AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಡಿರೌಡಿ ತರ ಆಡೋದು ಬಿಡಿ, ನೀವು ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಸುದೀಪ್ ಆಪ್ತನ ಕೌಂಟರ್

ಡಿಕೆ ಶಿವಕುಮಾರ್ ಅವರ ಕನ್ನಡ ಚಿತ್ರರಂಗದ ಕುರಿತಾದ ವಿವಾದಾತ್ಮಕ ಹೇಳಿಕೆಗಳಿಗೆ ಚಕ್ರವರ್ತಿ ಚಂದ್ರಚೂಡ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರವಿಕುಮಾರ್ ಗಣಿಗ ಅವರ ಟೀಕೆಗಳನ್ನು ಖಂಡಿಸಿ, ಸುದೀಪ್ ಅವರನ್ನು ಬೆಂಬಲಿಸಿದ್ದಾರೆ. ರಾಜಕಾರಣಿಗಳು ಚಿತ್ರರಂಗವನ್ನು ನಾಶಮಾಡಲು ಯತ್ನಿಸಬಾರದು ಎಂದು ಅವರು ಆಗ್ರಹಿಸಿದ್ದಾರೆ ಮತ್ತು ರಾಜಕೀಯ ನಾಯಕರು ಹಿಟ್ಲರ್ ನೀತಿಯನ್ನು ಅನುಸರಿಸಬಾರದು ಎಂದು ಹೇಳಿದ್ದಾರೆ.

‘ಪುಡಿರೌಡಿ ತರ ಆಡೋದು ಬಿಡಿ, ನೀವು ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಸುದೀಪ್ ಆಪ್ತನ ಕೌಂಟರ್
ಸುದೀಪ್-ಡಿಕೆಶಿ
ರಾಜೇಶ್ ದುಗ್ಗುಮನೆ
|

Updated on: Mar 04, 2025 | 1:01 PM

Share

ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿದ ಹೇಳಿಕೆ ಸಂಚಲನ ಸೃಷ್ಟಿಸಿದೆ. ಕಲಾವಿದರ ನಟ್ಟು ಬೋಲ್ಟ್ ಎಲ್ಲಿ ಟೈಟ್ ಮಾಡೋದು ಅಂತ ನಂಗೆ ಗೊತ್ತು ಎಂದು ಶಿವಕುಮಾರ್ ಹೇಳಿದ್ದರು. ಈ ಹೇಳಿಕೆ ಬೆಂಬಲಿಸಿ ಮಾತನಾಡಿದ್ದ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ, ಸಿಸಿಎಲ್ ಆಡಿ ಸಿನಿಮೋತ್ಸವಕ್ಕೆ ಬರದವರ ಬಗ್ಗೆಯೂ ಪರೋಕ್ಷವಾಗಿ ಟೀಕೆ ಮಾಡಿದ್ದರು. ಈ ಎಲ್ಲಾ ವಿಚಾರಗಳ ಬಗ್ಗೆ ಸುದೀಪ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರೋ ಚಕ್ರವರ್ತಿ ಚಂದ್ರಚೂಡ್ ಮಾತನಾಡಿದ್ದಾರೆ.

‘ಚಲನಚಿತ್ರ vs ಸರ್ಕಾರ ವಿಷಯ ಚರ್ಚೆ ಆಗುತ್ತಿದೆ. ಎಲ್ಲರೂ ಚಿತ್ರರಂಗದವರನ್ನು ಬಯ್ಯುತ್ತಿದ್ದಾರೆ. ರವಿ ಗಣಿಗ ಚಿತ್ರರಂಗದ ಕಲಾವಿದರ ಬಗ್ಗೆ, ಚೇಂಬರ್ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ರವಿಕುಮಾರ್ ನೇರವಾಗಿ ಹೆಸರು ತೆಗೆದುಕೊಂಡು ಮಾತನಾಡಬೇಕಿತ್ತು. ಆಗ ಅವರ ಮಾತಿಗೆ ತೂಕ ಬರುತ್ತಿತ್ತು. ಈ ಹೀರೋಗಳನ್ನು ಬ್ಯಾನ್ ಮಾಡಬೇಕು ಎಂದು ಅವರು ಹೇಳಿದ್ದಾರೆ. ಶಾಸಕರಾಗಿ ಈ ಹೇಳಿಕೆ ನೀಡಬಾರದು. ಹಿಟ್ಲರ್ ರೀತಿ ಆಡಬಾರದು’ ಎಂದಿದ್ದಾರೆ ಚಕ್ರವರ್ತಿ ಚಂದ್ರಚೂಡ್. ಅಲ್ಲದೆ, ರವಿಕುಮಾರ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

‘ಕಿಚ್ಚ ಸುದೀಪ್ ಬಗ್ಗೆ ಮಾತನಾಡಿದ್ದೀರಿ. 2004ರಿಂದ ಈವರೆಗೆ ಅವರು ಅವಾರ್ಡ್ ತೆಗೆದುಕೊಂಡಿಲ್ಲ. ಪ್ರಶಸ್ತಿಯನ್ನು ನಯವಾಗಿ ನಿರಾಕರಿಸಿದ್ದರು. ಈ ಮೊದಲು ಅವಾರ್ಡ್​ಗೆ ಕೊಡುತ್ತೇವೆ ಎಂದು ಕೊಟ್ಟಿಲ್ಲ. ರಾಜ್ಯ ಪ್ರಶಸ್ತಿ ಎಂದರೆ ಅಸಹ್ಯವಾಗಿ ಹೋಗಿದೆ. ಅವಾರ್ಡ್ ನಿರಾಕರಿಸೋದಕ್ಕೆ ಅವರದ್ದೇ ಆದ ಕಾರಣ ಇರುತ್ತದೆ’ ಎಂದು ಸುದೀಪ್ ಪರ ಬ್ಯಾಟ್ ಬೀಸಿದ್ದಾರೆ.

ಇದನ್ನೂ ಓದಿ
Image
ಡಿಕೆಶಿ ಬೆನ್ನಲ್ಲೇ ರಶ್ಮಿಕಾ ಹಾಗೂ ಸಿಸಿಎಲ್ ಆಟಗಾರರ ವಿರುದ್ಧ ಶಾಸಕ ಗರಂ
Image
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
Image
‘ಪಾರ್ಟಿ ಅನ್ನೋದು ವೈಯಕ್ತಿಕ’; ಕಿಚ್ಚ ಸುದೀಪ್ ಅವರ ಆಲೋಚೆನೆಯೇ ಬೇರೆ
Image
ಏಕಕಾಲಕ್ಕೆ ಟಿವಿ, ಒಟಿಟಿಗೆ ಮ್ಯಾಕ್ಸ್ ಎಂಟ್ರಿ; ದಿನಾಂಕ, ಸಮಯದ ಮಾಹಿತಿ..

‘ಪಕ್ಷದ ಕಾರ್ಯಕ್ರಮಕ್ಕೆ ಚಿತ್ರರಂಗದವರು ಬಂದಿಲ್ಲ ಎಂಬುದನ್ನು ಅಧಿಕಾರಕ್ಕೆ ಬಂದ ಬಳಿಕ ಸೇಡು ತೀರಿಸಿಕೊಳ್ಳೋದು ತಪ್ಪು. ಎಲ್ಲಾ ಪಕ್ಷದವರೂ ನೂರು ಕಾರ್ಯಕ್ರಮ ಮಾಡುತ್ತಾರೆ. ಅದಕ್ಕೆ ನಟರು ಹೊಗಬೇಕು ಎಂಬ ಕಾನೂನು ಇದೆಯಾ? ಸಾಧು ಕೋಕಿಲ ಅವರಿಗೆ ನಿಮ್ಮ ಪಕ್ಷದ ಬಗ್ಗೆ ಒಲವು ಇತ್ತು. ಅವರು ಬಂದರು. ನಿಮ್ಮ ಪಕ್ಷದ ಕಾರ್ಯಕ್ರಮಕ್ಕೆ ಬಂದಿಲ್ಲ ಎಂಬ ಕಾರಣಕ್ಕೆ ಚಿತ್ರರಂಗದವರು ಕನ್ನಡ ವಿರೋಧಿಗಳಾ’ ಎಂದು ಪ್ರಶ್ನೆ ಮಾಡಿದ್ದಾರೆ ಚಕ್ರವರ್ತಿ ಚಂದ್ರಚೂಡ್.

‘ಸಿನಿಮೋತ್ಸವಕ್ಕೆ ಸುದೀಪ್​, ಯಶ್​ಗೆ ಆಹ್ವಾನ ಕೊಟ್ಟಿದ್ದೀರಾ? ಇಲ್ಲಿ ಸಾಕಷ್ಟು ರಾಜಕೀಯ ನಡೆಯುತ್ತದೆ. ದುಡ್ಡು ಹೊಡೆಯೋ ಕಾರ್ಯಕ್ರಮ ಇದು. ಯಾರೇ ಅಧಿಕಾರದಲ್ಲಿ ಇದ್ದರೂ ಹಿಟ್ಲರ್ ಆಗೋಕೆ ಆಗಲ್ಲ. ಸಾಧು ಕೋಕಿಲ ಅವರು ರಾಜಕಾರಣಿನಾ ಅಥವಾ ಸಿನಿಮಾದವರಾ ಎಂಬುದು ಗೊತ್ತಾಗಿಲ್ಲ’ ಎಂದಿದ್ದಾರೆ ಚಕ್ರವರ್ತಿ ಚಂದ್ರಚೂಡ್.

‘ರಾಜಕಾರಣಿಗಳು ಹಿಟ್ಲರ್ ನೀತಿ ತೋರಬಾರದು. ಕನ್ನಡಾಭಿವೃದ್ಧಿ ಕಾರ್ಯಕ್ರಮ ಏನು ಮಾಡ್ತಿದೆ ಹೇಳಿ. ಚಿತ್ರರಂಗವನ್ನು ನಾಶ ಮಾಡೋಕೆ ಆಗಲ್ಲ. ಚಿತ್ರೋದ್ಯಮದವರಿಗೆ ಬಯ್ಯೋದು ಕೆಲಸ ಆಗಿದೆ. ಸಾಧು ಕೋಕಿಲ ಕೊಟ್ಟ ತಪ್ಪು ಮಾಹಿತಿಗೆ ಈ ರೀತಿ ಆಗಿರೋದು’ ಎಂದಿದ್ದಾರೆ ಚಕ್ರವರ್ತಿ ಚಂದ್ರಚೂಡ್.

ಇದನ್ನೂ ಓದಿ: ‘ಪಾರ್ಟಿ ಅನ್ನೋದು ವೈಯಕ್ತಿಕ’; ಕಿಚ್ಚ ಸುದೀಪ್ ಅವರ ಆಲೋಚೆನೆಯೇ ಬೇರೆ

‘ನೀವು ಇನ್ನೂ ಉಪಮುಖ್ಯಮಂತ್ರಿ. ನಿಮ್ಮ ಸಿಎಂ ಮಾಡಿದರೆ ರಾಜ್ಯಕ್ಕೆ ಕಷ್ಟ ಆಗುತ್ತದೆ. ಓರ್ವ ಹಿಟ್ಲರ್​ನ ತಂದು ಕೂರಿಸಬಾರದು. ಈ ವರ್ತನೆ ಬಿಟ್ಟರೆ ದೊಡ್ಡ ನಾಯಕರಾಗ್ತೀರಾ. ಪುಡಿ ರೌಡಿ ತರ ಮಾತನಾಡೋದು ಬಿಟ್ಟುಬಿಡಿ. ನಿಮ್ಮ ಸಾಧುಕೋಕಿಲ ತಪ್ಪು ಮಾಡಿದಾರೆ. ಅದನ್ನು ಮೊದಲು ಸರಿ ಮಾಡಿ’ ಎಂದು ಸವಾಲು ಹಾಕಿದ್ದಾರೆ ಚಕ್ರವರ್ತಿ ಚಂದ್ರಚೂಡ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ