ಹಲವು ಪ್ರಾಜೆಕ್ಟ್​ಗಳಿಗೆ ಕಿಚ್ಚ ಸುದೀಪ್​ ಅವರು ಗ್ರೀನ್​ ಸಿಗ್ನಲ್​ ನೀಡಿದ್ದಾರೆ. ಮೂರು ಬ್ಯಾಕ್​ ಟು ಬ್ಯಾಕ್​ ಸಿನಿಮಾವನ್ನು ಒಪ್ಪಿಕೊಂಡಿರುವುದಾಗಿ ತಿಳಿಸುವ ಮೂಲಕ ಅವರು ಅಭಿಮಾನಿಗಳಿಗೆ ಗುಡ್​ ನ್ಯೂಸ್​ ನೀಡಿದ್ದರು. ಆ ಚಿತ್ರಗಳಲ್ಲಿ ಮೊದಲು ಸೆಟ್ಟೇರಿರುವುದು ‘ವಿ ಕ್ರಿಯೇಷನ್ಸ್​’ ಜೊತೆಗಿನ ಸಿನಿಮಾ. ಹಲವು ಕಾರಣಗಳಿಂದಾಗಿ ಈ ಚಿತ್ರ ವಿಶೇಷ ಎನಿಸಿಕೊಂಡಿದೆ.

ಇದನ್ನೂ ಓದಿ: ಜೂ ಕಿಚ್ಚನ ಪರಿಚಯಿಸಿದ ಶಿವರಾಜ್ ಕುಮಾರ್ ಮತ್ತು ರವಿಚಂದ್ರನ್

ತುಂಬ ರಗಡ್​ ಆಗಿ ‘ಕಿಚ್ಚ 46’ ಟೀಸರ್​ ಮೂಡಿಬಂದಿದೆ. ಈ ಸಿನಿಮಾದ ಮೇಕಿಂಗ್​ ಕ್ವಾಲಿಟಿ ಬಗ್ಗೆ ಕೆಲವರಿಗೆ ಅನುಮಾನ ಇತ್ತು. ಅದಕ್ಕೆ ತಕ್ಕ ಉತ್ತರ ನೀಡುವ ರೀತಿಯಲ್ಲಿ, ಬಹಳ ಅದ್ದೂರಿಯಾಗಿ ಟೀಸರ್​ ಚಿತ್ರೀಕರಿಸಲಾಗಿದೆ. ಇದರಲ್ಲಿನ ಡೈಲಾಗ್​ಗಳು ಗಮನ ಸೆಳೆಯುತ್ತಿವೆ. ‘ನಾನು ಯುದ್ಧಕ್ಕೆ ಇಳಿದ ಮೇಲೆ ದಯೆ, ಕ್ಷಮೆ, ಸಂಧಾನ ಇದು ಯಾವುದೂ ಇರೋದಿಲ್ಲ. ನಾನು ಮನುಷ್ಯ ಅಲ್ಲ. ನಾನು ರಾಕ್ಷಸ’ ಎಂದು ಟೀಸರ್​ನ ಕೊನೆಯಲ್ಲಿ ಸುದೀಪ್​ ಹೇಳುವ ಡೈಲಾಗ್​ ಟ್ರೆಂಡ್​ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:09 pm, Sun, 2 July 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ