AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್

ಟೋಕಿಯೋ ಒಲಿಂಪಿಕ್ಸ್ -2020ರಲ್ಲಿ ನೀರಜ್ ಚೋಪ್ರಾ ಅವರು ಭಾರತವನ್ನು ಪ್ರತಿನಿಧಿಸಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಅವರ ಖ್ಯಾತಿ ದೇಶದ ಮೂಲೆಮೂಲೆಗೂ ತಲುಪಿದೆ.

ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್
ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್
TV9 Web
| Edited By: |

Updated on:Sep 01, 2021 | 2:02 PM

Share

ಕಿಚ್ಚ ಸುದೀಪ್​ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಹಿಂದಿ, ತೆಲುಗು ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿರುವ ಅವರು ಪರಭಾಷೆಯಲ್ಲೂ ಅಭಿಮಾನಿ ಬಳಗ ಹೊಂದಿದ್ದಾರೆ. ಬಾಲಿವುಡ್​ನ ಖ್ಯಾತ ನಟ ಸಲ್ಮಾನ್​ ಖಾನ್ ಜತೆ​​ಗೂ ಸುದೀಪ್​ಗೂ ಉತ್ತಮ ಫ್ರೆಂಡ್​ಶಿಪ್​ ಇದೆ. ಇದರ ಜತೆ ಅನೇಕ ಸೆಲೆಬ್ರಿಟಿಗಳ ಜತೆ ಸುದೀಪ್​ ಒಳ್ಳೆಯ ನಂಟು ಹೊಂದಿದ್ದಾರೆ. ಟೋಕಿಯೋ ಒಲಂಪಿಕ್ಸ್​​ನಲ್ಲಿ ಚಿನ್ನದ ಪದಕ ಗೆದ್ದ ನೀರಜ್​ ಚೋಪ್ರಾ ಅವರು ಸುದೀಪ್​ ಜನ್ಮದಿನಕ್ಕೆ ಹಾಗೂ ‘ವಿಕ್ರಾಂತ್​ ರೋಣ’ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ -2020ರಲ್ಲಿ ನೀರಜ್ ಚೋಪ್ರಾ ಅವರು ಭಾರತವನ್ನು ಪ್ರತಿನಿಧಿಸಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಅವರ ಖ್ಯಾತಿ ದೇಶದ ಮೂಲೆಮೂಲೆಗೂ ತಲುಪಿದೆ. ಅವರು ಸುದೀಪ್​ಗೆ ಬರ್ತ್​ಡೇ ವಿಶ್​ ಮಾಡಿರೋದು ವಿಶೇಷ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗುತ್ತಿದೆ.

ನಾಳೆ (ಸೆಪ್ಟೆಂಬರ್​ 2) ‘ಡೆಡ್​ ಮ್ಯಾನ್​ ಆ್ಯಂಥಮ್​’ ರಿಲೀಸ್​ ಆಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ‘ವಿಕ್ರಾಂತ ರೋಣ’ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಇದರಲ್ಲಿ ನೀರಜ್​ ಚೋಪ್ರಾ ಅವರು ಸುದೀಪ್​ಗೆ ಬರ್ತ್​ಡೆ ವಿಶ್​ ಮಾಡಿದ್ದಾರೆ. ಜತೆಗೆ ಅವರ ಸಿನಿಮಾಗೂ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಖುಷಿ ಜತೆ ಅಚ್ಚರಿ ಕೂಡ ಹೊರ ಹಾಕಿದ್ದಾರೆ.

ಕೊವಿಡ್​ ಎರಡನೇ ಅಲೆ ಕಡಿಮೆ ಆಗಿದೆ ನಿಜ. ಆದರೆ, ಮೂರನೇ ಅಲೆ ಬರುವ ಮುನ್ಸೂಚನೆ ಸಿಕ್ಕಿದೆ. ಈ ಕಾರಣಕ್ಕೆ ಸುದೀಪ್​ ಅವರು ಅಭಿಮಾನಿಗಳನ್ನು ಭೇಟಿ ಆಗುತ್ತಿಲ್ಲ. ‘ನನ್ನೆಲ್ಲ ಅಭಿಮಾನಿ ಸ್ನೇಹಿತರಲ್ಲಿ ಮನವಿ. ಕೊವಿಡ್​ ಸಂಕಷ್ಟದ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ನಿಟ್ಟಿನಲ್ಲಿ ನಿಮ್ಮೆಲ್ಲರನ್ನು ಭೇಟಿ ಆಗಲು ಆಗುತ್ತಿಲ್ಲ. ಕ್ಷಮೆ ಇರಲಿ. ಮುಂದೆ ಪರಿಸ್ಥಿತಿ ಸುಧಾರಿಸಿದ ನಂತರ ನಿಮ್ಮೆಲ್ಲರನ್ನೂ ಭೇಟಿ ಆಗುತ್ತೇನೆ. ನೀವು ಇದ್ದಲ್ಲಿಂದಲೇ ನಿಮ್ಮ ಪ್ರೀತಿ ತುಂಬಿದ ಶುಭಾಶಯಗಳನ್ನು ತಿಳಿಸಿ’ ಎಂದು ಸುದೀಪ್​ ಅವರು ‘ಕಿಚ್ಚ ಕ್ರಿಯೇಷನ್​’ ಟ್ವಿಟರ್​ ಖಾತೆ ಮೂಲಕ ಸಂದೇಶ ನೀಡಿದ್ದರು.

ಇದನ್ನೂ ಓದಿ: ಹುಟ್ಟುಹಬ್ಬದ ದಿನ ಅಭಿಮಾನಿಗಳನ್ನು ಭೇಟಿ ಆಗಲ್ಲ ಎಂದ ಸುದೀಪ್​; ಮೊದಲೇ ತಿಳಿಸಿ ಕ್ಷಮೆ ಕೇಳಿದ ಕಿಚ್ಚ

Kichcha Sudeep: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಕಿಚ್ಚ ಸುದೀಪ್​; ಫೋಟೋ ವೈರಲ್​

Published On - 12:08 pm, Wed, 1 September 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು