AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದ ದಿನ ಅಭಿಮಾನಿಗಳನ್ನು ಭೇಟಿ ಆಗಲ್ಲ ಎಂದ ಸುದೀಪ್​; ಮೊದಲೇ ತಿಳಿಸಿ ಕ್ಷಮೆ ಕೇಳಿದ ಕಿಚ್ಚ

Kichcha Sudeep Birthday: ಸೆ.2ರಂದು ಸುದೀಪ್​ ಜನ್ಮದಿನ. ಅಂದು ಅವರನ್ನು ಭೇಟಿ ಆಗಬೇಕು ಎಂಬುದು ಲಕ್ಷಾಂತರ ಅಭಿಮಾನಿಗಳ ಬಯಕೆ. ಆದರೆ ಕೊವಿಡ್​ ಕಾರಣದಿಂದ ಸುದೀಪ್​ ಯಾರನ್ನೂ ಭೇಟಿ ಆಗುತ್ತಿಲ್ಲ.

ಹುಟ್ಟುಹಬ್ಬದ ದಿನ ಅಭಿಮಾನಿಗಳನ್ನು ಭೇಟಿ ಆಗಲ್ಲ ಎಂದ ಸುದೀಪ್​; ಮೊದಲೇ ತಿಳಿಸಿ ಕ್ಷಮೆ ಕೇಳಿದ ಕಿಚ್ಚ
ಕಿಚ್ಚ ಸುದೀಪ್​
TV9 Web
| Edited By: |

Updated on: Aug 28, 2021 | 12:31 PM

Share

ನಟ ಕಿಚ್ಚ ಸುದೀಪ್​ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಪ್ರತಿ ವರ್ಷ ಅವರ ಬರ್ತ್​ಡೇ ಅಚರಿಸಲು ಎಲ್ಲರೂ ಕಾಯುತ್ತಿರುತ್ತಾರೆ. ಒಂದು ತಿಂಗಳು ಮುನ್ನವೇ ಅದಕ್ಕಾಗಿ ತಯಾರಿ ನಡೆಯುತ್ತದೆ. ನೆಚ್ಚಿನ ನಟನನ್ನು ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಬರುತ್ತಾರೆ. ಆದರೆ ಕೊರೊನಾ ವೈರಸ್​ ಕಾರಣದಿಂದಾಗಿ ಈ ಎಲ್ಲ ಸಂಭ್ರಮಗಳಿಗೂ ಕಳೆದ ವರ್ಷದಿಂದ ಬ್ರೇಕ್​ ಬಿದ್ದಿದೆ. ಈ ವರ್ಷ ಕೂಡ ಫ್ಯಾನ್ಸ್ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಳ್ಳದೇ ಇರಲು ಸುದೀಪ್​ ನಿರ್ಧರಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಮುಂಚಿತವಾಗಿ ತಿಳಿಸಿದ್ದಾರೆ.

ಸೆ.2ರಂದು ಸುದೀಪ್​ ಜನ್ಮದಿನ. ಅಂದು ಅವರನ್ನು ಭೇಟಿ ಆಗಬೇಕು ಎಂಬುದು ಲಕ್ಷಾಂತರ ಅಭಿಮಾನಿಗಳ ಬಯಕೆ. ಆದರೆ ಕೊವಿಡ್​ ಕಾರಣದಿಂದ ಸುದೀಪ್​ ಯಾರನ್ನೂ ಭೇಟಿ ಆಗುತ್ತಿಲ್ಲ. ‘ನನ್ನೆಲ್ಲ ಅಭಿಮಾನಿ ಸ್ನೇಹಿತರಲ್ಲಿ ಮನವಿ. ಕೊವಿಡ್​ ಸಂಕಷ್ಟದ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ನಿಟ್ಟಿನಲ್ಲಿ ನಿಮ್ಮೆಲ್ಲರನ್ನು ಭೇಟಿ ಆಗಲು ಆಗುತ್ತಿಲ್ಲ. ಕ್ಷಮೆ ಇರಲಿ. ಮುಂದೆ ಪರಿಸ್ಥಿತಿ ಸುಧಾರಿಸಿದ ನಂತರ ನಿಮ್ಮೆಲ್ಲರನ್ನೂ ಭೇಟಿ ಆಗುತ್ತೇನೆ. ನೀವು ಇದ್ದಲ್ಲಿಂದಲೇ ನಿಮ್ಮ ಪ್ರೀತಿ ತುಂಬಿದ ಶುಭಾಶಯಗಳನ್ನು ತಿಳಿಸಿ’ ಎಂದು ಸುದೀಪ್​ ಅವರು ‘ಕಿಚ್ಚ ಕ್ರಿಯೇಷನ್​’ ಟ್ವಿಟರ್​ ಖಾತೆ ಮೂಲಕ ಸಂದೇಶ ನೀಡಿದ್ದಾರೆ.

ಸುದೀಪ್​ ಮಾತ್ರವಲ್ಲದೇ ಹಲವು ಸೆಲೆಬ್ರಿಟಿಗಳು ಕೂಡ ಹುಟ್ಟುಹಬ್ಬದ ಆಚರಣೆಯನ್ನು ಕ್ಯಾನ್ಸಲ್​ ಮಾಡಿಕೊಂಡಿದ್ದಾರೆ. ಸ್ಟಾರ್​ ನಟರ ಬರ್ತ್​ಡೇ ಸೆಲೆಬ್ರೇಷನ್​ ಎಂದರೆ ಅಲ್ಲಿ ಸಾವಿರಾರು ಜನರು ಸೇರುತ್ತಾರೆ. ಅದರಿಂದ ಕೊವಿಡ್​ ಹರಡುವ ಸಾಧ್ಯತೆ ದಟ್ಟವಾಗಿರುತ್ತದೆ. ಹಾಗಾಗಿ ಅಭಿಮಾನಿಗಳ ಆರೋಗ್ಯದ ದೃಷ್ಟಿಯಿಂದ ಸಂಭ್ರಮಾಚರಣೆಗೆ ಬ್ರೇಕ್​ ಹಾಕುವುದೇ ಉತ್ತಮ ಎಂದು ಎಲ್ಲ ಸೆಲೆಬ್ರಿಟಿಗಳು ಕಳೆದೊಂದು ವರ್ಷದಿಂದ ನಿರ್ಧರಿಸಿ, ಅದನ್ನೇ ಪಾಲಿಸುತ್ತ ಬಂದಿದ್ದಾರೆ.

ಸದ್ಯ ಸುದೀಪ್​ ಅಭಿನಯದ ‘ಕೋಟಿಗೊಬ್ಬ 3’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಅನೂಪ್​ ಭಂಡಾರಿ ನಿರ್ದೇಶನದ ‘ವಿಕ್ರಾಂತ್​ ರೋಣ’ ಸಿನಿಮಾಗೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ತಮಿಳು ನಿರ್ದೇಶಕ ವೆಂಕಟ್​ ಪ್ರಭು ಅವರ ಜೊತೆಗೆ ಸುದೀಪ್​ ಫೋಟೋ ವೈರಲ್​ ಆಗಿತ್ತು. ಅವರಿಬ್ಬರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಅನೌನ್ಸ್​ ಆಗಬಹುದು ಎಂಬ ನಿರೀಕ್ಷೆ ಇದೆ. ಅದೇ ರೀತಿ, ‘ವಿಕ್ರಾಂತ್​ ರೋಣ’ ಮತ್ತು ‘ಕೋಟಿಗೊಬ್ಬ 3’ ಸಿನಿಮಾ ತಂಡಗಳಿಂದಲೂ ಗಿಫ್ಟ್​ ರೂಪದಲ್ಲಿ ಹೊಸ ಟೀಸರ್​ ಅಥವಾ ಪೋಸ್ಟರ್​ಗಳು ಬಿಡುಗಡೆ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ:

ಸುದೀಪ್​ ಮುಂದಿನ ಸಿನಿಮಾ ಯಾವುದು? ಫೋಟೋ ಮೂಲಕ ಸುಳಿವು ನೀಡಿದ ಕಾಲಿವುಡ್​ ನಿರ್ದೇಶಕ

ಕಿಚ್ಚ ಸುದೀಪ್​ ಕುಟುಂಬದಲ್ಲಿ ​ಮದುವೆ ಸಂಭ್ರಮ; ಇಲ್ಲಿವೆ ಕಲರ್​ಫುಲ್​ ಫ್ಯಾಮಿಲಿ ಫೋಟೋಗಳು

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು