Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಶುಲ್ಕ ಭರಿಸಲಾಗದೇ ಕಷ್ಟದಲ್ಲಿದ್ದ ವಿದ್ಯಾರ್ಥಿ; ಸಹಾಯ ಮಾಡಿ ಆತಂಕ ದೂರ ಮಾಡಿದ ಸುದೀಪ್ ಚಾರಿಟೇಬಲ್ ಟ್ರಸ್ಟ್

Kichcha Sudeep Charitable Trust: ಹಾಸನದಲ್ಲಿ ಮಳೆಯಿಂದ ಕಾಲೇಜಿನ ಶುಲ್ಕ ಭರಿಸಲಾಗದೇ ಕಷ್ಟದಲ್ಲಿದ್ದ ವಿದ್ಯಾರ್ಥಿಗೆ ಸುದೀಪ್ ಚಾರಿಟೇಬಲ್ ಟ್ರಸ್ಟ್ ಸಹಾಯ ಮಾಡಿದೆ. ಅವರ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಕಾಲೇಜು ಶುಲ್ಕ ಭರಿಸಲಾಗದೇ ಕಷ್ಟದಲ್ಲಿದ್ದ ವಿದ್ಯಾರ್ಥಿ; ಸಹಾಯ ಮಾಡಿ ಆತಂಕ ದೂರ ಮಾಡಿದ ಸುದೀಪ್ ಚಾರಿಟೇಬಲ್ ಟ್ರಸ್ಟ್
ನಟ ಕಿಚ್ಚ ಸುದೀಪ್
Follow us
TV9 Web
| Updated By: shivaprasad.hs

Updated on: Nov 25, 2021 | 11:03 AM

ಹಾಸನ: ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ (Kichcha Sudeep) ತಮ್ಮ ಸಾಮಾಜಿಕ ಕಾರ್ಯಗಳಲ್ಲಿ ಸದಾ ಮುಂದಿದ್ದಾರೆ. ಅದಕ್ಕೆಂದೇ ಅವರು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿದ್ದು, ಅದರ ಮೂಲಕ ಅಗತ್ಯವಿರುವವರಿಗೆ ಬೇಕಾದ ನೆರವನ್ನು ತಲುಪಿಸುವ ವ್ಯವಸ್ಥೆ ಕೈಗೊಂಡಿದ್ದಾರೆ. ಇತ್ತೀಚೆಗಷ್ಟೇ ಈ ಟ್ರಸ್ಟ್ ಮೂಲಕ ಮಳೆಯಿಂದ ಬೆಳೆ ಕಳೆದುಕೊಂಡ ರೈತರ ಪುತ್ರನೋರ್ವನಿಗೆ ಕಾಲೇಜು ಶಿಕ್ಷಣಕ್ಕೆ ಶುಲ್ಕ ಪಾವತಿಸಲಾಗಿದೆ. ಚಾರಿಟೇಬಲ್​ನ ಈ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಬಿಎಸ್​​ಸಿ ನರ್ಸಿಂಗ್ ಓದುತ್ತಿದ್ದ ಹಾಸನದ ವಿದ್ಯಾರ್ಥಿಯೋರ್ವ ಕಷ್ಟದಲ್ಲಿದ್ದರು. ಅವರಿಗೆ ಟ್ರಸ್ಟ್ ಮೂಲಕ ನೆರವು ನೀಡಲಾಗಿದೆ. 

ಘಟನೆಯ ವಿವರ ಇಲ್ಲಿದೆ: ಹಾಸನದಲ್ಲಿನ ಗಿರೀಶ್ ಕುಮಾರ್ ಮತ್ತು ಅವರ ಕುಟುಂಬ ಮಳೆಯಿಂದ ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿದ್ದರು. ಪರೀಕ್ಷಾ ಶುಲ್ಕ ಕಟ್ಟಲಾಗದೆ ಹಾಸನದ ಕಿಚ್ಚಾ ಸುದೀಪ್ ಅಭಿಮಾನಿಗಳ ಸಂಘವನ್ನು ಗಿರೀಶ್ ಸಂಪರ್ಕ ಮಾಡಿದ್ದರು. ಬಿಎಸ್​​ಸಿ ನರ್ಸಿಂಗ್ ಓದುತ್ತಿರುವ ಗಿರೀಶ್ ಕುಮಾರ್​ಗೆ ಕಾಲೇಜು ಶುಲ್ಕಕ್ಕೆ 21 ಸಾವಿರ ರೂಗಳ ಅಗತ್ಯವಿತ್ತು. ಕುಟುಂಬದ ಕಷ್ಟವನ್ನು ಆಲಿಸಿದ ಸುದೀಪ್ ಟ್ರಸ್ಟ್, ನೆರವಿಗೆ ಮುಂದಾಯಿತು. ಶುಲ್ಕ ಕಟ್ಟದೇ ಪರೀಕ್ಷೆ ಬರೆಯಲಾಗದ ಆತಂಕದಲ್ಲಿದ್ದ ವಿದ್ಯಾರ್ಥಿಯ ಆತಂಕ ದೂರ ಮಾಡಿ, ಚೆಕ್ ಮೂಲಕ ಹಣವನ್ನು ನೀಡಲಾಗಿದೆ.

ಸುದೀಪ್ ತಮ್ಮ ಟ್ರಸ್ಟ್ ಮೂಲಕ ಹಣವನ್ನು ನೀಡಿದ್ದು, ವಿದ್ಯಾರ್ಥಿ ಯಾವುದೇ ಸಮಸ್ಯೆಗಳಿಲ್ಲದೇ ಮುಂದಿನ ಓದಿಗೆ ಸಿದ್ಧನಾಗಲು ಸಾಧ್ಯವಾಗಿದೆ. ಈ ಮೂಲಕ ಕಷ್ಟದಲ್ಲಿದ್ದ ವಿದ್ಯಾರ್ಥಿ ಹಾಗೂ ಕುಟುಂಬಕ್ಕೆ ಸುದೀಪ್ ತಮ್ಮ ಟ್ರಸ್ಟ್ ಮೂಲಕ ಸಹಾಯ ಮಾಡಿದ್ದು, ವಿದ್ಯಾರ್ಥಿಯ ಬದುಕಿಗೆ ಬೆಳಕಾಗಿದ್ದಾರೆ. ಕಿಚ್ಚ ಸುದೀಪ್ ಹಾಗೂ ಅವರ ಸುದೀಪ್ ಚಾರಿಟೇಬಲ್ ಟ್ರಸ್ಟ್​​ನ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ನಟನ ಸಾಮಾಜಿಕ ಕಾರ್ಯಕ್ಕೆ ಜನರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಒಟಿಟಿಯಲ್ಲಿ ಕೋಟಿಗೊಬ್ಬ 3 ಬಿಡುಗಡೆ ಯಾವಾಗ?; ಈ ವಾರ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ ಚಿತ್ರಗಳ ಪಟ್ಟಿ ಇಲ್ಲಿದೆ

Katrina Kaif: ಕಲ್ಯಾಣದ ನಂತರ ಹೆಸರು ಬದಲಿಸಲಿದ್ದಾರಾ ಕತ್ರಿನಾ?

ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ