AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ವೇದಿಕೆ ಮೇಲೆ ಮಾಡಿದ ತಪ್ಪಿಗೆ ಅಪ್ಪನ ಬಳಿ ಕ್ಷಮೆ ಕೇಳಿದ ಸುದೀಪ್

ಬಿಗ್ ಬಾಸ್ ಕನ್ನಡ ಸೀಸನ್ 11ರ ಫಿನಾಲೆಯಲ್ಲಿ ಸುದೀಪ್ ಅವರ ತಂದೆ ಸಂಜೀವ್ ಮತ್ತು ಮಗಳು ಸಾನ್ವಿ ವೇದಿಕೆ ಮೇಲೆ ಬಂದಿದ್ದು ವಿಶೇಷವಾಗಿತ್ತು. ವೇದಿಕೆಯಲ್ಲಿನ ವರ್ತನೆಗೆ ಸುದೀಪ್ ತಮ್ಮ ತಂದೆಗೆ ಕ್ಷಮೆ ಕೇಳಿದರು. ತಮ್ಮ ತಂದೆ-ತಾಯಿಗೆ ಅವರು ಹೊಂದಿರುವ ಅಪಾರ ಪ್ರೀತಿ ಮತ್ತು ಗೌರವವನ್ನು ಈ ಘಟನೆ ಎತ್ತಿ ತೋರಿಸಿದೆ.

ಬಿಗ್ ಬಾಸ್ ವೇದಿಕೆ ಮೇಲೆ ಮಾಡಿದ ತಪ್ಪಿಗೆ ಅಪ್ಪನ ಬಳಿ ಕ್ಷಮೆ ಕೇಳಿದ ಸುದೀಪ್
ಸುದೀಪ್-ಸಂಜೀವ್
ರಾಜೇಶ್ ದುಗ್ಗುಮನೆ
|

Updated on: Jan 27, 2025 | 9:22 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆ ಸುದೀಪ್ ಪಾಲಿಗೆ ತುಂಬಾನೇ ವಿಶೇಷವಾಗಿತ್ತು. ಇದಕ್ಕೆ ಕಾರಣ ಅವರ ಕುಟುಂಬ ವೇದಿಕೆ ಮೇಲೆ ಬಂದಿತ್ತು. ಸುದೀಪ್ ಅವರ ತಂದೆ ಸಂಜೀವ್ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ವೇದಿಕೆ ಏರಿದ್ದರು. ಇದಲ್ಲದೆ, ಅವರ ಮಗಳು ಸಾನ್ವಿ ಕೂಡ ಬಂದಿದ್ದರು. ಇದು ಸುದೀಪ್ ಖುಷಿಯನ್ನು ಹೆಚ್ಚಿಸಿತ್ತು. ಅವರು ವೇದಿಕೆ ಏರಿದಾಗ ತಂದೆಗೆ ಕ್ಷಮೆ ಕೇಳಿದ್ದಾರೆ. ಇದಕ್ಕೆ ಕಾರಣವನ್ನೂ ನೀಡಿದ್ದಾರೆ.

ಸುದೀಪ್ ಅವರು ಬೇರೆ ರಾಜ್ಯಗಳಲ್ಲಿ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದರೂ ಬಿಗ್ ಬಾಸ್ ಶೂಟ್ ಸಂದರ್ಭದಲ್ಲಿ ಬೆಂಗಳೂರಿಗೆ ಬರುತ್ತಿದ್ದರು. ಈ ರೀತಿ ಬರುವಾಗ ಅವರು ಒಮ್ಮೆ ಮನೆಗೆ ತೆರಳಿ ತಂದೆ-ತಾಯಿನ ಭೇಟಿ ಮಾಡಿ ಆಶೀರ್ವಾದ ಪಡೆದೇ ಬಿಗ್ ಬಾಸ್ ಸೆಟ್​ಗೆ ತೆರಳುತ್ತಿದ್ದರು. ಇದನ್ನು ಅವರು ಅನೇಕ ಬಾರಿ ಹೇಳಿಕೊಂಡಿದ್ದರು. ಕಿಚ್ಚ ಸುದೀಪ್ ಅವರಿಗೆ ತಂದೆ-ತಾಯಿ ಬಗ್ಗೆ ವಿಶೇಷ ಪ್ರೀತಿ ಇದೆ ಎಂಬುದನ್ನು ಈ ಘಟನೆ ಸಾಬೀತು ಮಾಡುತ್ತದೆ. ಈ ಗೌರವಕ್ಕೆ ಧಕ್ಕೆ ಬಂದರಿಬಹುದು ಎಂದು ಸುದೀಪ್​ಗೆ ಅನಿಸಿದೆ. ಈ ಕಾರಣಕ್ಕೆ ತಂದೆ ಬಳಿ ಕ್ಷಮೆ ಕೇಳಿದರು.

ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ಅವರು ಗತ್ತಿನಿಂದ ಮಾತನಾಡುತ್ತಾರೆ. ಈ ಕಾರಣಕ್ಕೆ ಅವರು ಸಾಕಷ್ಟು ಇಷ್ಟ ಆಗುತ್ತಾರೆ. ಆದರೆ, ಈ ಬಾರಿ ಹೀಗೆ ಮಾತನಾಡುವಾಗ ಎದುರಿಗೆ ತಂದೆ ಕೂಡ ಇದ್ದರು. ಅವರ ಎದುರು ಈ ರೀತಿ ಮಾತನಾಡಿದ್ದಕ್ಕೆ ಸುದೀಪ್ ಅವರಿಗೆ ಮುಜುಗರ ಎನಿಸಿದೆ. ‘ವೇದಿಕೆ ಮೇಲೆ ಬಂದು ತಂದೆ ಎದುರು ಜೋಬ್ ಅಲ್ಲಿ ಕೈ ಹಾಕಿಕೊಂಡು ನಿಂತಿದ್ದು ಇಲ್ಲ. ಕ್ಷಮೆ ಇರಲಿ ಅಪ್ಪ’ ಎಂದು ಸುದೀಪ್  ಕೋರಿದರು.

ಇದನ್ನೂ ಓದಿ: ಮಂಜು ನಿರ್ಧಾರಕ್ಕೆ ಸುದೀಪ್ ಅಸಮಾಧಾನ; ಬಿಗ್ ಬಾಸ್ ವೇದಿಕೆ ಮೇಲೆ 2 ಲಕ್ಷ ರೂ. ದಾನ ಮಾಡಿದ ಕಿಚ್ಚ

ಸುದೀಪ್ ಅವರು ತಂದೆಯನ್ನು ಬಾಸ್ ಎಂದೇ ಸಂಬೋಧಿಸೋದು. ಈ ಮೊದಲು ಕೂಡ ಇದನ್ನು ಅವರು ಹೇಳಿಕೊಂಡಿದ್ದರು. ಸುದೀಪ್ ಅವರು ತಾಯಿಯನ್ನು ಕಳೆದುಕೊಂಡಿದ್ದು, ಸಾಕಷ್ಟು ನೋವಿನಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?