AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಡಿರೌಡಿ ತರ ಆಡೋದು ಬಿಡಿ, ನೀವು ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಸುದೀಪ್ ಆಪ್ತನ ಕೌಂಟರ್

ಡಿಕೆ ಶಿವಕುಮಾರ್ ಅವರ ಕನ್ನಡ ಚಿತ್ರರಂಗದ ಕುರಿತಾದ ವಿವಾದಾತ್ಮಕ ಹೇಳಿಕೆಗಳಿಗೆ ಚಕ್ರವರ್ತಿ ಚಂದ್ರಚೂಡ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರವಿಕುಮಾರ್ ಗಣಿಗ ಅವರ ಟೀಕೆಗಳನ್ನು ಖಂಡಿಸಿ, ಸುದೀಪ್ ಅವರನ್ನು ಬೆಂಬಲಿಸಿದ್ದಾರೆ. ರಾಜಕಾರಣಿಗಳು ಚಿತ್ರರಂಗವನ್ನು ನಾಶಮಾಡಲು ಯತ್ನಿಸಬಾರದು ಎಂದು ಅವರು ಆಗ್ರಹಿಸಿದ್ದಾರೆ ಮತ್ತು ರಾಜಕೀಯ ನಾಯಕರು ಹಿಟ್ಲರ್ ನೀತಿಯನ್ನು ಅನುಸರಿಸಬಾರದು ಎಂದು ಹೇಳಿದ್ದಾರೆ.

‘ಪುಡಿರೌಡಿ ತರ ಆಡೋದು ಬಿಡಿ, ನೀವು ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಸುದೀಪ್ ಆಪ್ತನ ಕೌಂಟರ್
ಸುದೀಪ್-ಡಿಕೆಶಿ
Follow us
ರಾಜೇಶ್ ದುಗ್ಗುಮನೆ
|

Updated on: Mar 04, 2025 | 1:01 PM

ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿದ ಹೇಳಿಕೆ ಸಂಚಲನ ಸೃಷ್ಟಿಸಿದೆ. ಕಲಾವಿದರ ನಟ್ಟು ಬೋಲ್ಟ್ ಎಲ್ಲಿ ಟೈಟ್ ಮಾಡೋದು ಅಂತ ನಂಗೆ ಗೊತ್ತು ಎಂದು ಶಿವಕುಮಾರ್ ಹೇಳಿದ್ದರು. ಈ ಹೇಳಿಕೆ ಬೆಂಬಲಿಸಿ ಮಾತನಾಡಿದ್ದ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ, ಸಿಸಿಎಲ್ ಆಡಿ ಸಿನಿಮೋತ್ಸವಕ್ಕೆ ಬರದವರ ಬಗ್ಗೆಯೂ ಪರೋಕ್ಷವಾಗಿ ಟೀಕೆ ಮಾಡಿದ್ದರು. ಈ ಎಲ್ಲಾ ವಿಚಾರಗಳ ಬಗ್ಗೆ ಸುದೀಪ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರೋ ಚಕ್ರವರ್ತಿ ಚಂದ್ರಚೂಡ್ ಮಾತನಾಡಿದ್ದಾರೆ.

‘ಚಲನಚಿತ್ರ vs ಸರ್ಕಾರ ವಿಷಯ ಚರ್ಚೆ ಆಗುತ್ತಿದೆ. ಎಲ್ಲರೂ ಚಿತ್ರರಂಗದವರನ್ನು ಬಯ್ಯುತ್ತಿದ್ದಾರೆ. ರವಿ ಗಣಿಗ ಚಿತ್ರರಂಗದ ಕಲಾವಿದರ ಬಗ್ಗೆ, ಚೇಂಬರ್ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ರವಿಕುಮಾರ್ ನೇರವಾಗಿ ಹೆಸರು ತೆಗೆದುಕೊಂಡು ಮಾತನಾಡಬೇಕಿತ್ತು. ಆಗ ಅವರ ಮಾತಿಗೆ ತೂಕ ಬರುತ್ತಿತ್ತು. ಈ ಹೀರೋಗಳನ್ನು ಬ್ಯಾನ್ ಮಾಡಬೇಕು ಎಂದು ಅವರು ಹೇಳಿದ್ದಾರೆ. ಶಾಸಕರಾಗಿ ಈ ಹೇಳಿಕೆ ನೀಡಬಾರದು. ಹಿಟ್ಲರ್ ರೀತಿ ಆಡಬಾರದು’ ಎಂದಿದ್ದಾರೆ ಚಕ್ರವರ್ತಿ ಚಂದ್ರಚೂಡ್. ಅಲ್ಲದೆ, ರವಿಕುಮಾರ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

‘ಕಿಚ್ಚ ಸುದೀಪ್ ಬಗ್ಗೆ ಮಾತನಾಡಿದ್ದೀರಿ. 2004ರಿಂದ ಈವರೆಗೆ ಅವರು ಅವಾರ್ಡ್ ತೆಗೆದುಕೊಂಡಿಲ್ಲ. ಪ್ರಶಸ್ತಿಯನ್ನು ನಯವಾಗಿ ನಿರಾಕರಿಸಿದ್ದರು. ಈ ಮೊದಲು ಅವಾರ್ಡ್​ಗೆ ಕೊಡುತ್ತೇವೆ ಎಂದು ಕೊಟ್ಟಿಲ್ಲ. ರಾಜ್ಯ ಪ್ರಶಸ್ತಿ ಎಂದರೆ ಅಸಹ್ಯವಾಗಿ ಹೋಗಿದೆ. ಅವಾರ್ಡ್ ನಿರಾಕರಿಸೋದಕ್ಕೆ ಅವರದ್ದೇ ಆದ ಕಾರಣ ಇರುತ್ತದೆ’ ಎಂದು ಸುದೀಪ್ ಪರ ಬ್ಯಾಟ್ ಬೀಸಿದ್ದಾರೆ.

ಇದನ್ನೂ ಓದಿ
Image
ಡಿಕೆಶಿ ಬೆನ್ನಲ್ಲೇ ರಶ್ಮಿಕಾ ಹಾಗೂ ಸಿಸಿಎಲ್ ಆಟಗಾರರ ವಿರುದ್ಧ ಶಾಸಕ ಗರಂ
Image
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
Image
‘ಪಾರ್ಟಿ ಅನ್ನೋದು ವೈಯಕ್ತಿಕ’; ಕಿಚ್ಚ ಸುದೀಪ್ ಅವರ ಆಲೋಚೆನೆಯೇ ಬೇರೆ
Image
ಏಕಕಾಲಕ್ಕೆ ಟಿವಿ, ಒಟಿಟಿಗೆ ಮ್ಯಾಕ್ಸ್ ಎಂಟ್ರಿ; ದಿನಾಂಕ, ಸಮಯದ ಮಾಹಿತಿ..

‘ಪಕ್ಷದ ಕಾರ್ಯಕ್ರಮಕ್ಕೆ ಚಿತ್ರರಂಗದವರು ಬಂದಿಲ್ಲ ಎಂಬುದನ್ನು ಅಧಿಕಾರಕ್ಕೆ ಬಂದ ಬಳಿಕ ಸೇಡು ತೀರಿಸಿಕೊಳ್ಳೋದು ತಪ್ಪು. ಎಲ್ಲಾ ಪಕ್ಷದವರೂ ನೂರು ಕಾರ್ಯಕ್ರಮ ಮಾಡುತ್ತಾರೆ. ಅದಕ್ಕೆ ನಟರು ಹೊಗಬೇಕು ಎಂಬ ಕಾನೂನು ಇದೆಯಾ? ಸಾಧು ಕೋಕಿಲ ಅವರಿಗೆ ನಿಮ್ಮ ಪಕ್ಷದ ಬಗ್ಗೆ ಒಲವು ಇತ್ತು. ಅವರು ಬಂದರು. ನಿಮ್ಮ ಪಕ್ಷದ ಕಾರ್ಯಕ್ರಮಕ್ಕೆ ಬಂದಿಲ್ಲ ಎಂಬ ಕಾರಣಕ್ಕೆ ಚಿತ್ರರಂಗದವರು ಕನ್ನಡ ವಿರೋಧಿಗಳಾ’ ಎಂದು ಪ್ರಶ್ನೆ ಮಾಡಿದ್ದಾರೆ ಚಕ್ರವರ್ತಿ ಚಂದ್ರಚೂಡ್.

‘ಸಿನಿಮೋತ್ಸವಕ್ಕೆ ಸುದೀಪ್​, ಯಶ್​ಗೆ ಆಹ್ವಾನ ಕೊಟ್ಟಿದ್ದೀರಾ? ಇಲ್ಲಿ ಸಾಕಷ್ಟು ರಾಜಕೀಯ ನಡೆಯುತ್ತದೆ. ದುಡ್ಡು ಹೊಡೆಯೋ ಕಾರ್ಯಕ್ರಮ ಇದು. ಯಾರೇ ಅಧಿಕಾರದಲ್ಲಿ ಇದ್ದರೂ ಹಿಟ್ಲರ್ ಆಗೋಕೆ ಆಗಲ್ಲ. ಸಾಧು ಕೋಕಿಲ ಅವರು ರಾಜಕಾರಣಿನಾ ಅಥವಾ ಸಿನಿಮಾದವರಾ ಎಂಬುದು ಗೊತ್ತಾಗಿಲ್ಲ’ ಎಂದಿದ್ದಾರೆ ಚಕ್ರವರ್ತಿ ಚಂದ್ರಚೂಡ್.

‘ರಾಜಕಾರಣಿಗಳು ಹಿಟ್ಲರ್ ನೀತಿ ತೋರಬಾರದು. ಕನ್ನಡಾಭಿವೃದ್ಧಿ ಕಾರ್ಯಕ್ರಮ ಏನು ಮಾಡ್ತಿದೆ ಹೇಳಿ. ಚಿತ್ರರಂಗವನ್ನು ನಾಶ ಮಾಡೋಕೆ ಆಗಲ್ಲ. ಚಿತ್ರೋದ್ಯಮದವರಿಗೆ ಬಯ್ಯೋದು ಕೆಲಸ ಆಗಿದೆ. ಸಾಧು ಕೋಕಿಲ ಕೊಟ್ಟ ತಪ್ಪು ಮಾಹಿತಿಗೆ ಈ ರೀತಿ ಆಗಿರೋದು’ ಎಂದಿದ್ದಾರೆ ಚಕ್ರವರ್ತಿ ಚಂದ್ರಚೂಡ್.

ಇದನ್ನೂ ಓದಿ: ‘ಪಾರ್ಟಿ ಅನ್ನೋದು ವೈಯಕ್ತಿಕ’; ಕಿಚ್ಚ ಸುದೀಪ್ ಅವರ ಆಲೋಚೆನೆಯೇ ಬೇರೆ

‘ನೀವು ಇನ್ನೂ ಉಪಮುಖ್ಯಮಂತ್ರಿ. ನಿಮ್ಮ ಸಿಎಂ ಮಾಡಿದರೆ ರಾಜ್ಯಕ್ಕೆ ಕಷ್ಟ ಆಗುತ್ತದೆ. ಓರ್ವ ಹಿಟ್ಲರ್​ನ ತಂದು ಕೂರಿಸಬಾರದು. ಈ ವರ್ತನೆ ಬಿಟ್ಟರೆ ದೊಡ್ಡ ನಾಯಕರಾಗ್ತೀರಾ. ಪುಡಿ ರೌಡಿ ತರ ಮಾತನಾಡೋದು ಬಿಟ್ಟುಬಿಡಿ. ನಿಮ್ಮ ಸಾಧುಕೋಕಿಲ ತಪ್ಪು ಮಾಡಿದಾರೆ. ಅದನ್ನು ಮೊದಲು ಸರಿ ಮಾಡಿ’ ಎಂದು ಸವಾಲು ಹಾಕಿದ್ದಾರೆ ಚಕ್ರವರ್ತಿ ಚಂದ್ರಚೂಡ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?