AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್​ ಶೆಟ್ಟಿ ಹುಟ್ಟುಹಬ್ಬ: ‘777 ಚಾರ್ಲಿ’ ಟೀಸರ್​ ಮೆಚ್ಚಿಕೊಳ್ಳದೆ ಬೇರೆ ಆಯ್ಕೆ ಇಲ್ಲ; ಮನಸಾರೆ ಹೊಗಳಿದ ಕಿಚ್ಚ

Rakshit Shetty: ‘777 ಚಾರ್ಲಿ’ ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಕನ್ನಡದ ಜತೆಗೆ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲೂ ತೆರೆಗೆ ಬರುತ್ತಿದೆ. ಹೀಗಾಗಿ, ಟೀಸರ್ ಕೂಡ ಐದು ಭಾಷೆಗಳಲ್ಲಿ ರಿಲೀಸ್​ ಆಗಿದೆ.

ರಕ್ಷಿತ್​ ಶೆಟ್ಟಿ ಹುಟ್ಟುಹಬ್ಬ: ‘777 ಚಾರ್ಲಿ’ ಟೀಸರ್​ ಮೆಚ್ಚಿಕೊಳ್ಳದೆ ಬೇರೆ ಆಯ್ಕೆ ಇಲ್ಲ; ಮನಸಾರೆ ಹೊಗಳಿದ ಕಿಚ್ಚ
ರಕ್ಷಿತ್​ ಶೆಟ್ಟಿ ಹುಟ್ಟುಹಬ್ಬ: ‘777 ಚಾರ್ಲಿ’ ಟೀಸರ್​ ಮೆಚ್ಚಿಕೊಳ್ಳದೆ ಬೇರೆ ಆಯ್ಕೆ ಇಲ್ಲ; ಮನಸಾರೆ ಹೊಗಳಿದ ಕಿಚ್ಚ
ರಾಜೇಶ್ ದುಗ್ಗುಮನೆ
|

Updated on:Jun 06, 2021 | 2:56 PM

Share

ರಕ್ಷಿತ್​ ಶೆಟ್ಟಿ ಮಾಡುವ ಪ್ರತಿ ಚಿತ್ರವೂ ಭಿನ್ನ ಕಥಾಹಂದರವುಳ್ಳ ಸಿನಿಮಾ ಆಗಿರುತ್ತದೆ. ಅವರ ಮೊದಲ ಚಿತ್ರದಿಂದ ಇಲ್ಲಿಯವರೆಗೆ ಮಾಡಿದ್ದೆಲ್ಲವೂ ಭಿನ್ನ ಕಥಾ ಹಂದರವುಳ್ಳ ಚಿತ್ರಗಳೇ. ಇದಕ್ಕೆ ಈಗ ಹೊಸ ಸೇರ್ಪಡೆ 777 ಚಾರ್ಲಿ. ನಾಯಿ ಹಾಗೂ ಮನುಷ್ಯನ ಬಾಂಧವ್ಯದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ. ರಕ್ಷಿತ್​ ಜನ್ಮದಿನದ ಅಂಗವಾಗಿ ಇಂದು ಟೀಸರ್​ ರಿಲೀಸ್​ ಆಗಿದ್ದು , ಕಿಚ್ಚ ಸುದೀಪ್​ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟೀಸರ್​ನಲ್ಲಿ ಸಾಕಷ್ಟು ವಿಚಾರಗಳನ್ನು ಹೇಳೋಕೆ ನಿರ್ದೇಶಕ ಕಿರಣ್​ ರಾಜ್ ಪ್ರಯತ್ನಿಸಿದ್ದಾರೆ. ಚಾರ್ಲಿ (ಶ್ವಾನ) ಅನಾಥ. ಮಳೆ ಬಂದಾಗ ಶೆಡ್​ ಅಡಿಗೆ ಅಡಗಿಕೊಂಡು ನಗರವನ್ನೆಲ್ಲ ಸುತ್ತಾಡುತ್ತದೆ. ಕೊನೆಯಲ್ಲಿ ಈ ಶ್ವಾನ ಸೇರಿಕೊಳ್ಳೋದು ರಕ್ಷಿತ್​ ಶೆಟ್ಟಿ ಜತೆಗೆ. ಈ ಟೀಸರ್ ತುಂಬಾನೇ ಕ್ಯೂಟ್​ ಆಗಿದ್ದು, ಪ್ರಾಣಿ ಪ್ರಿಯರಿಗೆ ಇಷ್ಟವಾಗಲಿದೆ.

‘777 ಚಾರ್ಲಿ’ ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಕನ್ನಡದ ಜತೆಗೆ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲೂ ತೆರೆಗೆ ಬರುತ್ತಿದೆ. ಹೀಗಾಗಿ, ಟೀಸರ್ ಕೂಡ ಐದು ಭಾಷೆಗಳಲ್ಲಿ ರಿಲೀಸ್​ ಆಗಿದೆ. ತೆಲುಗಿನಲ್ಲಿ ನ್ಯಾಚುರಲ್​ ಸ್ಟಾರ್​ ನಾನಿ ಟೀಸರ್​ ರಿಲೀಸ್​ ಮಾಡಿದರೆ, ಖ್ಯಾತ ನಿರ್ದೇಶಕ ಕಾರ್ತಿಕ್​ ಸುಬ್ಬರಾಜ್​ ಅವರು ತಮಿಳಿನಲ್ಲಿ ಈ ಸಿನಿಮಾದ ಟೀಸರ್​ ಬಿಡುಗಡೆ ಮಾಡಿದ್ದಾರೆ. ಪೃಥ್ವಿರಾಜ್​ ಹಸ್ತದಿಂದ ಮಲಯಾಳಂನಲ್ಲಿ ಟೀಸರ್​ ಬಿಡುಗಡೆಗೊಡಿದೆ. ಹಿಂದಿ ಮತ್ತು ಕನ್ನಡ ಟೀಸರ್​ಗಳು ಪರಮ್​ವಾ ಸ್ಟುಡಿಯೋ ಮೂಲಕ ರಿಲೀಸ್​ ಮಾಡಲಾಗಿದೆ.

ಪೃಥ್ವಿರಾಜ್​, ಕುಂಜಾಕ್ಕೊ ಬೋಬನ್​, ನಿವೀನ್ ಪೌಲಿ, ಟೊವಿನೋ ಥಾಮಸ್​, ಉಣ್ಣಿ ಮುಕುಂದನ್​, ಅನ್ನಾ ಬೆನ್​, ನಿಖಿಲಾ ವಿಮಲ್​, ಆಂಟನಿ ವರ್ಗೀಸ್ ಟೀಸರ್​ ಹಂಚಿಕೊಂಡಿದ್ದಾರೆ. ‘777 ಚಾರ್ಲಿ’ ತಂಡ ಪೋಸ್ಟ್​ ಪ್ರೊಡಕ್ಷನ್​ ಪೂರ್ಣಗೊಳಿಸುವ ಹಂತದಲ್ಲಿದೆ. ಡಬ್ಬಿಂಗ್​ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಶೀಘ್ರವೇ ಸಿದ್ಧಗೊಳ್ಳಲಿದೆ. ‘777 ಚಾರ್ಲಿ’ ಸಿನಿಮಾಕ್ಕೆ ಸುಮಾರು 160 ದಿನಗಳ ಕಾಲ ಶೂಟಿಂಗ್​ ಮಾಡಲಾಗಿದೆ. ಶ್ವಾನದ ಮೂಡ್ ನೋಡಿಕೊಂಡು ಶೂಟ್​ ಮಾಡಬೇಕಾದ ಪರಿಸ್ಥಿತಿ ಇದ್ದಿದ್ದರಿಂದ ಶೂಟಿಂಗ್​ಗೆ ಹೆಚ್ಚು ದಿನ ಹಿಡಿದಿದೆ.

ಕಿರಣ್​ ರಾಜ್​ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್​ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಟ್​ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ. ಪರಮ್​ವಾ ಸ್ಟುಡಿಯೋ ಬ್ಯಾನರ್​ ಅಡಿಯಲ್ಲಿ ಚಿತ್ರ ಮೂಡಿ ಬರುತ್ತಿದೆ.

ಇದನ್ನೂ ಓದಿ: ರಕ್ಷಿತ್​ ಶೆಟ್ಟಿ ಜನ್ಮದಿನ; ‘777 ಚಾರ್ಲಿ’ ಟೀಸರ್​ ರಿಲೀಸ್​ ಮಾಡೋಕೆ ಬಂದ ಪರಭಾಷೆಯ ಸ್ಟಾರ್​ಗಳು

Rakshit Shetty Birthday: ‘ಸಿಂಪಲ್​ ಸ್ಟಾರ್​’ ರಕ್ಷಿತ್​ ಶೆಟ್ಟಿ ಅಭಿಮಾನಿಗಳ ಪಾಲಿಗೆ ‘ಭರವಸೆಯ ಸ್ಟಾರ್’​ ಆಗಿದ್ದು ಹೇಗೆ?

Published On - 2:54 pm, Sun, 6 June 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್