ಕಿಚ್ಚ ಸುದೀಪ್ ಬರ್ತ್​​ಡೇಗೆ ಶುರುವಾಯ್ತು ಕೌಂಟ್​ಡೌನ್​; ಶಿವಣ್ಣ ಅನಾವರಣ ಮಾಡಿದ ಕಾಮನ್ ಡಿಪಿ ಹೇಗಿದೆ ನೋಡಿ

ಕಿಚ್ಚ ಸುದೀಪ್ ಅವರಿಗೆ ಬರ್ತ್​ಡೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ‘ವಿಕ್ರಾಂತ್​’ ರೋಣ ಸಿನಿಮಾದ ಯಶಸ್ಸು. ಇದು ಸುದೀಪ್ ಹಾಗೂ ಅವರ ಫ್ಯಾನ್ಸ್ ಖುಷಿಯನ್ನು ಹೆಚ್ಚಿಸಿದೆ. ಈ ಕಾರಣಕ್ಕೆ ಕಿಚ್ಚನಿಗೆ ಈ ಬಾರಿಯ ಬರ್ತ್​ಡೇ ವಿಶೇಷವಾಗಿರಲಿದೆ.

ಕಿಚ್ಚ ಸುದೀಪ್ ಬರ್ತ್​​ಡೇಗೆ ಶುರುವಾಯ್ತು ಕೌಂಟ್​ಡೌನ್​; ಶಿವಣ್ಣ ಅನಾವರಣ ಮಾಡಿದ ಕಾಮನ್ ಡಿಪಿ ಹೇಗಿದೆ ನೋಡಿ
ಸುದೀಪ್
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 27, 2022 | 7:53 PM

ಕಿಚ್ಚ ಸುದೀಪ್ (Kichcha Sudeep) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ‘ವಿಕ್ರಾಂತ್ ರೋಣ’ ಸಿನಿಮಾದಿಂದ ಬಾಲಿವುಡ್​ನಲ್ಲಿ ಅವರಿಗೆ ಅಭಿಮಾನಿಗಳು ಹೆಚ್ಚಿದ್ದಾರೆ. ಈಗ ಸುದೀಪ್ ಜನ್ಮದಿನಕ್ಕೆ ಕೌಂಟ್​ಡೌನ್ ಶುರುವಾಗಿದೆ. ಸೆಪ್ಟೆಂಬರ್ 2ರಂದು ಸುದೀಪ್ 49ನೇ ವರ್ಷದ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಈಗ ಶಿವರಾಜ್​ಕುಮಾರ್ (Shivarajkumar) ಅವರು ಕಾಮನ್ ಡಿಪಿ ಅನಾವರಣ ಮಾಡಿದ್ದಾರೆ. ಇದನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಕಿಚ್ಚ ಸುದೀಪ್ ಅವರಿಗೆ ಬರ್ತ್​ಡೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ‘ವಿಕ್ರಾಂತ್​’ ರೋಣ ಸಿನಿಮಾದ ಯಶಸ್ಸು. ಜುಲೈ 29ರಂದು ರಿಲೀಸ್ ಆದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದು ಸುದೀಪ್ ಹಾಗೂ ಅವರ ಫ್ಯಾನ್ಸ್ ಖುಷಿಯನ್ನು ಹೆಚ್ಚಿಸಿದೆ. ಈ ಕಾರಣಕ್ಕೆ ಕಿಚ್ಚನಿಗೆ ಈ ಬಾರಿಯ ಬರ್ತ್​ಡೇ ವಿಶೇಷವಾಗಿರಲಿದೆ.

ಇದನ್ನೂ ಓದಿ
Image
ಮುಖ ತೋರಿಸದೇ ಫೇಮಸ್​ ಆದ ಭಾಸ್ಕರ್​; ಕಿಚ್ಚ ಸುದೀಪ್​ ಬದುಕಿನಲ್ಲೂ ಇದ್ದಾನೆ ಅಂಥ ಒಬ್ಬ ವ್ಯಕ್ತಿ
Image
Kichcha Sudeep: ಹೈದರಾಬಾದ್​​ನಲ್ಲಿ ‘ವಿಕ್ರಾಂತ್​ ರೋಣ’ ಸಕ್ಸಸ್​ ಮೀಟ್​; ತೆಲುಗು ಸ್ನೇಹಿತರಿಗೆ, ಪ್ರೇಕ್ಷಕರಿಗೆ ಕಿಚ್ಚನ ಧನ್ಯವಾದ
Image
‘ವಿಕ್ರಾಂತ್​ ರೋಣ’ ಸೂಪರ್​ ಹಿಟ್​; ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ‘ಕಬ್ಜ’ ಮೇಲೆ ಹೆಚ್ಚಿತು ನಿರೀಕ್ಷೆ
Image
‘ವಿಕ್ರಾಂತ್​ ರೋಣ ಪಾರ್ಟ್​ 2 ಐಡಿಯಾ ಇದೆ, ಅದು ಬೇರೆ ಪ್ರಪಂಚದಲ್ಲಿ ನಡೆಯುತ್ತೆ’: ಅನೂಪ್​ ಭಂಡಾರಿ

ಆದರೆ, ಈ ಬಾರಿ ಸುದೀಪ್ ಬರ್ತ್​ಡೇ ಆಚರಿಸಿಕೊಳ್ಳುವುದು ಅನುಮಾನವೇ. ಪುನೀತ್ ರಾಜ್​ಕುಮಾರ್ ಅವರು ನಿಧನ ಹೊಂದಿ ಒಂದು ವರ್ಷ ಕಳೆದಿಲ್ಲ. ಅವರಿಲ್ಲ ಎಂಬ ನೋವು ಈಗಲೂ ಫ್ಯಾನ್ಸ್​ಗೆ ಕಾಡುತ್ತಿದೆ. ಸುದೀಪ್ ಅವರಿಗೂ ಪುನೀತ್​ಗೂ ಒಳ್ಳೆಯ ಬಾಂಧವ್ಯ ಇತ್ತು. ಆದರೆ, ಅವರಿಲ್ಲ ಎಂಬ ನೋವು ಸುದೀಪ್​ಗೆ ಅತಿಯಾಗಿ ಕಾಡುತ್ತಿದೆ. ಈ ಕಾರಣದಿಂದ ಅವರು ಈ ಬಾರಿ ಜನ್ಮದಿನ ಆಚರಿಸಿಕೊಳ್ಳುವುದು ಅನುಮಾನವೇ. ಈ ಬಗ್ಗೆ ಅವರ ಕಡೆಯಿಂದ ಶೀಘ್ರವೇ ಘೋಷಣೆ ಆಗಬೇಕಿದೆ.

ಸುದೀಪ್ ಅವರ ಬರ್ತ್​ಡೇಗೂ ಮೊದಲು ಕಾಮನ್ ಡಿಪಿ ಬಿಡುಗಡೆ ಮಾಡಲಾಗಿದೆ. ಶಿವಣ್ಣ ಅವರು ಕಾಮನ್​ ಡಿಪಿಯನ್ನು ಅನಾವರಣ ಮಾಡಿದ್ದಾರೆ. ಇದು ಸಾಕಷ್ಟು ಗಮನ ಸೆಳೆಯುತ್ತಿದೆ. ಸುದೀಪ್ ಅವರು ಕುಳಿತಿದ್ದಾರೆ. ಅವರ ಹೆಗಲಮೇಲೆ, ಕೈ ಮೇಲೆ, ನೆಲದಮೇಲೆ ಫ್ಯಾನ್ಸ್ ಕುಳಿತಿದ್ದಾರೆ. ಹಿಂಭಾಗದಲ್ಲಿ ‘ಬಾದ್​ಶಾ’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ‘ಬಿಗ್ ಬಾಸ್’ ಮನೆಯಲ್ಲಿ ಸುದೀಪ್ ಹೇಳಿದ ಮಾತನ್ನು ನಡೆಸಿಕೊಡಲೇ ಇಲ್ಲ ಸಾನ್ಯಾ ಅಯ್ಯರ್​

ಕಿಚ್ಚ ಸುದೀಪ್ ಬರ್ತ್​ಡೇಗೆ ಒಂದು ವಿಶೇಷ ಗಿಫ್ಟ್ ಸಿಗುತ್ತಿದೆ. ‘ವಿಕ್ರಾಂತ್ ರೋಣ’ ಸಿನಿಮಾ ಸೆಪ್ಟೆಂಬರ್ 2ರಂದು ಜೀ5 ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ರಿಲೀಸ್ ಆಗುತ್ತಿದೆ. ಇದು ಸುದೀಪ್ ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರಮಂದಿರದಲ್ಲಿ ಸಿನಿಮಾ ಮಿಸ್ ಮಾಡಿಕೊಂಡವರು ಈ ಚಿತ್ರವನ್ನು ಒಟಿಟಿಯಲ್ಲಿ ಕಣ್ತುಂಬಿಕೊಳ್ಳಬಹುದು. ಅದು ಸುದೀಪ್ ಬರ್ತ್​ಡೇ ದಿನವೇ ಅನ್ನೋದು ವಿಶೇಷ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ