AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನ ಸೆಳೆದ ‘ದಿ ಬೆಲ್’ ಪೋಸ್ಟರ್​; ಕನ್ನಡದ ಕಿರುಚಿತ್ರಕ್ಕೆ ಸುದೀಪ್​, ಪ್ರಜ್ವಲ್​ ದೇವರಾಜ್​​ ವಿಶ್​

The Bell Kannada Short Movie: ‘ದಿ ಬೆಲ್’ ಶೀರ್ಷಿಕೆಯ ಕನ್ನಡ ಕಿರುಚಿತ್ರದ ಪೋಸ್ಟರ್ ರಿಲೀಸ್​ ಆಗಿದೆ. ಪ್ರಜ್ವಲ್​ ದೇವರಾಜ್​, ಕಿಚ್ಚ ಸುದೀಪ್​ ಅವರು ಈ ತಂಡಕ್ಕೆ ಶುಭ ಕೋರಿದ್ದಾರೆ.

ಗಮನ ಸೆಳೆದ ‘ದಿ ಬೆಲ್’ ಪೋಸ್ಟರ್​; ಕನ್ನಡದ ಕಿರುಚಿತ್ರಕ್ಕೆ ಸುದೀಪ್​, ಪ್ರಜ್ವಲ್​ ದೇವರಾಜ್​​ ವಿಶ್​
‘ದಿ ಬೆಲ್’ ಕಿರುಚಿತ್ರಕ್ಕೆ ಸುದೀಪ್​, ಪ್ರಜ್ವಲ್​ ದೇವರಾಜ್​​ ವಿಶ್​
TV9 Web
| Edited By: |

Updated on:Jan 08, 2022 | 7:43 AM

Share

ಚಿತ್ರರಂಗದಲ್ಲಿ ಹೊಸ ಪ್ರತಿಭೆಗಳು ತಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸಲು ಕಿರುಚಿತ್ರಗಳು ಸಹಾಯಕ ಆಗುತ್ತವೆ. ಅಂಥವರಿಗೆ ಸ್ಟಾರ್​ ಕಲಾವಿದರ ಬೆಂಬಲ ಸಿಕ್ಕರೆ ಹುರುಪು ಇನ್ನಷ್ಟು ಹೆಚ್ಚುತ್ತದೆ. ‘ಕೋಟಿಗೊಬ್ಬ 3’ ಚಿತ್ರದ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ರಘುಕುಮಾರ್ ಒ.ಆರ್.​​ ಅವರು ‘ದಿ ಬೆಲ್​’ ಶೀರ್ಷಿಕೆಯ ಕಿರುಚಿತ್ರ ನಿರ್ದೇಶನ ಮಾಡಿದ್ದಾರೆ. ಈಗ ಅದರ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಖ್ಯಾತ ನಟ ಪ್ರಜ್ವಲ್​ ದೇವರಾಜ್ (Prajwal Devaraj)​ ಅವರು ಈ ಪೋಸ್ಟರ್​ ಲಾಂಚ್​ ಮಾಡಿದ್ದಾರೆ. ಕಿಚ್ಚ ಸುದೀಪ್​ (Kichcha Sudeep) ಅವರು ಸೋಶಿಯಲ್​ ಮೀಡಿಯಾ ಮೂಲಕ ಶುಭ ಹಾರೈಸಿದ್ದಾರೆ. ಈ ಎಲ್ಲ ಕಾರಣಗಳಿಂದ ‘ದಿ ಬೆಲ್​’ ಕಿರುಚಿತ್ರ ಗಮನ ಸೆಳೆಯುತ್ತಿದೆ.

ಈ ಕಿರುಚಿತ್ರಕ್ಕೆ ರಿಷಿಕೇಶ್​ ಛಾಯಾಗ್ರಹಣ ಮಾಡಿದ್ದಾರೆ. ಶೈಲೇಶ್​ ರಾಜ್​ ಸಂಭಾಷಣೆ ಬರೆದಿದ್ದಾರೆ. ಉಮೇಶ್​ ಆರ್​.ಬಿ. ಸಂಕಲನ, ಪ್ರದ್ಯೋತನ್​ ಸಂಗೀತ ನಿರ್ದೇಶನದ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಕೇಶ್​ ರಾಖಿ ಈ ಪೋಸ್ಟರ್​ ವಿನ್ಯಾಸ ಮಾಡಿದ್ದು, ಪ್ರಜ್ವಲ್​ ದೇವರಾಜ್​ ಅವರಿಂದ ಮೆಚ್ಚುಗೆ ಪಡೆದುಕೊಂಡಿದೆ. ಅಷ್ಟೇ ಅಲ್ಲದೇ ಬಾಲಿವುಡ್​ ನಟ ಅಫ್ತಾಬ್​ ಶಿವದಾಸನಿ, ನಿರ್ದೇಶಕ ಲೋಹಿತ್​, ನಟಿ ಶ್ರದ್ಧಾ ದಾಸ್​ ಮುಂತಾದವರು ಆಲ್​ ದಿ ಬೆಸ್ಟ್​ ಎಂದಿದ್ದಾರೆ.

ತಿಮ್ಮರಾಜ್​ ಎಸ್​.ಎಚ್​​, ಲಕ್ಷ್ಮೀಕಾಂತ್​ ಒ.ಆರ್​. ಹಾಗೂ ರಘುಕುಮಾರ್​ ಒ.ಆರ್​. ಅವರು ಈ ಕಿರುಚಿತ್ರ ನಿರ್ಮಾಣ ಮಾಡಿದ್ದಾರೆ. ಆಶಾ ರಾಣಿ, ಭವಾನಿ ಪ್ರಕಾಶ್​, ರಮ್ಯಾ ಕೃಷ್ಣ, ಅಶ್ವಿನಿ ಹಾಸನ್​, ಮನೋಜ್​ ಪುತ್ತೂರ್​, ಅಶ್ವಿನ್​ ಹಾಸನ್​, ಎಚ್​​ಎಂಟಿ ವಿಜಯ್​ ಮುಂತಾದವರು ‘ದಿ ಬೆಲ್​’ ಕಿರುಚಿತ್ರದಲ್ಲಿ ನಟಿಸಿದ್ದಾರೆ.

‘ಕರ್ಮ ಸಿದ್ಧಾಂತದ ಥೀಮ್​ ಇಟ್ಟುಕೊಂಡು ಈ ಕಿರುಚಿತ್ರ ಸಿದ್ಧವಾಗಿದೆ. ನಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸಲು ಇದನ್ನು ಮಾಡಿದ್ದೇನೆ. ಫೆಬ್ರವರಿ ಮೊದಲ ವಾರದಲ್ಲಿ ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡುತ್ತೇವೆ. ಹೆಚ್ಚು ಜನರನ್ನು ತಲುಪಬೇಕು ಎಂಬುದು ನಮ್ಮ ಗುರಿ’ ಎಂದಿದ್ದಾರೆ ನಿರ್ದೇಶಕ ರಘುಕುಮಾರ್​.

‘ಒನ್​ ರೈಟ್​ ಕಿಕ್​’ ಕಿರುಚಿತ್ರಕ್ಕೆ 12 ಅಂತಾರಾಷ್ಟ್ರೀಯ ಪ್ರಶಸ್ತಿ; ನಟಿ ಸಿಂಹಿಕಾ ಬಿಚ್ಚಿಟ್ಟ ರಹಸ್ಯ

ಪುನೀತ್​ ಸಮಾಧಿ ಎದುರು ‘ರೈತ’ ಕಿರುಚಿತ್ರದ ಸಾಂಗ್​ ಬಿಡುಗಡೆ; ಅಪ್ಪುಗಾಗಿ ವಿಶೇಷ ಹಾಡು

Published On - 7:42 am, Sat, 8 January 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್