AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಸ್ನೇಹದ ಸಂದೇಶ ಸಾರಲಿದೆ ಸುದೀಪ್​-ಪುನೀತ್​ ಕಟೌಟ್​; ಭರ್ಜರಿಯಾಗಿ ನಡೆದಿದೆ ಪ್ಲ್ಯಾನ್​

Kichcha Sudeep | Puneeth Rajkumar: ಕಿಚ್ಚ ಸುದೀಪ್​ ಮತ್ತು ಪುನೀತ್​ ರಾಜ್​ಕುಮಾರ್ ಅವರದ್ದು ಹಲವು ವರ್ಷಗಳ ಸ್ನೇಹ. ‘ವಿಕ್ರಾಂತ್​ ರೋಣ’ ಚಿತ್ರದ ಬಿಡುಗಡೆ ಪ್ರಯುಕ್ತ ಅವರಿಬ್ಬರ ವಿಶೇಷ ಕಟೌಟ್​ ತಯಾರಾಗುತ್ತಿದೆ.

Puneeth Rajkumar: ಸ್ನೇಹದ ಸಂದೇಶ ಸಾರಲಿದೆ ಸುದೀಪ್​-ಪುನೀತ್​ ಕಟೌಟ್​; ಭರ್ಜರಿಯಾಗಿ ನಡೆದಿದೆ ಪ್ಲ್ಯಾನ್​
ಸುದೀಪ್​, ಪುನೀತ್​ ರಾಜ್​ಕುಮಾರ್
TV9 Web
| Updated By: ಮದನ್​ ಕುಮಾರ್​|

Updated on: Jul 22, 2022 | 8:15 AM

Share

ನಟ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರು ಚಿತ್ರರಂಗದ ಎಲ್ಲರ ಜೊತೆಗೆ ಉತ್ತಮ ಒಡನಾಟ ಹೊಂದಿದ್ದರು. ಎಲ್ಲರನ್ನೂ ಅವರು ಗೌರವದಿಂದ ಕಾಣುತ್ತಿದ್ದರು. ಹಿರಿಯರು-ಕಿರಿಯರು ಎಂಬ ಭೇದ ತೋರದೇ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದರು. ಆ ಕಾರಣಕ್ಕಾಗಿ ಅಪ್ಪು ಎಂದರೆ ಎಲ್ಲರಿಗೂ ಸಖತ್​ ಅಭಿಮಾನ. ಇಂದು ಭೌತಿಕವಾಗಿ ಅವರು ನಮ್ಮ ಜೊತೆ ಇಲ್ಲ. ಆದರೆ ಹಲವು ವಿಚಾರಗಳ ಮೂಲಕ ಮತ್ತೆ ಮತ್ತೆ ನೆನಪಾಗುತ್ತಾರೆ. ಅಭಿಮಾನಿಗಳು ಪುನೀತ್​ ರಾಜ್​ಕುಮಾರ್ ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅದೇ ರೀತಿ ಚಿತ್ರರಂಗದವರು ಕೂಡ ಅಪ್ಪು ನೆನಪನ್ನು ಸದಾ ಹಸಿರಾಗಿ ಇಟ್ಟುಕೊಳ್ಳುತ್ತಾರೆ. ಈಗ ‘ವಿಕ್ರಾಂತ್​ ರೋಣ’ (Vikrant Rona) ಚಿತ್ರದ ಬಿಡುಗಡೆ ಸಂದರ್ಭದಲ್ಲಿ ಪುನೀತ್ ರಾಜ್​ಕುಮಾರ್ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ. ಕಿಚ್ಚ ಸುದೀಪ್​ (Kichcha Sudeep) ಮತ್ತು ಪುನೀತ್​ ಅವರ ಕಟೌಟ್​ಗಳು ಥಿಯೇಟರ್​ ಮುಂಭಾಗದಲ್ಲಿ ರಾರಾಜಿಸಲಿವೆ.

ಕಿಚ್ಚ ಸುದೀಪ್​ ಮತ್ತು ಪುನೀತ್​ ರಾಜ್​ಕುಮಾರ್ ಅವರದ್ದು ಹಲವು ವರ್ಷಗಳ ಸ್ನೇಹ. ಬಾಲ್ಯದಿಂದಲೂ ಅವರು ಪರಿಚಿತರು. ವೇದಿಕೆ ಕಾರ್ಯಕ್ರಮವೊಂದರಲ್ಲಿ ಇಬ್ಬರು ಜೊತೆಯಾಗಿ ಪೋಸ್​ ನೀಡಿದ ಈ ಫೋಟೋಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇದೇ ಫೋಟೋ ಈಗ ಕಟೌಟ್​ ರೂಪದಲ್ಲಿ ಸಿದ್ಧವಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಇಬ್ಬರ ಸ್ನೇಹವನ್ನು ಸಾರುವ ಈ ಕಟೌಟ್​ಗಳನ್ನು ಚಿತ್ರಮಂದಿರಗಳ ಮುಂದೆ ನಿಲ್ಲಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

‘ವಿಕ್ರಾಂತ್​ ರೋಣ’ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಜಾಕ್​ ಮಂಜು ಅವರು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ಮತ್ತು ಹಾಡುಗಳಿಂದಾಗಿ ಸಿನಿಮಾ ಮೇಲಿನ ಕ್ರೇಜ್​ ಹೆಚ್ಚಿದೆ. ಗ್ರ್ಯಾಂಡ್​ ಆಗಿ ‘ವಿಕ್ರಾಂತ್​ ರೋಣ’ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಸುದೀಪ್​-ಪುನೀತ್​ ಕಟೌಟ್​ ಕೂಡ ಹೈಲೈಟ್​ ಆಗಲಿದೆ.

ಇದನ್ನೂ ಓದಿ
Image
Puneeth Rajkumar Twitter: ಮರಳಿ ಬಂತು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯ ಬ್ಲೂ ಟಿಕ್​; ಸಂಭ್ರಮಿಸಿದ ಅಪ್ಪು ಫ್ಯಾನ್ಸ್​
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​
Image
Ashwini Puneeth Rajkumar: ಪುನೀತ್​ ರಾಜ್​ಕುಮಾರ್​ ಹಾಡಿದ ‘ಅಪರೂಪ’ದ ಸಾಂಗ್​ ರಿಲೀಸ್​ ಮಾಡಿದ ಪತ್ನಿ ಅಶ್ವಿನಿ
Image
ಪುನೀತ್​ ಪುತ್ಥಳಿ ಅನಾವರಣದ ವೇಳೆ ಬಿಕ್ಕಿ ಬಿಕ್ಕಿ ಅತ್ತ ರಾಘವೇಂದ್ರ ರಾಜ್​ಕುಮಾರ್​ ಪತ್ನಿ ಮಂಗಳಾ

ಈ ಸಿನಿಮಾದಲ್ಲಿ ಸುದೀಪ್​ ಜೊತೆ ನೀತಾ ಅಶೋಕ್​, ನಿರೂಪ್​ ಭಂಡಾರಿ, ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದವರು ನಟಿಸಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಸಂಗೀತ ನೀಡಿರುವ ಹಾಡುಗಳು ಸೂಪರ್ ಹಿಟ್​ ಆಗಿವೆ. 3ಡಿಯಲ್ಲಿ ಮೂಡಿಬರುತ್ತಿರುವ ಈ ಚಿತ್ರ ದಾಖಲೆ ಪ್ರಮಾಣದಲ್ಲಿ ಓಪನಿಂಗ್​ ಪಡೆಯುವ ನಿರೀಕ್ಷೆ ಇದೆ. ‘ವಿಕ್ರಾಂತ್​ ರೋಣ’ನಿಗೆ ಅದ್ದೂರಿ ಸ್ವಾಗತ ನೀಡಲು ಅಭಿಮಾನಿಗಳು ಸಜ್ಜಾಗಿದ್ದಾರೆ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ