AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Kichcha Sudeep: ಸುದೀಪ್​ ಜನ್ಮದಿನ; ಇಂದು ಕಿಚ್ಚನ ಹುಟ್ಟುಹಬ್ಬಕ್ಕೆ ಸಿಗುತ್ತಿರೋ ಉಡುಗೊರೆಗಳೇನು?

Kichcha Sudeep Birthday: ಸುದೀಪ್​ ಜನ್ಮದಿನದ ಅಂಗವಾಗಿ, ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ ಚಿತ್ರತಂಡದ ಕಡೆಯಿಂದ ‘ಡೆಡ್​ ಮ್ಯಾನ್ಸ್​​ ಆ್ಯಂಥಮ್​’ ರಿಲೀಸ್​ ಮಾಡುತ್ತಿದೆ.

Happy Birthday Kichcha Sudeep: ಸುದೀಪ್​ ಜನ್ಮದಿನ; ಇಂದು ಕಿಚ್ಚನ ಹುಟ್ಟುಹಬ್ಬಕ್ಕೆ ಸಿಗುತ್ತಿರೋ ಉಡುಗೊರೆಗಳೇನು?
ಕಿಚ್ಚ ಸುದೀಪ್​
TV9 Web
| Edited By: |

Updated on: Sep 02, 2021 | 7:22 AM

Share

ಇಂದು (ಸೆಪ್ಟೆಂಬರ್ 2) ಕಿಚ್ಚ ಸುದೀಪ್​ ಜನ್ಮದಿನ. ಅವರು ಈಗ 50ನೇ ವಸಂತಕ್ಕೆ ಕಾಲಿಟ್ಟ ಸಂಭ್ರಮದಲ್ಲಿದ್ದಾರೆ. ಜನ್ಮದಿನದ ಅಂಗವಾಗಿ ಕಿಚ್ಚನಿಗೆ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಸುದೀಪ್​ಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ. ಕೊವಿಡ್​ ಕಾರಣದಿಂದ ಸುದೀಪ್​ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿಲ್ಲ ಅನ್ನೋದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಸೆಲೆಬ್ರಿಟಿಗಳ ಬರ್ತ್​ಡೇ ಪ್ರಯುಕ್ತ ಚಿತ್ರತಂಡದಿಂದ ಉಡುಗೊರೆ ಸಿಗೋದು ಸಂಪ್ರದಾಯ. ಇದು ಸುದೀಪ್​ ಜನ್ಮದಿನದಂದೂ ಮುಂದುವರಿದಿದೆ. ಸುದೀಪ್​ ಜನ್ಮದಿನದ ಅಂಗವಾಗಿ, ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ ಚಿತ್ರತಂಡದ ಕಡೆಯಿಂದ ‘ಡೆಡ್​ ಮ್ಯಾನ್ಸ್​ ಆ್ಯಂಥಮ್​’ ರಿಲೀಸ್​ ಆಗುತ್ತಿದೆ. ಇದಕ್ಕಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಸುದೀಪ್​ ‘ಕೋಟಿಗೊಬ್ಬ 3’ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರತಂಡ ಕೂಡ ಸುದೀಪ್​ ಅಭಿಮಾನಿಗಳಿಗೆ ಸರ್​ಪ್ರೈಸ್​ ಕೊಡೋಕೆ ರೆಡಿ ಆಗಿದೆ.

‘ಅಭಿನಯ ಚಕ್ರವರ್ತಿ’ ಸುದೀಪ್ ಅವರ ಬದುಕಿನ ಕತೆಯನ್ನು ಒಳಗೊಂಡ ‘ಕನ್ನಡ ಮಾಣಿಕ್ಯ ಕಿಚ್ಚ’ ಪುಸ್ತಕ ರಿಲೀಸ್​ ಆಗಿತ್ತು. ಪತ್ರಕರ್ತ ಡಾ. ಶರಣು ಹುಲ್ಲೂರು ಅವರು ಇದನ್ನು ಬರೆದಿದ್ದರು.  ಈಗ ಇದು ಆಡಿಯೋ ಮತ್ತು ಇ-ಬುಕ್ ರೂಪದಲ್ಲಿ ಇಂದು (ಸೆ. 2) ಹೊರ ಬರುತ್ತಿದೆ ಅನ್ನೋದು ವಿಶೇಷ. ಇದು ಕೂಡ ಅಭಿಮಾನಿಗಳಿಗೆ ಖುಷಿ ನೀಡಿದೆ.

ಇನ್ನು, ಸಾಕಷ್ಟು ಸೆಲೆಬ್ರಿಟಿಗಳು ಸುದೀಪ್​ ಜನ್ಮದಿನಕ್ಕೆ ಶುಭಾಶಯ ಕೋರುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಸುದೀಪ್​ ಹೆಸರು ಟ್ರೆಂಡ್​ ಆಗಿದೆ. ಪರಭಾಷೆಯ ನಟರೂ ಕೂಡ ಸುದೀಪ್​ಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಟೀಮ್​ ಇಂಡಿಯಾ ಮಾಜಿ ಆಟಗಾರ ಅನಿಲ್​ ಕುಂಬ್ಳೆ ಅವರು ಸುದೀಪ್​ ಅವರ ಕಾಮನ್​ ಡಿಪಿ ಬಿಡುಗಡೆ ಮಾಡಿದ್ದಾರೆ. ಇದನ್ನು ಅಭಿಮಾನಿಗಳು ತಮ್ಮ ಡಿಪಿಗೆ ಹಾಕಿಕೊಂಡು ಸಂಭ್ರಮಿಸುತ್ತಿದ್ದಾರೆ.

ಕೊವಿಡ್​ ಎರಡನೇ ಅಲೆ ಕಡಿಮೆ ಆಗಿದೆ ನಿಜ. ಆದರೆ, ಮೂರನೇ ಅಲೆ ಬರುವ ಮುನ್ಸೂಚನೆ ಸಿಕ್ಕಿದೆ. ಈ ಕಾರಣಕ್ಕೆ ಸುದೀಪ್​ ಅವರು ಅಭಿಮಾನಿಗಳನ್ನು ಭೇಟಿ ಆಗುತ್ತಿಲ್ಲ. ‘ನನ್ನೆಲ್ಲ ಅಭಿಮಾನಿ ಸ್ನೇಹಿತರಲ್ಲಿ ಮನವಿ. ಕೊವಿಡ್​ ಸಂಕಷ್ಟದ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ನಿಟ್ಟಿನಲ್ಲಿ ನಿಮ್ಮೆಲ್ಲರನ್ನು ಭೇಟಿ ಆಗಲು ಆಗುತ್ತಿಲ್ಲ. ಕ್ಷಮೆ ಇರಲಿ. ಮುಂದೆ ಪರಿಸ್ಥಿತಿ ಸುಧಾರಿಸಿದ ನಂತರ ನಿಮ್ಮೆಲ್ಲರನ್ನೂ ಭೇಟಿ ಆಗುತ್ತೇನೆ. ನೀವು ಇದ್ದಲ್ಲಿಂದಲೇ ನಿಮ್ಮ ಪ್ರೀತಿ ತುಂಬಿದ ಶುಭಾಶಯಗಳನ್ನು ತಿಳಿಸಿ’ ಎಂದು ಸುದೀಪ್​ ಅವರು ‘ಕಿಚ್ಚ ಕ್ರಿಯೇಷನ್​’ ಟ್ವಿಟರ್​ ಖಾತೆ ಮೂಲಕ ಸಂದೇಶ ನೀಡಿದ್ದರು.

ಇದನ್ನೂ ಓದಿ:

Kichcha Sudeep: ಕಿಚ್ಚ ಸುದೀಪ್​ ಬರ್ತ್​ಡೇಗೆ 12 ಕಾರ್ಯಕ್ರಮ; ಇಲ್ಲಿದೆ ಫುಲ್​ ಡಿಟೇಲ್ಸ್​

ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ