AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಬರ್ತ್​​ಡೇಗೆ ಶುರುವಾಯ್ತು ಕೌಂಟ್​ಡೌನ್​; ಶಿವಣ್ಣ ಅನಾವರಣ ಮಾಡಿದ ಕಾಮನ್ ಡಿಪಿ ಹೇಗಿದೆ ನೋಡಿ

ಕಿಚ್ಚ ಸುದೀಪ್ ಅವರಿಗೆ ಬರ್ತ್​ಡೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ‘ವಿಕ್ರಾಂತ್​’ ರೋಣ ಸಿನಿಮಾದ ಯಶಸ್ಸು. ಇದು ಸುದೀಪ್ ಹಾಗೂ ಅವರ ಫ್ಯಾನ್ಸ್ ಖುಷಿಯನ್ನು ಹೆಚ್ಚಿಸಿದೆ. ಈ ಕಾರಣಕ್ಕೆ ಕಿಚ್ಚನಿಗೆ ಈ ಬಾರಿಯ ಬರ್ತ್​ಡೇ ವಿಶೇಷವಾಗಿರಲಿದೆ.

ಕಿಚ್ಚ ಸುದೀಪ್ ಬರ್ತ್​​ಡೇಗೆ ಶುರುವಾಯ್ತು ಕೌಂಟ್​ಡೌನ್​; ಶಿವಣ್ಣ ಅನಾವರಣ ಮಾಡಿದ ಕಾಮನ್ ಡಿಪಿ ಹೇಗಿದೆ ನೋಡಿ
ಸುದೀಪ್
TV9 Web
| Edited By: |

Updated on: Aug 27, 2022 | 7:53 PM

Share

ಕಿಚ್ಚ ಸುದೀಪ್ (Kichcha Sudeep) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ‘ವಿಕ್ರಾಂತ್ ರೋಣ’ ಸಿನಿಮಾದಿಂದ ಬಾಲಿವುಡ್​ನಲ್ಲಿ ಅವರಿಗೆ ಅಭಿಮಾನಿಗಳು ಹೆಚ್ಚಿದ್ದಾರೆ. ಈಗ ಸುದೀಪ್ ಜನ್ಮದಿನಕ್ಕೆ ಕೌಂಟ್​ಡೌನ್ ಶುರುವಾಗಿದೆ. ಸೆಪ್ಟೆಂಬರ್ 2ರಂದು ಸುದೀಪ್ 49ನೇ ವರ್ಷದ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಈಗ ಶಿವರಾಜ್​ಕುಮಾರ್ (Shivarajkumar) ಅವರು ಕಾಮನ್ ಡಿಪಿ ಅನಾವರಣ ಮಾಡಿದ್ದಾರೆ. ಇದನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಕಿಚ್ಚ ಸುದೀಪ್ ಅವರಿಗೆ ಬರ್ತ್​ಡೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ‘ವಿಕ್ರಾಂತ್​’ ರೋಣ ಸಿನಿಮಾದ ಯಶಸ್ಸು. ಜುಲೈ 29ರಂದು ರಿಲೀಸ್ ಆದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದು ಸುದೀಪ್ ಹಾಗೂ ಅವರ ಫ್ಯಾನ್ಸ್ ಖುಷಿಯನ್ನು ಹೆಚ್ಚಿಸಿದೆ. ಈ ಕಾರಣಕ್ಕೆ ಕಿಚ್ಚನಿಗೆ ಈ ಬಾರಿಯ ಬರ್ತ್​ಡೇ ವಿಶೇಷವಾಗಿರಲಿದೆ.

ಇದನ್ನೂ ಓದಿ
Image
ಮುಖ ತೋರಿಸದೇ ಫೇಮಸ್​ ಆದ ಭಾಸ್ಕರ್​; ಕಿಚ್ಚ ಸುದೀಪ್​ ಬದುಕಿನಲ್ಲೂ ಇದ್ದಾನೆ ಅಂಥ ಒಬ್ಬ ವ್ಯಕ್ತಿ
Image
Kichcha Sudeep: ಹೈದರಾಬಾದ್​​ನಲ್ಲಿ ‘ವಿಕ್ರಾಂತ್​ ರೋಣ’ ಸಕ್ಸಸ್​ ಮೀಟ್​; ತೆಲುಗು ಸ್ನೇಹಿತರಿಗೆ, ಪ್ರೇಕ್ಷಕರಿಗೆ ಕಿಚ್ಚನ ಧನ್ಯವಾದ
Image
‘ವಿಕ್ರಾಂತ್​ ರೋಣ’ ಸೂಪರ್​ ಹಿಟ್​; ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ‘ಕಬ್ಜ’ ಮೇಲೆ ಹೆಚ್ಚಿತು ನಿರೀಕ್ಷೆ
Image
‘ವಿಕ್ರಾಂತ್​ ರೋಣ ಪಾರ್ಟ್​ 2 ಐಡಿಯಾ ಇದೆ, ಅದು ಬೇರೆ ಪ್ರಪಂಚದಲ್ಲಿ ನಡೆಯುತ್ತೆ’: ಅನೂಪ್​ ಭಂಡಾರಿ

ಆದರೆ, ಈ ಬಾರಿ ಸುದೀಪ್ ಬರ್ತ್​ಡೇ ಆಚರಿಸಿಕೊಳ್ಳುವುದು ಅನುಮಾನವೇ. ಪುನೀತ್ ರಾಜ್​ಕುಮಾರ್ ಅವರು ನಿಧನ ಹೊಂದಿ ಒಂದು ವರ್ಷ ಕಳೆದಿಲ್ಲ. ಅವರಿಲ್ಲ ಎಂಬ ನೋವು ಈಗಲೂ ಫ್ಯಾನ್ಸ್​ಗೆ ಕಾಡುತ್ತಿದೆ. ಸುದೀಪ್ ಅವರಿಗೂ ಪುನೀತ್​ಗೂ ಒಳ್ಳೆಯ ಬಾಂಧವ್ಯ ಇತ್ತು. ಆದರೆ, ಅವರಿಲ್ಲ ಎಂಬ ನೋವು ಸುದೀಪ್​ಗೆ ಅತಿಯಾಗಿ ಕಾಡುತ್ತಿದೆ. ಈ ಕಾರಣದಿಂದ ಅವರು ಈ ಬಾರಿ ಜನ್ಮದಿನ ಆಚರಿಸಿಕೊಳ್ಳುವುದು ಅನುಮಾನವೇ. ಈ ಬಗ್ಗೆ ಅವರ ಕಡೆಯಿಂದ ಶೀಘ್ರವೇ ಘೋಷಣೆ ಆಗಬೇಕಿದೆ.

ಸುದೀಪ್ ಅವರ ಬರ್ತ್​ಡೇಗೂ ಮೊದಲು ಕಾಮನ್ ಡಿಪಿ ಬಿಡುಗಡೆ ಮಾಡಲಾಗಿದೆ. ಶಿವಣ್ಣ ಅವರು ಕಾಮನ್​ ಡಿಪಿಯನ್ನು ಅನಾವರಣ ಮಾಡಿದ್ದಾರೆ. ಇದು ಸಾಕಷ್ಟು ಗಮನ ಸೆಳೆಯುತ್ತಿದೆ. ಸುದೀಪ್ ಅವರು ಕುಳಿತಿದ್ದಾರೆ. ಅವರ ಹೆಗಲಮೇಲೆ, ಕೈ ಮೇಲೆ, ನೆಲದಮೇಲೆ ಫ್ಯಾನ್ಸ್ ಕುಳಿತಿದ್ದಾರೆ. ಹಿಂಭಾಗದಲ್ಲಿ ‘ಬಾದ್​ಶಾ’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ‘ಬಿಗ್ ಬಾಸ್’ ಮನೆಯಲ್ಲಿ ಸುದೀಪ್ ಹೇಳಿದ ಮಾತನ್ನು ನಡೆಸಿಕೊಡಲೇ ಇಲ್ಲ ಸಾನ್ಯಾ ಅಯ್ಯರ್​

ಕಿಚ್ಚ ಸುದೀಪ್ ಬರ್ತ್​ಡೇಗೆ ಒಂದು ವಿಶೇಷ ಗಿಫ್ಟ್ ಸಿಗುತ್ತಿದೆ. ‘ವಿಕ್ರಾಂತ್ ರೋಣ’ ಸಿನಿಮಾ ಸೆಪ್ಟೆಂಬರ್ 2ರಂದು ಜೀ5 ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ರಿಲೀಸ್ ಆಗುತ್ತಿದೆ. ಇದು ಸುದೀಪ್ ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರಮಂದಿರದಲ್ಲಿ ಸಿನಿಮಾ ಮಿಸ್ ಮಾಡಿಕೊಂಡವರು ಈ ಚಿತ್ರವನ್ನು ಒಟಿಟಿಯಲ್ಲಿ ಕಣ್ತುಂಬಿಕೊಳ್ಳಬಹುದು. ಅದು ಸುದೀಪ್ ಬರ್ತ್​ಡೇ ದಿನವೇ ಅನ್ನೋದು ವಿಶೇಷ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್