AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಶುಲ್ಕ ಭರಿಸಲಾಗದೇ ಕಷ್ಟದಲ್ಲಿದ್ದ ವಿದ್ಯಾರ್ಥಿ; ಸಹಾಯ ಮಾಡಿ ಆತಂಕ ದೂರ ಮಾಡಿದ ಸುದೀಪ್ ಚಾರಿಟೇಬಲ್ ಟ್ರಸ್ಟ್

Kichcha Sudeep Charitable Trust: ಹಾಸನದಲ್ಲಿ ಮಳೆಯಿಂದ ಕಾಲೇಜಿನ ಶುಲ್ಕ ಭರಿಸಲಾಗದೇ ಕಷ್ಟದಲ್ಲಿದ್ದ ವಿದ್ಯಾರ್ಥಿಗೆ ಸುದೀಪ್ ಚಾರಿಟೇಬಲ್ ಟ್ರಸ್ಟ್ ಸಹಾಯ ಮಾಡಿದೆ. ಅವರ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಕಾಲೇಜು ಶುಲ್ಕ ಭರಿಸಲಾಗದೇ ಕಷ್ಟದಲ್ಲಿದ್ದ ವಿದ್ಯಾರ್ಥಿ; ಸಹಾಯ ಮಾಡಿ ಆತಂಕ ದೂರ ಮಾಡಿದ ಸುದೀಪ್ ಚಾರಿಟೇಬಲ್ ಟ್ರಸ್ಟ್
ನಟ ಕಿಚ್ಚ ಸುದೀಪ್
TV9 Web
| Edited By: |

Updated on: Nov 25, 2021 | 11:03 AM

Share

ಹಾಸನ: ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ (Kichcha Sudeep) ತಮ್ಮ ಸಾಮಾಜಿಕ ಕಾರ್ಯಗಳಲ್ಲಿ ಸದಾ ಮುಂದಿದ್ದಾರೆ. ಅದಕ್ಕೆಂದೇ ಅವರು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿದ್ದು, ಅದರ ಮೂಲಕ ಅಗತ್ಯವಿರುವವರಿಗೆ ಬೇಕಾದ ನೆರವನ್ನು ತಲುಪಿಸುವ ವ್ಯವಸ್ಥೆ ಕೈಗೊಂಡಿದ್ದಾರೆ. ಇತ್ತೀಚೆಗಷ್ಟೇ ಈ ಟ್ರಸ್ಟ್ ಮೂಲಕ ಮಳೆಯಿಂದ ಬೆಳೆ ಕಳೆದುಕೊಂಡ ರೈತರ ಪುತ್ರನೋರ್ವನಿಗೆ ಕಾಲೇಜು ಶಿಕ್ಷಣಕ್ಕೆ ಶುಲ್ಕ ಪಾವತಿಸಲಾಗಿದೆ. ಚಾರಿಟೇಬಲ್​ನ ಈ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಬಿಎಸ್​​ಸಿ ನರ್ಸಿಂಗ್ ಓದುತ್ತಿದ್ದ ಹಾಸನದ ವಿದ್ಯಾರ್ಥಿಯೋರ್ವ ಕಷ್ಟದಲ್ಲಿದ್ದರು. ಅವರಿಗೆ ಟ್ರಸ್ಟ್ ಮೂಲಕ ನೆರವು ನೀಡಲಾಗಿದೆ. 

ಘಟನೆಯ ವಿವರ ಇಲ್ಲಿದೆ: ಹಾಸನದಲ್ಲಿನ ಗಿರೀಶ್ ಕುಮಾರ್ ಮತ್ತು ಅವರ ಕುಟುಂಬ ಮಳೆಯಿಂದ ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿದ್ದರು. ಪರೀಕ್ಷಾ ಶುಲ್ಕ ಕಟ್ಟಲಾಗದೆ ಹಾಸನದ ಕಿಚ್ಚಾ ಸುದೀಪ್ ಅಭಿಮಾನಿಗಳ ಸಂಘವನ್ನು ಗಿರೀಶ್ ಸಂಪರ್ಕ ಮಾಡಿದ್ದರು. ಬಿಎಸ್​​ಸಿ ನರ್ಸಿಂಗ್ ಓದುತ್ತಿರುವ ಗಿರೀಶ್ ಕುಮಾರ್​ಗೆ ಕಾಲೇಜು ಶುಲ್ಕಕ್ಕೆ 21 ಸಾವಿರ ರೂಗಳ ಅಗತ್ಯವಿತ್ತು. ಕುಟುಂಬದ ಕಷ್ಟವನ್ನು ಆಲಿಸಿದ ಸುದೀಪ್ ಟ್ರಸ್ಟ್, ನೆರವಿಗೆ ಮುಂದಾಯಿತು. ಶುಲ್ಕ ಕಟ್ಟದೇ ಪರೀಕ್ಷೆ ಬರೆಯಲಾಗದ ಆತಂಕದಲ್ಲಿದ್ದ ವಿದ್ಯಾರ್ಥಿಯ ಆತಂಕ ದೂರ ಮಾಡಿ, ಚೆಕ್ ಮೂಲಕ ಹಣವನ್ನು ನೀಡಲಾಗಿದೆ.

ಸುದೀಪ್ ತಮ್ಮ ಟ್ರಸ್ಟ್ ಮೂಲಕ ಹಣವನ್ನು ನೀಡಿದ್ದು, ವಿದ್ಯಾರ್ಥಿ ಯಾವುದೇ ಸಮಸ್ಯೆಗಳಿಲ್ಲದೇ ಮುಂದಿನ ಓದಿಗೆ ಸಿದ್ಧನಾಗಲು ಸಾಧ್ಯವಾಗಿದೆ. ಈ ಮೂಲಕ ಕಷ್ಟದಲ್ಲಿದ್ದ ವಿದ್ಯಾರ್ಥಿ ಹಾಗೂ ಕುಟುಂಬಕ್ಕೆ ಸುದೀಪ್ ತಮ್ಮ ಟ್ರಸ್ಟ್ ಮೂಲಕ ಸಹಾಯ ಮಾಡಿದ್ದು, ವಿದ್ಯಾರ್ಥಿಯ ಬದುಕಿಗೆ ಬೆಳಕಾಗಿದ್ದಾರೆ. ಕಿಚ್ಚ ಸುದೀಪ್ ಹಾಗೂ ಅವರ ಸುದೀಪ್ ಚಾರಿಟೇಬಲ್ ಟ್ರಸ್ಟ್​​ನ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ನಟನ ಸಾಮಾಜಿಕ ಕಾರ್ಯಕ್ಕೆ ಜನರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಒಟಿಟಿಯಲ್ಲಿ ಕೋಟಿಗೊಬ್ಬ 3 ಬಿಡುಗಡೆ ಯಾವಾಗ?; ಈ ವಾರ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ ಚಿತ್ರಗಳ ಪಟ್ಟಿ ಇಲ್ಲಿದೆ

Katrina Kaif: ಕಲ್ಯಾಣದ ನಂತರ ಹೆಸರು ಬದಲಿಸಲಿದ್ದಾರಾ ಕತ್ರಿನಾ?

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!