AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರು ಯಾವ ನೋವಲ್ಲಿದ್ದಾರೋ ಗೊತ್ತಿಲ್ಲ’; ವಿಜಯಲಕ್ಷ್ಮೀ ಬಗ್ಗೆ ಕಿಚ್ಚನ ಮಾತು

ಕಿಚ್ಚ ಸುದೀಪ್ ತಮ್ಮ 'ಯುದ್ಧಕ್ಕೆ ಸಜ್ಜಾದ ಸೇನೆ' ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಹೇಳಿಕೆ ದರ್ಶನ್ ಅಥವಾ ಶಿವರಾಜ್‌ಕುಮಾರ್ ಅವರಿಗೆ ಸಂಬಂಧಿಸಿದ್ದಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ, ತಮ್ಮ ಸಿನಿಮಾ ಬಿಡುಗಡೆಯ ಸಮಯದಲ್ಲಿ ಆಗುವ ಪೈರಸಿಯ ವಿರುದ್ಧ ಹೋರಾಡಲು ಈ ಮಾತು ಆಡಿದ್ದೇನೆ ಎಂದು ಸುದೀಪ್ ತಿಳಿಸಿದ್ದಾರೆ. ಪೈರಸಿ ಮಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

‘ಅವರು ಯಾವ ನೋವಲ್ಲಿದ್ದಾರೋ ಗೊತ್ತಿಲ್ಲ’; ವಿಜಯಲಕ್ಷ್ಮೀ ಬಗ್ಗೆ ಕಿಚ್ಚನ ಮಾತು
ವಿಜಯಲಕ್ಷ್ಮೀ-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Dec 23, 2025 | 7:02 AM

Share

ಕಿಚ್ಚ ಸುದೀಪ್ ಹಾಗೂ ವಿಜಯಲಕ್ಷ್ಮೀ (Vijayalakshmi) ಮಧ್ಯೆ ನೇರ ಮಾತಿನ ಫೈಟ್ ಏರ್ಪಟ್ಟಿದೆ. ಆದರೆ, ಇದನ್ನು ತಪ್ಪಿಸಲು ಸುದೀಪ್ ಪ್ರಯತ್ನಿಸಿದ್ದಾರೆ. ‘ನನ್ನ ಸಿನಿಮಾ ರಿಲೀಸ್ ಆಗುವಾಗ ಒಂದು ಪಡೆ ಯುದ್ಧಕ್ಕೆ ಸಜ್ಜಾಗಿದೆ’ ಎಂದು ಕಿಚ್ಚ ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ಸಾಕಷ್ಟು ಚರ್ಚೆಗಳು ನಡೆದವು. ವಿಜಯಲಕ್ಷ್ಮೀ ಕೂಡ ರಿಯಾಕ್ಷನ್ ಕೊಟ್ಟರು. ಆದರೆ, ಈ ಹೇಳಿಕೆಯನ್ನು ಕಿಚ್ಚ ತಾಗಿಸಿಕೊಳ್ಳಲೇ ಇಲ್ಲ. ಅವರು ಈ ವಿವಾದಕ್ಕೆ ಪ್ರತಿಕ್ರಿಯಿಸಿದ್ದಾರೆ.

‘ನಾನು ಹೇಳಿದ ಮಾತು ವಿವಾದ ಆಗಬೇಕಿದ್ದರೆ ಮರುದಿನವೇ ಬೆಂಕಿ ಹತ್ತಿಕೊಳ್ಳಬೇಕಿತ್ತು. ಎಲ್ಲರೂ ಮರುದಿನವೇ ಬಂದು ನೀವು ಯಾಕೆ ಹೀಗೆ ಹೇಳಿದ್ರಿ ಎಂದು ಮೈಕ್ ಹಿಡಿಯಬೇಕಿತ್ತು. ಸುದೀಪ್ ಯಾವಾಗಲೂ ಏಕೆ ಹೀಗೆ ಮಾತನಾಡಿಲ್ಲ, ಈಗ ಹೀಗೆಕೆ ಮಾತನಾಡಿದ್ರಿ ಎಂದು ಕೇಳಬೇಕಿತ್ತು. ಆದರೆ, ಹಾಗಾಗಿಲ್ಲ. ಅಲ್ಲಿ ಅಡ್ಡ ಗೋಡೆ ಮೇಲೆ ದೀಪ ಇಟ್ಟ ರೀತಿ ಮಾತನಾಡಿದರೆ ಅವರನ್ನು ಕೇಳಿ, ನೀವು ಯಾರಿಗೆ ಹೇಳಿದ್ದು ಎಂದು’ ಎಂದಿದ್ದಾರೆ ಸುದೀಪ್.

‘ಮಾರ್ಕ್ ಹಾಗೂ ‘45’ ಒಟ್ಟಿಗೆ ತೆರೆಗೆ ಬರುತ್ತಿದೆ. ಹೀಗಾಗಿ, ಇದು ಶಿವಣ್ಣನ ಸಿನಿಮಾ ಬಗ್ಗೆ ಆಡಿದ ಮಾತಾ ಎಂದು ಕೇಳಲಾಯಿತು. ಆದರೆ, ಇದನ್ನು ಸುದೀಪ್ ಅಲ್ಲ ಗಳೆದಿದ್ದಾರೆ. ‘ನಾನು 45 ಸಿನಿಮಾ ಬಗ್ಗೆ ಆಡಿದ ಮಾತು ಇದಲ್ಲ. ನಾನು ಮಾತನಾಡಿದ್ದು ಪೈರಸಿ ಬಗ್ಗೆ. ಪೈರಸಿ ಬಗ್ಗೆ ಮಾತನಾಡುವ ಅಧಿಕಾರ ನನಗಿಲ್ಲವಾ? ಚಿತ್ರರಂಗದಲ್ಲಿ ರಕ್ಷಿತ್, ರಿಷಬ್ ಸೇರಿದಂತೆ ಅನೇಕರಿದ್ದಾರೆ. ಆದರೆ, ಒಂದು ಘಂಟೆ ಮಾತ್ರ ಹೊಡೆದುಕೊಳ್ಳುತ್ತದೆ. ಅದು ನಾನು’ ಎಂದರು ಸುದೀಪ್.

‘ಕಮಲ್ ಹಾಸನ್ ವಿಷಯ ಬಂದಾಗ ನನಗೆ ಶಿವಣ್ಣ ಪರ ನಿಲ್ಲಬೇಕಿರಲಿಲ್ಲ.ಆದರೂ ನಿಂತೆ. ಅವರು ನಮ್ಮ ಹೆಮ್ಮೆ. ಅವರ ಬಗ್ಗೆ ಅಪಾರ ಗೌರವ ಇದೆ. ಸುದೀಪ್ ಕೊಟ್ಟ ಹೇಳಿಕೆ ನಿಮ್ಮ ಬಗ್ಗೆನಾ ಎಂದು ಶಿವಣ್ಣನಿಗೆ ಕೇಳಿದ್ರೆ ನಗುತ್ತಾರೆ.

ಇದನ್ನೂ ಓದಿ: ದರ್ಶನ್ ಅಭಿಮಾನಿಯನ್ನು ಕಾಪಾಡಿದ್ದು ಸುದೀಪ್: ಆ ಘಟನೆ ವಿವರಿಸಿದ ರಜತ್

‘ವೇದಿಕೆ ಹತ್ತಿ ಸಂದರ್ಶನ ಕೊಡ್ತಿದಾರೆ ಎಂದು ಅವರು (ವಿಜಯಲಕ್ಷ್ಮೀ) ಹೇಳಿದ್ದಾರೆ. ನನಗೆ ಹೇಳಿದ್ರೆ ನಾನು ಉತ್ತರ ಕೊಡ್ತೀನಿ. ಸಿದ್ದರಾಮಯ್ಯ, ಡಿಕೆ ಸಾಹೇಬ್ರು ವೇದಿಕೆ ಹತ್ತುತ್ತಿದ್ದಾರೆ. ಅವರಿಗೂ ಹೇಳಿದ್ದು ಇರಬಹುದಲ್ಲ. ಅವರಿಗೆ ಏನು ನೋವಿದೆ ಗೊತ್ತಿಲ್ಲ. ನನ್ನ ಸಿನಿಮಾ ಕಾಪಾಡಿಕೊಳ್ಳಬೇಕಿದೆ, ಜಿದ್ದಾಜಿದ್ದಿ ಮಾಡ್ತಿಲ್ಲ. ಪೈರಸಿ ಮಾಡೋರನ್ನ ಕರುಣೆ ಇಲ್ಲದೆ ಒಳಗೆ ಹಾಕಿಸುತ್ತೇವೆ’ ಎಂದಿದ್ದಾರೆ ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!