AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದ ದಿನ ಅಭಿಮಾನಿಗಳನ್ನು ಭೇಟಿ ಆಗಲ್ಲ ಎಂದ ಸುದೀಪ್​; ಮೊದಲೇ ತಿಳಿಸಿ ಕ್ಷಮೆ ಕೇಳಿದ ಕಿಚ್ಚ

Kichcha Sudeep Birthday: ಸೆ.2ರಂದು ಸುದೀಪ್​ ಜನ್ಮದಿನ. ಅಂದು ಅವರನ್ನು ಭೇಟಿ ಆಗಬೇಕು ಎಂಬುದು ಲಕ್ಷಾಂತರ ಅಭಿಮಾನಿಗಳ ಬಯಕೆ. ಆದರೆ ಕೊವಿಡ್​ ಕಾರಣದಿಂದ ಸುದೀಪ್​ ಯಾರನ್ನೂ ಭೇಟಿ ಆಗುತ್ತಿಲ್ಲ.

ಹುಟ್ಟುಹಬ್ಬದ ದಿನ ಅಭಿಮಾನಿಗಳನ್ನು ಭೇಟಿ ಆಗಲ್ಲ ಎಂದ ಸುದೀಪ್​; ಮೊದಲೇ ತಿಳಿಸಿ ಕ್ಷಮೆ ಕೇಳಿದ ಕಿಚ್ಚ
ಕಿಚ್ಚ ಸುದೀಪ್​
TV9 Web
| Edited By: |

Updated on: Aug 28, 2021 | 12:31 PM

Share

ನಟ ಕಿಚ್ಚ ಸುದೀಪ್​ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಪ್ರತಿ ವರ್ಷ ಅವರ ಬರ್ತ್​ಡೇ ಅಚರಿಸಲು ಎಲ್ಲರೂ ಕಾಯುತ್ತಿರುತ್ತಾರೆ. ಒಂದು ತಿಂಗಳು ಮುನ್ನವೇ ಅದಕ್ಕಾಗಿ ತಯಾರಿ ನಡೆಯುತ್ತದೆ. ನೆಚ್ಚಿನ ನಟನನ್ನು ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಬರುತ್ತಾರೆ. ಆದರೆ ಕೊರೊನಾ ವೈರಸ್​ ಕಾರಣದಿಂದಾಗಿ ಈ ಎಲ್ಲ ಸಂಭ್ರಮಗಳಿಗೂ ಕಳೆದ ವರ್ಷದಿಂದ ಬ್ರೇಕ್​ ಬಿದ್ದಿದೆ. ಈ ವರ್ಷ ಕೂಡ ಫ್ಯಾನ್ಸ್ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಳ್ಳದೇ ಇರಲು ಸುದೀಪ್​ ನಿರ್ಧರಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಮುಂಚಿತವಾಗಿ ತಿಳಿಸಿದ್ದಾರೆ.

ಸೆ.2ರಂದು ಸುದೀಪ್​ ಜನ್ಮದಿನ. ಅಂದು ಅವರನ್ನು ಭೇಟಿ ಆಗಬೇಕು ಎಂಬುದು ಲಕ್ಷಾಂತರ ಅಭಿಮಾನಿಗಳ ಬಯಕೆ. ಆದರೆ ಕೊವಿಡ್​ ಕಾರಣದಿಂದ ಸುದೀಪ್​ ಯಾರನ್ನೂ ಭೇಟಿ ಆಗುತ್ತಿಲ್ಲ. ‘ನನ್ನೆಲ್ಲ ಅಭಿಮಾನಿ ಸ್ನೇಹಿತರಲ್ಲಿ ಮನವಿ. ಕೊವಿಡ್​ ಸಂಕಷ್ಟದ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ನಿಟ್ಟಿನಲ್ಲಿ ನಿಮ್ಮೆಲ್ಲರನ್ನು ಭೇಟಿ ಆಗಲು ಆಗುತ್ತಿಲ್ಲ. ಕ್ಷಮೆ ಇರಲಿ. ಮುಂದೆ ಪರಿಸ್ಥಿತಿ ಸುಧಾರಿಸಿದ ನಂತರ ನಿಮ್ಮೆಲ್ಲರನ್ನೂ ಭೇಟಿ ಆಗುತ್ತೇನೆ. ನೀವು ಇದ್ದಲ್ಲಿಂದಲೇ ನಿಮ್ಮ ಪ್ರೀತಿ ತುಂಬಿದ ಶುಭಾಶಯಗಳನ್ನು ತಿಳಿಸಿ’ ಎಂದು ಸುದೀಪ್​ ಅವರು ‘ಕಿಚ್ಚ ಕ್ರಿಯೇಷನ್​’ ಟ್ವಿಟರ್​ ಖಾತೆ ಮೂಲಕ ಸಂದೇಶ ನೀಡಿದ್ದಾರೆ.

ಸುದೀಪ್​ ಮಾತ್ರವಲ್ಲದೇ ಹಲವು ಸೆಲೆಬ್ರಿಟಿಗಳು ಕೂಡ ಹುಟ್ಟುಹಬ್ಬದ ಆಚರಣೆಯನ್ನು ಕ್ಯಾನ್ಸಲ್​ ಮಾಡಿಕೊಂಡಿದ್ದಾರೆ. ಸ್ಟಾರ್​ ನಟರ ಬರ್ತ್​ಡೇ ಸೆಲೆಬ್ರೇಷನ್​ ಎಂದರೆ ಅಲ್ಲಿ ಸಾವಿರಾರು ಜನರು ಸೇರುತ್ತಾರೆ. ಅದರಿಂದ ಕೊವಿಡ್​ ಹರಡುವ ಸಾಧ್ಯತೆ ದಟ್ಟವಾಗಿರುತ್ತದೆ. ಹಾಗಾಗಿ ಅಭಿಮಾನಿಗಳ ಆರೋಗ್ಯದ ದೃಷ್ಟಿಯಿಂದ ಸಂಭ್ರಮಾಚರಣೆಗೆ ಬ್ರೇಕ್​ ಹಾಕುವುದೇ ಉತ್ತಮ ಎಂದು ಎಲ್ಲ ಸೆಲೆಬ್ರಿಟಿಗಳು ಕಳೆದೊಂದು ವರ್ಷದಿಂದ ನಿರ್ಧರಿಸಿ, ಅದನ್ನೇ ಪಾಲಿಸುತ್ತ ಬಂದಿದ್ದಾರೆ.

ಸದ್ಯ ಸುದೀಪ್​ ಅಭಿನಯದ ‘ಕೋಟಿಗೊಬ್ಬ 3’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಅನೂಪ್​ ಭಂಡಾರಿ ನಿರ್ದೇಶನದ ‘ವಿಕ್ರಾಂತ್​ ರೋಣ’ ಸಿನಿಮಾಗೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ತಮಿಳು ನಿರ್ದೇಶಕ ವೆಂಕಟ್​ ಪ್ರಭು ಅವರ ಜೊತೆಗೆ ಸುದೀಪ್​ ಫೋಟೋ ವೈರಲ್​ ಆಗಿತ್ತು. ಅವರಿಬ್ಬರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಅನೌನ್ಸ್​ ಆಗಬಹುದು ಎಂಬ ನಿರೀಕ್ಷೆ ಇದೆ. ಅದೇ ರೀತಿ, ‘ವಿಕ್ರಾಂತ್​ ರೋಣ’ ಮತ್ತು ‘ಕೋಟಿಗೊಬ್ಬ 3’ ಸಿನಿಮಾ ತಂಡಗಳಿಂದಲೂ ಗಿಫ್ಟ್​ ರೂಪದಲ್ಲಿ ಹೊಸ ಟೀಸರ್​ ಅಥವಾ ಪೋಸ್ಟರ್​ಗಳು ಬಿಡುಗಡೆ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ:

ಸುದೀಪ್​ ಮುಂದಿನ ಸಿನಿಮಾ ಯಾವುದು? ಫೋಟೋ ಮೂಲಕ ಸುಳಿವು ನೀಡಿದ ಕಾಲಿವುಡ್​ ನಿರ್ದೇಶಕ

ಕಿಚ್ಚ ಸುದೀಪ್​ ಕುಟುಂಬದಲ್ಲಿ ​ಮದುವೆ ಸಂಭ್ರಮ; ಇಲ್ಲಿವೆ ಕಲರ್​ಫುಲ್​ ಫ್ಯಾಮಿಲಿ ಫೋಟೋಗಳು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?