AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಲ್ಲ ರಂಗ ಬಾಷಾ’ ಚಿತ್ರದ ಹೊಸ ಪೋಸ್ಟರ್ ರಿಲೀಸ್; ಆ್ಯಕ್ಷನ್ ಅವತಾರದಲ್ಲಿ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜನ್ಮದಿನದ ಪ್ರಯುಕ್ತ ಬಹುನಿರೀಕ್ಷಿತ 'ಬಿಲ್ಲ ರಂಗ ಬಾಷಾ' ಸಿನಿಮಾದ ಧಮಾಕಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಅನೂಪ್ ಭಂಡಾರಿ ನಿರ್ದೇಶನದ ಈ ಬಿಗ್ ಬಜೆಟ್ ಚಿತ್ರದಲ್ಲಿ ಸುದೀಪ್ ರಗಡ್ ಲುಕ್‌ನಲ್ಲಿ ಮಿಂಚಿದ್ದು, ಸಿನಿಮಾ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಚಿತ್ರದ ಮೇಲೆ ಭಾರಿ ನಿರೀಕ್ಷೆ ಸೃಷ್ಟಿಯಾಗಿದೆ.

'ಬಿಲ್ಲ ರಂಗ ಬಾಷಾ' ಚಿತ್ರದ ಹೊಸ ಪೋಸ್ಟರ್ ರಿಲೀಸ್; ಆ್ಯಕ್ಷನ್ ಅವತಾರದಲ್ಲಿ ಸುದೀಪ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Sep 02, 2026 | 8:53 AM

Share

ಮುಖ್ಯಾಂಶಗಳು

  • ಹಿಮದ ಸಾಮ್ರಾಜ್ಯದಲ್ಲಿ ರಗಡ್ ಲುಕ್‌ನಲ್ಲಿ ಮಿಂಚಿದ ಕಿಚ್ಚ
  • 'ವಿಕ್ರಾಂತ್ ರೋಣ' ಕಾಂಬಿನೇಷನ್ ರಿಪೀಟ್
  • ಅನೂಪ್ ಭಂಡಾರಿ-ಸುದೀಪ್ ಜುಗಲ್ಬಂದಿ

ಹಿಮಾಚ್ಛಾದಿತ ಪ್ರದೇಶ. ಅಲ್ಲಿ ವೇಗವಾಗಿ ಚಲಿಸುತ್ತಿರೋ ಬೈಕ್. ಮೇಲ್ಭಾಗದಲ್ಲಿ ಹಾರುತ್ತಿರೋ ಹೆಲಿಕಾಪ್ಟರ್. ಬೈಕ್​ ಮೇಲೆ ಕುಳಿತು ರೈಡ್ ಮಾಡ್ತಿರೋದು ಬೇರೆ ಯಾರೂ ಅಲ್ಲ ಬರ್ತ್​ಡೇ ಬಾಯ್ ಕಿಚ್ಚ ಸುದೀಪ್. ಸುದೀಪ್ ಅವರ 53ನೇ ಜನ್ಮದಿನದ ಸಂದರ್ಭದಲ್ಲಿ’ಬಿಲ್ಲ ರಂಗ ಬಾಷಾ’ ಸಿನಿಮಾದ ಭರ್ಜರಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಈ ಪೋಸ್ಟರ್ ಅಭಿಮಾನಿಗಳ ಗಮನ ಸೆಳೆದಿದೆ.

ಪೋಸ್ಟರ್‌ನಲ್ಲಿ ಕಿಚ್ಚ ಸುದೀಪ್ ಅವರು ಹಿಂದೆಂದೂ ಕಾಣಿಸಿಕೊಂಡಿರದ ಅತ್ಯಂತ ರಗಡ್ ಹಾಗೂ ಫ್ಯೂಚರಿಸ್ಟಿಕ್ ಲುಕ್‌ನಲ್ಲಿ ಮಿಂಚಿದ್ದಾರೆ. ಹಿಮದಿಂದ ಆವೃತವಾದ ಹಿನ್ನೆಲೆಯಲ್ಲಿ ಬೈಕ್ ಚಲಾಯಿಸುತ್ತಾ, ಕಣ್ಣಿಗೆ ಗಾಗಲ್ಸ್ ಮತ್ತು ವಿಶಿಷ್ಟ ಶೈಲಿಯ ಕೋಟ್ ಧರಿಸಿರುವ ಅವರ ಮಾಸ್ ಲುಕ್ ಅಭಿಮಾನಿಗಳ ಹುಚ್ಚೆಬ್ಬಿಸಿದೆ. ಹಿನ್ನೆಲೆಯಲ್ಲಿ ವಿಮಾನ ಹಾಗೂ ರೈಲು ಪಲ್ಟಿಯಾಗುತ್ತಿರುವ ದೃಶ್ಯಗಳು ಇವೆ. ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎಂಬುದರ ಸೂಚನೆ ನೀಡಿದೆ.

ಇದನ್ನೂ ಓದಿ: ‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್

‘ವಿಕ್ರಾಂತ್ ರೋಣ’ ಯಶಸ್ಸಿನ ನಂತರ ನಟ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಪ್ರೈಮ್ ಶೋ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ. ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಈ ಬಿಗ್ ಬಜೆಟ್ ಸಿನಿಮಾವನ್ನು ನಿರ್ಮಿಸುತ್ತಿದ್ದು, ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ.

‘ಬಿಲ್ಲ ರಂಗ ಬಾಷಾ’ ಸಿನಿಮಾ ಕಾರಣಾಂತರಗಳಿಂದ ವಿಳಂಬ ಆಗಿದೆ. ಜೂನ್ ತಿಂಗಳಲ್ಲಿ ಸಿನಿಮಾದ ಶೂಟ್ ಮತ್ತೆ ಶುರುವಾಗಿದೆ.  ಈ ಬಿಗ್ ಬಜೆಟ್ ಆಕ್ಷನ್ ಎಂಟರ್‌ಟೈನರ್ ಸಿನಿಮಾ ಮುಂದಿನ ವರ್ಷ (2027) ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಪೋಸ್ಟರ್ ರಿಲೀಸ್ ಆಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಿನಿಮಾದ ಮೇಲಿನ ನಿರೀಕ್ಷೆ ಇಮ್ಮಡಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್