AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ವೇದಿಕೆ ಮೇಲೆ ಮಾಡಿದ ತಪ್ಪಿಗೆ ಅಪ್ಪನ ಬಳಿ ಕ್ಷಮೆ ಕೇಳಿದ ಸುದೀಪ್

ಬಿಗ್ ಬಾಸ್ ಕನ್ನಡ ಸೀಸನ್ 11ರ ಫಿನಾಲೆಯಲ್ಲಿ ಸುದೀಪ್ ಅವರ ತಂದೆ ಸಂಜೀವ್ ಮತ್ತು ಮಗಳು ಸಾನ್ವಿ ವೇದಿಕೆ ಮೇಲೆ ಬಂದಿದ್ದು ವಿಶೇಷವಾಗಿತ್ತು. ವೇದಿಕೆಯಲ್ಲಿನ ವರ್ತನೆಗೆ ಸುದೀಪ್ ತಮ್ಮ ತಂದೆಗೆ ಕ್ಷಮೆ ಕೇಳಿದರು. ತಮ್ಮ ತಂದೆ-ತಾಯಿಗೆ ಅವರು ಹೊಂದಿರುವ ಅಪಾರ ಪ್ರೀತಿ ಮತ್ತು ಗೌರವವನ್ನು ಈ ಘಟನೆ ಎತ್ತಿ ತೋರಿಸಿದೆ.

ಬಿಗ್ ಬಾಸ್ ವೇದಿಕೆ ಮೇಲೆ ಮಾಡಿದ ತಪ್ಪಿಗೆ ಅಪ್ಪನ ಬಳಿ ಕ್ಷಮೆ ಕೇಳಿದ ಸುದೀಪ್
ಸುದೀಪ್-ಸಂಜೀವ್
ರಾಜೇಶ್ ದುಗ್ಗುಮನೆ
|

Updated on: Jan 27, 2025 | 9:22 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆ ಸುದೀಪ್ ಪಾಲಿಗೆ ತುಂಬಾನೇ ವಿಶೇಷವಾಗಿತ್ತು. ಇದಕ್ಕೆ ಕಾರಣ ಅವರ ಕುಟುಂಬ ವೇದಿಕೆ ಮೇಲೆ ಬಂದಿತ್ತು. ಸುದೀಪ್ ಅವರ ತಂದೆ ಸಂಜೀವ್ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ವೇದಿಕೆ ಏರಿದ್ದರು. ಇದಲ್ಲದೆ, ಅವರ ಮಗಳು ಸಾನ್ವಿ ಕೂಡ ಬಂದಿದ್ದರು. ಇದು ಸುದೀಪ್ ಖುಷಿಯನ್ನು ಹೆಚ್ಚಿಸಿತ್ತು. ಅವರು ವೇದಿಕೆ ಏರಿದಾಗ ತಂದೆಗೆ ಕ್ಷಮೆ ಕೇಳಿದ್ದಾರೆ. ಇದಕ್ಕೆ ಕಾರಣವನ್ನೂ ನೀಡಿದ್ದಾರೆ.

ಸುದೀಪ್ ಅವರು ಬೇರೆ ರಾಜ್ಯಗಳಲ್ಲಿ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದರೂ ಬಿಗ್ ಬಾಸ್ ಶೂಟ್ ಸಂದರ್ಭದಲ್ಲಿ ಬೆಂಗಳೂರಿಗೆ ಬರುತ್ತಿದ್ದರು. ಈ ರೀತಿ ಬರುವಾಗ ಅವರು ಒಮ್ಮೆ ಮನೆಗೆ ತೆರಳಿ ತಂದೆ-ತಾಯಿನ ಭೇಟಿ ಮಾಡಿ ಆಶೀರ್ವಾದ ಪಡೆದೇ ಬಿಗ್ ಬಾಸ್ ಸೆಟ್​ಗೆ ತೆರಳುತ್ತಿದ್ದರು. ಇದನ್ನು ಅವರು ಅನೇಕ ಬಾರಿ ಹೇಳಿಕೊಂಡಿದ್ದರು. ಕಿಚ್ಚ ಸುದೀಪ್ ಅವರಿಗೆ ತಂದೆ-ತಾಯಿ ಬಗ್ಗೆ ವಿಶೇಷ ಪ್ರೀತಿ ಇದೆ ಎಂಬುದನ್ನು ಈ ಘಟನೆ ಸಾಬೀತು ಮಾಡುತ್ತದೆ. ಈ ಗೌರವಕ್ಕೆ ಧಕ್ಕೆ ಬಂದರಿಬಹುದು ಎಂದು ಸುದೀಪ್​ಗೆ ಅನಿಸಿದೆ. ಈ ಕಾರಣಕ್ಕೆ ತಂದೆ ಬಳಿ ಕ್ಷಮೆ ಕೇಳಿದರು.

ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ಅವರು ಗತ್ತಿನಿಂದ ಮಾತನಾಡುತ್ತಾರೆ. ಈ ಕಾರಣಕ್ಕೆ ಅವರು ಸಾಕಷ್ಟು ಇಷ್ಟ ಆಗುತ್ತಾರೆ. ಆದರೆ, ಈ ಬಾರಿ ಹೀಗೆ ಮಾತನಾಡುವಾಗ ಎದುರಿಗೆ ತಂದೆ ಕೂಡ ಇದ್ದರು. ಅವರ ಎದುರು ಈ ರೀತಿ ಮಾತನಾಡಿದ್ದಕ್ಕೆ ಸುದೀಪ್ ಅವರಿಗೆ ಮುಜುಗರ ಎನಿಸಿದೆ. ‘ವೇದಿಕೆ ಮೇಲೆ ಬಂದು ತಂದೆ ಎದುರು ಜೋಬ್ ಅಲ್ಲಿ ಕೈ ಹಾಕಿಕೊಂಡು ನಿಂತಿದ್ದು ಇಲ್ಲ. ಕ್ಷಮೆ ಇರಲಿ ಅಪ್ಪ’ ಎಂದು ಸುದೀಪ್  ಕೋರಿದರು.

ಇದನ್ನೂ ಓದಿ: ಮಂಜು ನಿರ್ಧಾರಕ್ಕೆ ಸುದೀಪ್ ಅಸಮಾಧಾನ; ಬಿಗ್ ಬಾಸ್ ವೇದಿಕೆ ಮೇಲೆ 2 ಲಕ್ಷ ರೂ. ದಾನ ಮಾಡಿದ ಕಿಚ್ಚ

ಸುದೀಪ್ ಅವರು ತಂದೆಯನ್ನು ಬಾಸ್ ಎಂದೇ ಸಂಬೋಧಿಸೋದು. ಈ ಮೊದಲು ಕೂಡ ಇದನ್ನು ಅವರು ಹೇಳಿಕೊಂಡಿದ್ದರು. ಸುದೀಪ್ ಅವರು ತಾಯಿಯನ್ನು ಕಳೆದುಕೊಂಡಿದ್ದು, ಸಾಕಷ್ಟು ನೋವಿನಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ