AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​. ಚಂದ್ರು ಜೊತೆ ಸುದೀಪ್​ ಹೊಸ ಸಿನಿಮಾ; ಸ್ಕ್ರಿಪ್ಟ್​​ ಕೆಲಸದಲ್ಲಿ ವಿಜಯೇಂದ್ರ ಪ್ರಸಾದ್​ ಭಾಗಿ

ನಿರ್ದೇಶಕ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್​ ಅವರು ಚಿತ್ರರಂಗದಲ್ಲಿ ಬಹುಬೇಡಿಕೆಯ ಕಥೆಗಾರನಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಆರ್​. ಚಂದ್ರು ಅವರು ಸ್ಕ್ರಿಪ್ಟ್​ ತೋರಿಸಿದ್ದಾರೆ. ಆ ಕಾರಣದಿಂದ ಕಿಚ್ಚ ಸುದೀಪ್​ ಮತ್ತು ಆರ್​. ಚಂದ್ರು ಕಾಂಬಿನೇಷನ್​ನ ಈ ಹೊಸ ಸಿನಿಮಾ ಬಗ್ಗೆ ಹೈಪ್​ ಸೃಷ್ಟಿ ಆಗುವಂತಾಗಿದೆ.

ಆರ್​. ಚಂದ್ರು ಜೊತೆ ಸುದೀಪ್​ ಹೊಸ ಸಿನಿಮಾ; ಸ್ಕ್ರಿಪ್ಟ್​​ ಕೆಲಸದಲ್ಲಿ ವಿಜಯೇಂದ್ರ ಪ್ರಸಾದ್​ ಭಾಗಿ
ಕಿಚ್ಚ ಸುದೀಪ್​, ವಿಜಯೇಂದ್ರ ಪ್ರಸಾದ್​, ಆರ್​. ಚಂದ್ರು
Mangala RR
| Updated By: ಮದನ್​ ಕುಮಾರ್​|

Updated on:Sep 01, 2023 | 4:48 PM

Share

ನಟ ಕಿಚ್ಚ ಸುದೀಪ್​ (Kichcha Sudeep) ಅವರು ‘ವಿಕ್ರಾಂತ್​ ರೋಣ’ ರಿಲೀಸ್​ ಆದ ಬಳಿಕ ಹಲವು ಕಥೆಗಳನ್ನು ಕೇಳಿದ್ದಾರೆ. ಆ ಪೈಕಿ ‘Kichcha 46’ ಪ್ರಾಜೆಕ್ಟ್​ನ ಕೆಲಸಗಳು ಭರದಿಂದ ಸಾಗುತ್ತಿವೆ. ಈಗ ಹೊಸದೊಂದು ಸುದ್ದಿ ಕೇಳಿಬಂದಿದೆ. ನಿರ್ದೇಶಕ ಆರ್​. ಚಂದ್ರು (R. Chandru) ಜೊತೆ ಸುದೀಪ್​ ಅವರು ಕೈ ಜೋಡಿಸಲಿದ್ದಾರೆ. ಇವರಿಬ್ಬರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಬರಲಿದೆ. ಇಂಟರೆಸ್ಟಿಂಗ್​ ವಿಚಾರ ಏನೆಂದರೆ, ಈ ಸಿನಿಮಾದ ಸ್ಕ್ರಿಪ್ಟ್​ ಕೆಲಸದಲ್ಲಿ ವಿಜಯೇಂದ್ರ ಪ್ರಸಾದ್​ (Vijayendra Prasad) ಅವರು ಸಾಥ್​ ನೀಡಿದ್ದಾರೆ. ಹಾಗಾಗಿ ಈ ಪ್ರಾಜೆಕ್ಟ್​ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ‘ಆರ್​.ಸಿ. ಸ್ಟುಡಿಯೋಸ್​’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗಲಿದೆ. ಕಿಚ್ಚ ಸುದೀಪ್​ ಅವರ ಜನ್ಮದಿನದ ಹೊಸ್ತಿಲಿನಲ್ಲಿ ಈ ಸುದ್ದಿ ಸಿಕ್ಕಿದೆ. ಸೆಪ್ಟೆಂಬರ್​ 2ರಂದು ಸುದೀಪ್​ ಅವರು ಅಭಿಮಾನಿಗಳ ಜೊತೆ ಸಂಭ್ರಮದಿಂದ ಬರ್ತ್​ಡೇ ಆಚರಿಸಿಕೊಳ್ಳಲಿದ್ದಾರೆ.

ನಿರ್ದೇಶಕ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್​ ಅವರು ಚಿತ್ರರಂಗದಲ್ಲಿ ಬಹುಬೇಡಿಕೆಯ ಕಥೆಗಾರನಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಆರ್​. ಚಂದ್ರು ಅವರು ಸ್ಕ್ರಿಪ್ಟ್​ ತೋರಿಸಿದ್ದಾರೆ. ಅಲ್ಲದೇ, ಒಂದಷ್ಟು ಸಲಹೆ ಮತ್ತು ಮಾರ್ಗದರ್ಶನ ಪಡೆದುಕೊಂಡಿದ್ದಾರೆ. ಆ ಕಾರಣದಿಂದ ಕಿಚ್ಚ ಸುದೀಪ್​ ಮತ್ತು ಆರ್​. ಚಂದ್ರು ಕಾಂಬಿನೇಷನ್​ನ ಈ ಹೊಸ ಸಿನಿಮಾ ಬಗ್ಗೆ ಹೈಪ್​ ಸೃಷ್ಟಿ ಆಗುವಂತಾಗಿದೆ. ಆರ್​. ಚಂದ್ರು ನಿರ್ದೇಶಿಸಿದ ‘ಕಬ್ಜ’ ಸಿನಿಮಾದಲ್ಲೂ ಸುದೀಪ್​ ಅವರು ಒಂದು ಪಾತ್ರ ಮಾಡಿದ್ದರು. ಈಗ ಅವರಿಬ್ಬರು ಮತ್ತೆ ಒಟ್ಟಾಗಿ ಸಿನಿಮಾ ಮಾಡಲು ಸಜ್ಜಾಗುತ್ತಿದ್ದಾರೆ.

ಇದನ್ನೂ ಓದಿ: ‘ಕಿಚ್ಚನಿಗೆ ಒಂದು ಅಚ್ಚರಿ ಕಾದಿದೆ’: ಸುದೀಪ್​ ಬರ್ತ್​ಡೇಗೂ ಮುನ್ನ ಸಿಹಿ ಸುದ್ದಿ ನೀಡಿದ ಪತ್ನಿ ಪ್ರಿಯಾ

ಕನ್ನಡ ಚಿತ್ರರಂಗದಲ್ಲಿ ಆರ್​. ಚಂದ್ರು ಅವರು ವಿಶೇಷ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಲವ್​ಸ್ಟೋರಿ, ಅಂಡರ್​ವರ್ಲ್ಡ್​.. ಹೀಗೆ ಎಲ್ಲ ಬಗೆಯ ಸಿನಿಮಾಗಳನ್ನು ಅವರು ಮಾಡಿದ್ದಾರೆ. ಅವರ ‘ಕಬ್ಜ’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಿತ್ತು. ಆ ಸಿನಿಮಾ ಬಳಿಕ ಚಂದ್ರು ಅವರು ಸುದೀಪ್​ ಜೊತೆ ಕೈ ಜೋಡಿಸುತ್ತಿದ್ದಾರೆ. ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಇದನ್ನೂ ಓದಿ: ಆಕಾಶದಲ್ಲಿನ ನಕ್ಷತ್ರಕ್ಕೆ ಕಿಚ್ಚ ಸುದೀಪ್​ ಹೆಸರು; ಹುಟ್ಟುಹಬ್ಬದ ಹೊಸ್ತಿಲಲ್ಲಿ ಹೀಗೊಂದು ಗೌರವ

ಸುದೀಪ್​ ಅವರ ಸಂಪೂರ್ಣ ಗಮನ ಈಗ ‘Kichcha 46’ ಸಿನಿಮಾದ ಮೇಲಿದೆ. ಆ ಸಿನಿಮಾದ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಬರ್ತ್​ಡೇ ಪ್ರಯುಕ್ತ ಟೈಟಲ್​ ರಿವೀಲ್​ ಆಗಲಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಬೃಹತ್​ ಸೆಟ್​ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ. ಹುಟ್ಟುಹಬ್ಬದ ಪ್ರಯುಕ್ತ ಸುದೀಪ್​ ಅವರು ಬ್ರೇಕ್​ ತೆಗೆದುಕೊಂಡಿದ್ದಾರೆ. ಆ ಬಳಿಕ ಮತ್ತೆ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:44 pm, Fri, 1 September 23

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್