AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗನ ಸಿನಿಮಾಗೆ ಕ್ಲ್ಯಾಪ್ ಮಾಡಿ ಶುಭಕೋರಿದ ಕಿಚ್ಚ ಸುದೀಪ್; ಟೈಟಲ್ ಗುಟ್ಟಾಗಿಯೇ ಇಟ್ಟ ತಂಡ

ಸಂಚಿತ್ ಸಂಜೀವ್ ಅವರ ಸಿನಿಮಾದ ಮುಹೂರ್ತ ಬೆಂಗಳೂರಿನ ಗವಿಪುರದ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ಇಂದು (ಜೂನ್ 15) ಸಿಂಪಲ್ ಆಗಿ ನಡೆದಿದೆ. ಸುದೀಪ್ ಅವರು ಆಗಮಿಸಿ ಕ್ಲ್ಯಾಪ್ ಮಾಡಿ, ತಂಡಕ್ಕೆ ಶುಭಕೋರಿದ್ದಾರೆ.

ಅಕ್ಕನ ಮಗನ ಸಿನಿಮಾಗೆ ಕ್ಲ್ಯಾಪ್ ಮಾಡಿ ಶುಭಕೋರಿದ ಕಿಚ್ಚ ಸುದೀಪ್; ಟೈಟಲ್ ಗುಟ್ಟಾಗಿಯೇ ಇಟ್ಟ ತಂಡ
ಸಂಚಿತ್
ರಾಜೇಶ್ ದುಗ್ಗುಮನೆ
|

Updated on:Jun 15, 2023 | 12:39 PM

Share

ಸ್ಟಾರ್ ನಟ-ನಟಿಯರ ಕುಟುಂಬದವರು ಸಿನಿಮಾ ಇಂಡಸ್ಟ್ರಿಗೆ ಬರುತ್ತಾರೆ ಎಂದರೆ ಸಹಜವಾಗಿಯೇ ಕುತೂಹಲ ಇರುತ್ತದೆ. ಈಗ ಕಿಚ್ಚ ಸುದೀಪ್ (Sudeep) ಅಕ್ಕನ ಮಗ ಸಂಚಿತ್ ಸಂಜೀವ್ (Sanchit Sanjeev) ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ. ಅವರನ್ನು ಚಿತ್ರರಂಗಕ್ಕೆ ಸುದೀಪ್ ಲಾಂಚ್ ಮಾಡುತ್ತಿದ್ದಾರೆ. ಇಂದು (ಜೂನ್ 15) ಚಿತ್ರದ ಮುಹೂರ್ತ ನೆರವೇರಿದೆ. ಕಿಚ್ಚ ಸುದೀಪ್ ಆಗಮಿಸಿ ಕ್ಲ್ಯಾಪ್ ಮಾಡಿ ತಂಡಕ್ಕೆ ಶುಭಕೋರಿದ್ದಾರೆ. ಈ ಚಿತ್ರದ ಟೈಟಲ್ ಇನ್ನೂ ಗುಟ್ಟಾಗಿಯೇ ಇದೆ. ಶೀಘ್ರದಲ್ಲೇ ಅದ್ದೂರಿ ಕಾರ್ಯಕ್ರಮ ಆಯೋಜನೆಗೊಳಿಸಲಾಗುತ್ತಿದೆ. ಅಲ್ಲಿ ಚಿತ್ರದ ಶೀರ್ಷಿಕೆ ಅನಾವರಣ ಆಗುವ ನಿರೀಕ್ಷೆ ಇದೆ.

ಬೆಂಗಳೂರಿನ ಗವಿಪುರದ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ಇಂದು (ಜೂನ್ 15) ಸಿಂಪಲ್ ಆಗಿ ಮುಹೂರ್ತ ಕಾರ್ಯಕ್ರಮ ನಡೆದಿದೆ. ಸುದೀಪ್ ಅವರು ಆಗಮಿಸಿ ಕ್ಲ್ಯಾಪ್ ಮಾಡಿ, ತಂಡಕ್ಕೆ ಶುಭಕೋರಿದ್ದಾರೆ. ಶೀಘ್ರದಲ್ಲೇ ನಡೆಯುವ ಕಾರ್ಯಕ್ರಮದಲ್ಲಿ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ. ಸದ್ಯ ಈ ಚಿತ್ರಕ್ಕೆ ‘ಪ್ರೊಡಕ್ಷನ್ ನಂಬರ್ 3’ ಎಂದು ತಾತ್ಕಾಲಿಕ ಶೀರ್ಷಿಕೆ ಇಡಲಾಗಿದೆ.

‘ಅಂಬಿ‌ ನಿಂಗೆ ವಯಸ್ಸಾಯ್ತೋ’, ‘ವಿಕ್ರಾಂತ್ ರೋಣ’ ಸಿನಿಮಾಗಳಲ್ಲಿ ಸಂಚಿತ್ ತಾಂತ್ರಿಕ ವರ್ಗದಲ್ಲಿ ಕೆಲಸ ಮಾಡಿದ್ದರು. ಈಗ ಅವರು ಇದೇ ಮೊದಲ ಬಾರಿಗೆ ಹೀರೋ ಆಗುತ್ತಿದ್ದಾರೆ. ಸಿನಿಮಾದಲ್ಲಿ ನಾಯಕನಾಗಿರುವ ಜೊತೆಗೆ ನಿರ್ದೇಶನವನ್ನೂ ಸಂಚಿತ್ ಅವರೇ ಮಾಡಲಿದ್ದಾರೆ.

ಇದನ್ನೂ ಓದಿ: ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವ ಕಿಚ್ಚ ಸುದೀಪ್: ಇಲ್ಲಿವೆ ಹೊಸ ಹೀರೋ ಚಿತ್ರಗಳು

‌ಕೆ.ಪಿ.ಶ್ರೀಕಾಂತ್, ಲಹರಿ‌ ಸಂಸ್ಥೆಯ ಮನೋಹರ್ ನಾಯ್ಡು , ಪ್ರಿಯಾ ಸುದೀಪ್ ನಿರ್ಮಾಣದಲ್ಲಿ ಕಿಚ್ಚನ ಅಳಿಯ ಇಂಡಸ್ಟ್ರಿಗೆ ಎಂಟ್ರಿ ನೀಡಲಿದ್ದಾರೆ. ಹೊಸ ಪ್ರತಿಭೆಗೆ ಸುದೀಪ್ ಬೆಂಬಲ ನೀಡಿದ್ದಾರೆ. ಸಿನಿಮಾ ಇಂಡಸ್ಟ್ರಿಗೆ ಬರುವಾಗ ಒಂದಷ್ಟು ಸಿದ್ಧತೆ ಬೇಕೇಬೇಕು. ಅದನ್ನು ಮಾಡಿಕೊಂಡಿದ್ದಾರೆ ಸಂಚಿತ್. ‘ವಿ ಆರ್​ ದಿ ಸೇಮ್’ ಹೆಸರಿನ ಕಿರುಚಿತ್ರವನ್ನು ಸಂಚಿತ್ ನಿರ್ದೇಶನ ಮಾಡಿದ್ದಾರೆ. ಮುಂಬೈನಲ್ಲಿ ಅವರು ನಟನೆ ಕಲಿತು ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:21 pm, Thu, 15 June 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ