AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್​ನ ತಮ್ಮ ಎಂದು ಕರೆದ ಸುದೀಪ್; ಕಿಚ್ಚನ ಮಾತಿಗೊಂದು ಅರ್ಥವಿದೆ..

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಮೂಲಕ ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಆದರೂ ಅವರಿಗೆ ಸುದೀಪ್ ಅವರ ಮೇಲಿರುವ ಪ್ರೀತಿ, ಅಭಿಮಾನ ಕಡಿಮೆ ಆಗಿಲ್ಲ. ಈಗ ಸುದೀಪ್ ಅವರು ಕೂಡ ರಿಷಬ್ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ಆ ವಿಡಿಯೋ ವೈರಲ್ ಆಗಿದೆ.

ರಿಷಬ್​ನ ತಮ್ಮ ಎಂದು ಕರೆದ ಸುದೀಪ್; ಕಿಚ್ಚನ ಮಾತಿಗೊಂದು ಅರ್ಥವಿದೆ..
ರಿಷಬ್
ರಾಜೇಶ್ ದುಗ್ಗುಮನೆ
|

Updated on: Sep 25, 2024 | 10:44 AM

Share

ಕಿಚ್ಚ ಸುದೀಪ್ ಹಾಗೂ ರಿಷಬ್ ಶೆಟ್ಟಿ ಮಧ್ಯೆ ಒಳ್ಳೆಯ ಆಪ್ತತೆ ಇದೆ. ರಿಷಬ್ ಶೆಟ್ಟಿ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದರೂ ತಮಗೆ ಸ್ಫೂರ್ತಿ ತುಂಬಿದ, ಏನೂ ಇಲ್ಲದಾಗಲೂ ಬೆಂಬಲಿಸಿದ ಸುದೀಪ್ ಅವರನ್ನು ಮರೆತಿಲ್ಲ. ಎಷ್ಟೇ ಬೆಳೆದರೂ ಸುದೀಪ್ ಅವರನ್ನು ನೆನಪಿನಲ್ಲಿ ಇಟ್ಟುಕೊಳ್ಳೋದಾಗಿ ಅವರು ಹೇಳಿದ್ದಾರೆ. ಈಗ ಸುದೀಪ್ ಅವರು ಕೂಡ ರಿಷಬ್ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

ಕಿಚ್ಚ ಸುದೀಪ್ ಅವರು ಈ ಬಾರಿಯ ಬಿಗ್ ಬಾಸ್ ನಡೆಸಿಕೊಡುವುದಿಲ್ಲ ಎನ್ನುವ ಸುದ್ದಿ ಹರಿದಾಡಿತ್ತು. ರಿಷಬ್ ಅವರು ‘ಬಿಗ್ ಬಾಸ್’ ನಿರೂಪಣೆಗೆ ಇರುವ ಮುಂದಿನ ಆಯ್ಕೆ ಎಂಬ ಮಾತುಗಳು ಕೂಡ ಇದ್ದವು. ಇತ್ತೀಚೆಗೆ ನಡೆದ ಬಿಗ್ ಬಾಸ್ ಸುದ್ದಿಗೋಷ್ಠಿಯಲ್ಲಿ ಸುದೀಪ್​ಗೆ ಈ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ರಿಷಬ್ ಹೆಸರು ಕೇಳಿ ಬಂದಿತ್ತಲ್ಲ’ ಎಂದು ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಅವರು, ‘ಕೇಳಿ ಬರ್ಲಿ ಬಿಡಿ. ಒಳ್ಳೆಯ ಹೆಸರು ತಾನೇ ಕೇಳಿ ಬಂದಿತ್ತು. ನಮ್ಮ ತಮ್ಮಂದೇ ಬಂದಿದ್ದು, ಒಳ್ಳೆಯದಾಗಲಿ’ ಎಂದಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ರಿಷಬ್ ಹಾಗು ಸುದೀಪ್ ಮಧ್ಯೆ ಇರುವ ಗೆಳೆತನವನ್ನು ಎಲ್ಲರೂ ಕೊಂಡಾಡಿದ್ದಾರೆ.

ಇದನ್ನೂ ಓದಿ: ಜೂ.ಎನ್​ಟಿಆರ್​ ಹಾಗೂ ಪ್ರಶಾಂತ್​ ನೀಲ್​ಗೆ ಹುಟ್ಟೂರು ಪರಿಚಯಿಸಿದ ರಿಷಬ್ ಶೆಟ್ಟಿ

ಇತ್ತೀಚೆಗೆ ರಿಷಬ್ ಅವರು ಮಾತನಾಡಿದ್ದರು. ಈ ವೇಳೆ ‘ಕಾಂತಾರಾದ ಅಪ್ಪನಂಥ ಸಿನಿಮಾ ಮಾಡಿದರೂ ನಾನು ಸುದೀಪ್ ಅಭಿಮಾನಿ’ ಎಂದು ಹೇಳಿದ್ದರು. ಈ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ರಿಷಬ್ ಅವರು ಸದ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ನಿರೂಪಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ