AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಕ್ಲಾಸ್​ ಕಿರಿಕಿರಿ ತಪ್ಪಿಸಲು ಇಲ್ಲಿದೆ ಉಪಾಯ; ಕಿಚ್ಚ ಸುದೀಪ್​ ಟ್ರಸ್ಟ್​ ಕಡೆಯಿಂದ ಮಕ್ಕಳಿಗಾಗಿ ಹೊಸ ಆ್ಯಪ್​

Online Class App: ಡಾರ್ಕ್ ಬೋರ್ಡ್ ಆ್ಯನಿಮೇಷನ್ ಎಜುಕೇಷನ್ ಎಂಬ  ಆ್ಯಪ್ ಬಳಸಿ ಆನ್​ಲೈನ್ ಕ್ಲಾಸ್ ಮಾಡಬಹುದು. ಈ ಹೊಸ ಆ್ಯಪ್​ನಿಂದ ವಿದ್ಯಾರ್ಥಿಗಳಿಗೆ ದೊಡ್ಡ ಲಾಭ ಇದೆ ಎಂದು ಕಿಚ್ಚ ಸುದೀಪ್​ ಚಾರಿಟೇಬಲ್​ ಸೊಸೈಟಿ ಹೇಳಿದೆ.

ಆನ್​ಲೈನ್​ ಕ್ಲಾಸ್​ ಕಿರಿಕಿರಿ ತಪ್ಪಿಸಲು ಇಲ್ಲಿದೆ ಉಪಾಯ; ಕಿಚ್ಚ ಸುದೀಪ್​ ಟ್ರಸ್ಟ್​ ಕಡೆಯಿಂದ ಮಕ್ಕಳಿಗಾಗಿ ಹೊಸ ಆ್ಯಪ್​
ಕಿಚ್ಚ ಸುದೀಪ್​
TV9 Web
| Updated By: ಮದನ್​ ಕುಮಾರ್​|

Updated on: Aug 16, 2021 | 8:53 AM

Share

ನಟನೆ ಜೊತೆಗೆ ಹಲವು ಜನಪರ ಕಾರ್ಯಗಳನ್ನು ಕಿಚ್ಚ ಸುದೀಪ್ (Kichcha Sudeep) ಅವರು ಮಾಡುತ್ತಿದ್ದಾರೆ. ಕಿಚ್ಚ ಸುದೀಪ್​ ಚಾರಿಟೇಬಲ್​ ಸೊಸೈಟಿ (Kichcha Sudeep Charitable Society) ಮೂಲಕ ಅನೇಕ ಶಾಲೆಗಳನ್ನು ದತ್ತು ಪಡೆದುಕೊಳ್ಳುವ ಕೆಲಸ ಈಗಾಗಲೇ ಯಶಸ್ವಿ ಆಗಿದೆ. ಈಗ ಅಂತಹ ಶಾಲೆಗಳಲ್ಲಿ ಹೊಸ ಆ್ಯಪ್​ ಪರಿಚಯಿಸಲಾಗುತ್ತಿದೆ. ಆನ್​ಲೈನ್​ ಕ್ಲಾಸ್​ನಲ್ಲಿ (Online Class) ಸದ್ಯ ಉಂಟಾಗುತ್ತಿರುವ ತೊಡಕುಗಳನ್ನು ನಿವಾರಿಸಲು ಈ ಹೊಸ ಆ್ಯಪ್​ ಸಹಕಾರಿ ಆಗಲಿದೆ ಎಂದು ಕಿಚ್ಚ ಸುದೀಪ್​ ಚಾರಿಟೇಬಲ್​ ಸೊಸೈಟಿಯ ಅಧ್ಯಕ್ಷ ರಮೇಶ್ ಕಿಟ್ಟಿ ಹೇಳಿದ್ದಾರೆ. ಹಾಗಾದರೆ ಏನು ಈ ಆ್ಯಪ್​ನ ವಿಶೇಷ? ಇಲ್ಲಿದೆ ಸಂಪೂರ್ಣ ಮಾಹಿತಿ.

ಈ ಆ್ಯಪ್​ ಮೂಲಕ ಅಕ್ಷರ ಕ್ರಾಂತಿಯಲ್ಲಿ ಮತ್ತೊಂದು ಹೆಜ್ಜೆ ಇಡಲು ಸುದೀಪ್​ ಮುಂದಾಗಿದ್ದಾರೆ. ಅವರ ತಂಡದವರು ಮಾಡಿರುವ ಹೊಸ ಆ್ಯಪ್​ನಿಂದಾಗಿ ಮಕ್ಕಳ ಆನ್​ಲೈನ್​ ಕ್ಲಾಸ್​ ಇನ್ನಷ್ಟು ಸುಲಭ ಆಗಲಿದೆ. ಈಗ ಆನ್‌ಲೈನ್ ಕ್ಲಾಸ್​ನಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ಬೆನ್ನು ನೋಡಿಕೊಂಡು ಪಾಠ ಕೇಳುತ್ತಿದ್ದಾರೆ. ಅದರಿಂದ ಪಾಠ ಅರ್ಥ ಆಗದೇ‌ ವಿದ್ಯಾರ್ಥಿಗಳು ಕಷ್ಟಪಡುತ್ತಿದ್ದಾರೆ. ಆದರೆ ಈ ಆ್ಯಪ್​ ಬಳಸಿದರೆ ಅಂಥ ಪ್ರಮೇಯ ಎದುರಾಗುವುದಿಲ್ಲ ಎಂಬ ಭರವಸೆಯನ್ನು ಕಿಚ್ಚ ಸದೀಪ್​ ಚಾರಿಟೇಬಲ್​ ಸೊಸೈಟಿ ನೀಡುತ್ತಿದೆ.

ಡಾರ್ಕ್ ಬೋರ್ಡ್ ಆ್ಯನಿಮೇಷನ್ ಎಜುಕೇಷನ್ ಎಂಬ  ಆ್ಯಪ್ ಬಳಸಿ ಆನ್​ಲೈನ್ ಕ್ಲಾಸ್ ಮಾಡಬಹುದು. ಇದರಿಂದ ವಿದ್ಯಾರ್ಥಿಗಳಿಗೆ ದೊಡ್ಡ ಲಾಭ ಇದೆ. ಈ ಆ್ಯಪ್ ಬಳಸಿ ಪಾಠ ಮಾಡಿದ್ರೆ ಮಕ್ಕಳಿಗೆ ಶಿಕ್ಷಕರ ಪಾಠ ಚನ್ನಾಗಿ ಅರ್ಥ ಆಗುತ್ತದೆ. ಶಾಲೆಯಲ್ಲಿ ಡಾರ್ಕ್ ಬೋರ್ಡ್ ರೂಂ ಮಾಡಿ ಪಾಠ ಮಾಡಬಹುದು. ಯಾವುದೇ ವಿಷಯದ ಪಾಠವನ್ನು ರೆಕಾರ್ಡ್ ಮಾಡಿ ಕೂಡ ವಿದ್ಯಾರ್ಥಿಗಳಿಗೆ ಕಳಿಸಬಹುದು ಎಂದು ರಮೇಶ್ ಕಿಟ್ಟಿ ಹೇಳಿದ್ದಾರೆ.

ಈ ಡಾರ್ಕ್ ಬೋರ್ಡ್ ಪಾಠ ಕೇಳಿದ್ರೆ ಮಕ್ಕಳು ಶಿಕ್ಷಕರ ಮುಂದೆ ಕೂತು ಪಾಠ ಕೇಳಿದ ಹಾಗಿರುತ್ತದೆ. ಶಿಕ್ಷಕರ ಹಾವ ಭಾವವನ್ನ ನೋಡಿ ಮಕ್ಕಳ ಪಾಠ ಅರ್ಥ ಮಾಡಿಕೊಳ್ಳಬಹುದು. ಡ್ರಾಯಿಂಗ್ ಬರೆದೂ ಕೂಡ ಪಾಠ ಮಾಡೋದಕ್ಕೆ ಸಹಾಯ ಆಗುತ್ತೆ. ಈ ಆ್ಯಪ್​ ಅನ್ನು ಎಲ್ಲಾ ಸರ್ಕಾರಿ ಶಾಲೆ, ಖಾಸಗಿ ಶಾಲೆಯವರು ಬಳಸಿಕೊಳ್ಳಬಹುದು. ರಾಜ್ಯ ಸರ್ಕಾರಕ್ಕೂ ಈ ಆ್ಯಪ್ ಬಗ್ಗೆ ಮನವರಿಕೆ ಮಾಡಿಕೊಡಲು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಮುಂದಾಗುತ್ತಿದೆ.

ಶಿಕ್ಷಣ ಸಚಿವರನ್ನ ಭೇಟಿ ಮಾಡಿ ಈ ಆ್ಯಪ್​ ಬಗ್ಗೆ ತಿಳಿಸಿ, ಆನ್​ಲೈನ್​ ಕ್ಲಾಸ್​ಗಳಲ್ಲಿ ಬಳಸಿಕೊಳ್ಳುವಂತೆ ಮನವಿ ಮಾಡಲಿದೆ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ. ದತ್ತು ಪಡೆದ ಶಾಲೆಗಳನ್ನು ಈ ಆ್ಯಪ್​ ಮೂಲಕ ಸಂಪೂರ್ಣ ಡಿಜಿಟಲ್ ಆಗಿಸುವ ಕೆಲಸ ಮಾಡುತ್ತಿದ್ದಾರೆ ಕಿಚ್ಚ ಸುದೀಪ್. ಮೊದಲು ಸುದೀಪ್‌ ದತ್ತು ಪಡೆದ ಶಾಲೆಗಳಲ್ಲಿ ಈ ಆ್ಯಪ್ ಬಳಕೆ‌ ಮಾಡಲಾಗುತ್ತೆ. ಆ ನಂತರ ಎಲ್ಲಾ ಶಾಲಾ ಶಿಕ್ಷಕರಿಗೂ ಇದನ್ನು ಬಳಸಿಕೊಳ್ಳಲು ಉತ್ತೇಜಿಸುವ ಕೆಲಸ ಮಾಡುತ್ತೇವೆ ಎಂದು ಕಿಚ್ಚ ಸುದೀಪ್ ಚಾರಿಟೇಬಲ್​ ಸೊಸೈಟಿ ಅಧ್ಯಕ್ಷ ರಮೇಶ್ ಕಿಟ್ಟಿ ಹೇಳಿದ್ದಾರೆ.

ಇದನ್ನೂ ಓದಿ:

ಗಡಂಗ್ ರಕ್ಕಮನ ಮೇಲೆ ಕೊಲೆ ಆರೋಪ ಇದೆ ಎಂಬುದನ್ನು ತಿಳಿಸಿಯೇ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಸುದೀಪ್​

‘ಸುದೀಪ್​ ಅನುಮತಿ ಕೊಟ್ಟರೆ ಪ್ರಶಾಂತ್​ ಸಂಬರಗಿ ವಿರುದ್ಧ ನಾನು ನ್ಯಾಯಾಲಯಕ್ಕೆ ಹೋಗ್ತೀನಿ’: ಚಕ್ರವರ್ತಿ ಚಂದ್ರಚೂಡ್​

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್