AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudeep Birthday: ಕಿಚ್ಚ ಸುದೀಪ್‌ ಜನ್ಮದಿನ; 4 ಹೊಸ ಅನೌನ್ಸ್​ಮೆಂಟ್​​ಗೆ ಕೌಂಟ್​ಡೌನ್

Kichcha Sudeep Birthday: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 53ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಾಯಿಯ ಅಗಲಿಕೆಯಿಂದಾಗಿ ಅಭಿಮಾನಿಗಳ ಜೊತೆಗಿನ ನೇರ ಆಚರಣೆಗೆ ಬ್ರೇಕ್ ಹಾಕಿರುವ ಸುದೀಪ್, ಹುಟ್ಟುಹಬ್ಬದ ಅಂಗವಾಗಿ 4 ಹೊಸ ಸಿನಿಮಾಗಳ ಭರ್ಜರಿ ಅನೌನ್ಸ್‌ಮೆಂಟ್ ನೀಡಿ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ನೀಡಲಿದ್ದಾರೆ.

Sudeep Birthday: ಕಿಚ್ಚ ಸುದೀಪ್‌ ಜನ್ಮದಿನ; 4 ಹೊಸ ಅನೌನ್ಸ್​ಮೆಂಟ್​​ಗೆ ಕೌಂಟ್​ಡೌನ್
ಸುದೀಪ್
ಮಂಗಳ ರಾಜಗೋಪಾಲ್​
| Edited By: |

Updated on:Sep 02, 2026 | 7:02 AM

Share

ಮುಖ್ಯಾಂಶಗಳು

  • ಕಿಚ್ಚ ಸುದೀಪ್ ಜನ್ಮದಿನ
  • ತಾಯಿಯ ನೆನಪಿನಲ್ಲಿ ಕಿಚ್ಚ
  • ಅಭಿಮಾನಿಗಳ ಜೊತೆಗಿನ ಆಚರಣೆಗೆ ಬ್ರೇಕ್

ಕನ್ನಡ ಚಿತ್ರರಂಗದ ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ (Kichcha Sudeep) ಇಂದು ತಮ್ಮ 53ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಪ್ರಪಂಚಾದ್ಯಂತ ಇರುವ ಕೋಟ್ಯಂತರ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಶುಭ ಹಾರೈಸುತ್ತಿದ್ದಾರೆ. ಆದರೆ, ಈ ಬಾರಿ ಸುದೀಪ್ ಅವರು ಅಭಿಮಾನಿಗಳ ಜೊತೆ ನೇರ ಹುಟ್ಟುಹಬ್ಬದ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ತಾಯಿ ನಿಧನದ ಬಳಿಕ ಅವರಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುವ ಆಸಕ್ತಿಯೇ ಹೋಗಿದೆ.

ಸಾಧಾರಣ ಹಿನ್ನೆಲೆಯಿಂದ ಬಂದು ತಮ್ಮ ಸ್ವಂತ ಪರಿಶ್ರಮ ಹಾಗೂ ಅದ್ಭುತ ನಟನೆಯಿಂದ ಸುದೀಪ್ ಇಂದು ದಕ್ಷಿಣ ಭಾರತದ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ನಾಯಕ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಹಾಗೂ ಯಶಸ್ವಿ ನಿರೂಪಕನಾಗಿ ಚಿತ್ರರಂಗದಲ್ಲಿ ತಮ್ಮದೇ ಆದ ಸಾಮ್ರಾಜ್ಯ ಕಟ್ಟಿದ್ದಾರೆ. ಇಂದು ಭಾರತೀಯ ಚಿತ್ರರಂಗವೇ ತಿರುಗಿ ನೋಡುವ ಮಟ್ಟಿಗೆ ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ತಾವು ಓರ್ವ ಹೀರೋ ಮಾತ್ರ ಅಲ್ಲ, ಉತ್ತಮ ವಿಲನ್ ಕೂಡ ಹೌದು ಎಂಬುದನ್ನು ಅನೇಕ ಸಿನಿಮಾಗಳ ಮೂಲಕ ಅವರು ಸಾಬೀತು ಮಾಡಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಸಾಲು ಸಾಲು ಸಿನಿಮಾಗಳ ಉಡುಗೊರೆ ಸಿಗುತ್ತಿದೆ. ಇಂದು ಸುದೀಪ್ ಅಭಿನಯದ ಒಟ್ಟು ನಾಲ್ಕು ಹೊಸ ಸಿನಿಮಾಗಳ ಅಧಿಕೃತ ಘೋಷಣೆಯಾಗಲಿದೆ. ಇದು ಅವರ ಅಭಿಮಾನಿಗಳ ಉತ್ಸಾಹವನ್ನು ಇಮ್ಮಡಿಗೊಳಿಸಿದೆ.

ಬೆಳಿಗ್ಗೆ 08.08 ನಿಮಿಷಕ್ಕೆ ಅನೂಪ್ ಭಂಡಾರಿ ನಿರ್ದೇಶನದ ‘ಬಿಲ್ಲ ರಂಗ ಬಾಷಾ’ ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆಯಾಗಲಿದೆ. ಜೊತೆಗೆ ‘ಸ್ಕೂಲ್ ಬಸ್’ ಚಿತ್ರತಂಡದಿಂದ ಕಿಚ್ಚ ಸುದೀಪ್‌ಗೆ ಗೌರವ ಸಲ್ಲಿಸಲು ಸ್ಪೆಷಲ್ ವಿಡಿಯೋ ಒಂದನ್ನು ರಿಲೀಸ್ ಮಾಡಲಾಗುತ್ತಿದೆ.

ಇದನ್ನೂ ಓದಿ: ನಾಲ್ಕು ಬಡ ಕುಟುಂಬಗಳ ಬಾಳಿಗೆ ಬೆಳಕಾದ ಕಿಚ್ಚ ಸುದೀಪ್

ಇದರ ಜೊತೆಗೆ ಲೆನಿನ್ ಕ್ರಿಯೇಷನ್ಸ್ ಹಾಗೂ ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದ ಬಗ್ಗೆಯೂ ಮಾಹಿತಿ ಹೊರಬರಲಿದೆ. ಖ್ಯಾತ ನಟ-ನಿರ್ದೇಶಕ ಸಮುದ್ರಖಣಿ ನಿರ್ದೇಶನದ ಸಿನಿಮಾದ ಅನೌನ್ಸ್‌ಮೆಂಟ್ ಕೂಡ ಇಂದೇ ನಡೆಯಲಿದೆ. ಆದರೆ, ಈ ಸಿನಿಮಾಗಳಲ್ಲಿ ಸುದೀಪ್ ಅವರ ಪಾತ್ರ ಏನು ಎಂಬುದನ್ನು ಚಿತ್ರತಂಡ ಸದ್ಯಕ್ಕೆ ಸಸ್ಪೆನ್ಸ್ ಆಗಿ ಇಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:02 am, Wed, 2 September 26

Follow Us
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!