AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನ ಸೆಳೆದ ‘ದಿ ಬೆಲ್’ ಪೋಸ್ಟರ್​; ಕನ್ನಡದ ಕಿರುಚಿತ್ರಕ್ಕೆ ಸುದೀಪ್​, ಪ್ರಜ್ವಲ್​ ದೇವರಾಜ್​​ ವಿಶ್​

The Bell Kannada Short Movie: ‘ದಿ ಬೆಲ್’ ಶೀರ್ಷಿಕೆಯ ಕನ್ನಡ ಕಿರುಚಿತ್ರದ ಪೋಸ್ಟರ್ ರಿಲೀಸ್​ ಆಗಿದೆ. ಪ್ರಜ್ವಲ್​ ದೇವರಾಜ್​, ಕಿಚ್ಚ ಸುದೀಪ್​ ಅವರು ಈ ತಂಡಕ್ಕೆ ಶುಭ ಕೋರಿದ್ದಾರೆ.

ಗಮನ ಸೆಳೆದ ‘ದಿ ಬೆಲ್’ ಪೋಸ್ಟರ್​; ಕನ್ನಡದ ಕಿರುಚಿತ್ರಕ್ಕೆ ಸುದೀಪ್​, ಪ್ರಜ್ವಲ್​ ದೇವರಾಜ್​​ ವಿಶ್​
‘ದಿ ಬೆಲ್’ ಕಿರುಚಿತ್ರಕ್ಕೆ ಸುದೀಪ್​, ಪ್ರಜ್ವಲ್​ ದೇವರಾಜ್​​ ವಿಶ್​
TV9 Web
| Edited By: |

Updated on:Jan 08, 2022 | 7:43 AM

Share

ಚಿತ್ರರಂಗದಲ್ಲಿ ಹೊಸ ಪ್ರತಿಭೆಗಳು ತಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸಲು ಕಿರುಚಿತ್ರಗಳು ಸಹಾಯಕ ಆಗುತ್ತವೆ. ಅಂಥವರಿಗೆ ಸ್ಟಾರ್​ ಕಲಾವಿದರ ಬೆಂಬಲ ಸಿಕ್ಕರೆ ಹುರುಪು ಇನ್ನಷ್ಟು ಹೆಚ್ಚುತ್ತದೆ. ‘ಕೋಟಿಗೊಬ್ಬ 3’ ಚಿತ್ರದ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ರಘುಕುಮಾರ್ ಒ.ಆರ್.​​ ಅವರು ‘ದಿ ಬೆಲ್​’ ಶೀರ್ಷಿಕೆಯ ಕಿರುಚಿತ್ರ ನಿರ್ದೇಶನ ಮಾಡಿದ್ದಾರೆ. ಈಗ ಅದರ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಖ್ಯಾತ ನಟ ಪ್ರಜ್ವಲ್​ ದೇವರಾಜ್ (Prajwal Devaraj)​ ಅವರು ಈ ಪೋಸ್ಟರ್​ ಲಾಂಚ್​ ಮಾಡಿದ್ದಾರೆ. ಕಿಚ್ಚ ಸುದೀಪ್​ (Kichcha Sudeep) ಅವರು ಸೋಶಿಯಲ್​ ಮೀಡಿಯಾ ಮೂಲಕ ಶುಭ ಹಾರೈಸಿದ್ದಾರೆ. ಈ ಎಲ್ಲ ಕಾರಣಗಳಿಂದ ‘ದಿ ಬೆಲ್​’ ಕಿರುಚಿತ್ರ ಗಮನ ಸೆಳೆಯುತ್ತಿದೆ.

ಈ ಕಿರುಚಿತ್ರಕ್ಕೆ ರಿಷಿಕೇಶ್​ ಛಾಯಾಗ್ರಹಣ ಮಾಡಿದ್ದಾರೆ. ಶೈಲೇಶ್​ ರಾಜ್​ ಸಂಭಾಷಣೆ ಬರೆದಿದ್ದಾರೆ. ಉಮೇಶ್​ ಆರ್​.ಬಿ. ಸಂಕಲನ, ಪ್ರದ್ಯೋತನ್​ ಸಂಗೀತ ನಿರ್ದೇಶನದ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಕೇಶ್​ ರಾಖಿ ಈ ಪೋಸ್ಟರ್​ ವಿನ್ಯಾಸ ಮಾಡಿದ್ದು, ಪ್ರಜ್ವಲ್​ ದೇವರಾಜ್​ ಅವರಿಂದ ಮೆಚ್ಚುಗೆ ಪಡೆದುಕೊಂಡಿದೆ. ಅಷ್ಟೇ ಅಲ್ಲದೇ ಬಾಲಿವುಡ್​ ನಟ ಅಫ್ತಾಬ್​ ಶಿವದಾಸನಿ, ನಿರ್ದೇಶಕ ಲೋಹಿತ್​, ನಟಿ ಶ್ರದ್ಧಾ ದಾಸ್​ ಮುಂತಾದವರು ಆಲ್​ ದಿ ಬೆಸ್ಟ್​ ಎಂದಿದ್ದಾರೆ.

ತಿಮ್ಮರಾಜ್​ ಎಸ್​.ಎಚ್​​, ಲಕ್ಷ್ಮೀಕಾಂತ್​ ಒ.ಆರ್​. ಹಾಗೂ ರಘುಕುಮಾರ್​ ಒ.ಆರ್​. ಅವರು ಈ ಕಿರುಚಿತ್ರ ನಿರ್ಮಾಣ ಮಾಡಿದ್ದಾರೆ. ಆಶಾ ರಾಣಿ, ಭವಾನಿ ಪ್ರಕಾಶ್​, ರಮ್ಯಾ ಕೃಷ್ಣ, ಅಶ್ವಿನಿ ಹಾಸನ್​, ಮನೋಜ್​ ಪುತ್ತೂರ್​, ಅಶ್ವಿನ್​ ಹಾಸನ್​, ಎಚ್​​ಎಂಟಿ ವಿಜಯ್​ ಮುಂತಾದವರು ‘ದಿ ಬೆಲ್​’ ಕಿರುಚಿತ್ರದಲ್ಲಿ ನಟಿಸಿದ್ದಾರೆ.

‘ಕರ್ಮ ಸಿದ್ಧಾಂತದ ಥೀಮ್​ ಇಟ್ಟುಕೊಂಡು ಈ ಕಿರುಚಿತ್ರ ಸಿದ್ಧವಾಗಿದೆ. ನಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸಲು ಇದನ್ನು ಮಾಡಿದ್ದೇನೆ. ಫೆಬ್ರವರಿ ಮೊದಲ ವಾರದಲ್ಲಿ ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡುತ್ತೇವೆ. ಹೆಚ್ಚು ಜನರನ್ನು ತಲುಪಬೇಕು ಎಂಬುದು ನಮ್ಮ ಗುರಿ’ ಎಂದಿದ್ದಾರೆ ನಿರ್ದೇಶಕ ರಘುಕುಮಾರ್​.

‘ಒನ್​ ರೈಟ್​ ಕಿಕ್​’ ಕಿರುಚಿತ್ರಕ್ಕೆ 12 ಅಂತಾರಾಷ್ಟ್ರೀಯ ಪ್ರಶಸ್ತಿ; ನಟಿ ಸಿಂಹಿಕಾ ಬಿಚ್ಚಿಟ್ಟ ರಹಸ್ಯ

ಪುನೀತ್​ ಸಮಾಧಿ ಎದುರು ‘ರೈತ’ ಕಿರುಚಿತ್ರದ ಸಾಂಗ್​ ಬಿಡುಗಡೆ; ಅಪ್ಪುಗಾಗಿ ವಿಶೇಷ ಹಾಡು

Published On - 7:42 am, Sat, 8 January 22

Follow Us
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು