AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್

ಟೋಕಿಯೋ ಒಲಿಂಪಿಕ್ಸ್ -2020ರಲ್ಲಿ ನೀರಜ್ ಚೋಪ್ರಾ ಅವರು ಭಾರತವನ್ನು ಪ್ರತಿನಿಧಿಸಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಅವರ ಖ್ಯಾತಿ ದೇಶದ ಮೂಲೆಮೂಲೆಗೂ ತಲುಪಿದೆ.

ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್
ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Sep 01, 2021 | 2:02 PM

Share

ಕಿಚ್ಚ ಸುದೀಪ್​ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಹಿಂದಿ, ತೆಲುಗು ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿರುವ ಅವರು ಪರಭಾಷೆಯಲ್ಲೂ ಅಭಿಮಾನಿ ಬಳಗ ಹೊಂದಿದ್ದಾರೆ. ಬಾಲಿವುಡ್​ನ ಖ್ಯಾತ ನಟ ಸಲ್ಮಾನ್​ ಖಾನ್ ಜತೆ​​ಗೂ ಸುದೀಪ್​ಗೂ ಉತ್ತಮ ಫ್ರೆಂಡ್​ಶಿಪ್​ ಇದೆ. ಇದರ ಜತೆ ಅನೇಕ ಸೆಲೆಬ್ರಿಟಿಗಳ ಜತೆ ಸುದೀಪ್​ ಒಳ್ಳೆಯ ನಂಟು ಹೊಂದಿದ್ದಾರೆ. ಟೋಕಿಯೋ ಒಲಂಪಿಕ್ಸ್​​ನಲ್ಲಿ ಚಿನ್ನದ ಪದಕ ಗೆದ್ದ ನೀರಜ್​ ಚೋಪ್ರಾ ಅವರು ಸುದೀಪ್​ ಜನ್ಮದಿನಕ್ಕೆ ಹಾಗೂ ‘ವಿಕ್ರಾಂತ್​ ರೋಣ’ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ -2020ರಲ್ಲಿ ನೀರಜ್ ಚೋಪ್ರಾ ಅವರು ಭಾರತವನ್ನು ಪ್ರತಿನಿಧಿಸಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಅವರ ಖ್ಯಾತಿ ದೇಶದ ಮೂಲೆಮೂಲೆಗೂ ತಲುಪಿದೆ. ಅವರು ಸುದೀಪ್​ಗೆ ಬರ್ತ್​ಡೇ ವಿಶ್​ ಮಾಡಿರೋದು ವಿಶೇಷ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗುತ್ತಿದೆ.

ನಾಳೆ (ಸೆಪ್ಟೆಂಬರ್​ 2) ‘ಡೆಡ್​ ಮ್ಯಾನ್​ ಆ್ಯಂಥಮ್​’ ರಿಲೀಸ್​ ಆಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ‘ವಿಕ್ರಾಂತ ರೋಣ’ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಇದರಲ್ಲಿ ನೀರಜ್​ ಚೋಪ್ರಾ ಅವರು ಸುದೀಪ್​ಗೆ ಬರ್ತ್​ಡೆ ವಿಶ್​ ಮಾಡಿದ್ದಾರೆ. ಜತೆಗೆ ಅವರ ಸಿನಿಮಾಗೂ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಖುಷಿ ಜತೆ ಅಚ್ಚರಿ ಕೂಡ ಹೊರ ಹಾಕಿದ್ದಾರೆ.

ಕೊವಿಡ್​ ಎರಡನೇ ಅಲೆ ಕಡಿಮೆ ಆಗಿದೆ ನಿಜ. ಆದರೆ, ಮೂರನೇ ಅಲೆ ಬರುವ ಮುನ್ಸೂಚನೆ ಸಿಕ್ಕಿದೆ. ಈ ಕಾರಣಕ್ಕೆ ಸುದೀಪ್​ ಅವರು ಅಭಿಮಾನಿಗಳನ್ನು ಭೇಟಿ ಆಗುತ್ತಿಲ್ಲ. ‘ನನ್ನೆಲ್ಲ ಅಭಿಮಾನಿ ಸ್ನೇಹಿತರಲ್ಲಿ ಮನವಿ. ಕೊವಿಡ್​ ಸಂಕಷ್ಟದ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ನಿಟ್ಟಿನಲ್ಲಿ ನಿಮ್ಮೆಲ್ಲರನ್ನು ಭೇಟಿ ಆಗಲು ಆಗುತ್ತಿಲ್ಲ. ಕ್ಷಮೆ ಇರಲಿ. ಮುಂದೆ ಪರಿಸ್ಥಿತಿ ಸುಧಾರಿಸಿದ ನಂತರ ನಿಮ್ಮೆಲ್ಲರನ್ನೂ ಭೇಟಿ ಆಗುತ್ತೇನೆ. ನೀವು ಇದ್ದಲ್ಲಿಂದಲೇ ನಿಮ್ಮ ಪ್ರೀತಿ ತುಂಬಿದ ಶುಭಾಶಯಗಳನ್ನು ತಿಳಿಸಿ’ ಎಂದು ಸುದೀಪ್​ ಅವರು ‘ಕಿಚ್ಚ ಕ್ರಿಯೇಷನ್​’ ಟ್ವಿಟರ್​ ಖಾತೆ ಮೂಲಕ ಸಂದೇಶ ನೀಡಿದ್ದರು.

ಇದನ್ನೂ ಓದಿ: ಹುಟ್ಟುಹಬ್ಬದ ದಿನ ಅಭಿಮಾನಿಗಳನ್ನು ಭೇಟಿ ಆಗಲ್ಲ ಎಂದ ಸುದೀಪ್​; ಮೊದಲೇ ತಿಳಿಸಿ ಕ್ಷಮೆ ಕೇಳಿದ ಕಿಚ್ಚ

Kichcha Sudeep: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಕಿಚ್ಚ ಸುದೀಪ್​; ಫೋಟೋ ವೈರಲ್​

Published On - 12:08 pm, Wed, 1 September 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ