AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಡಿರೌಡಿ ತರ ಆಡೋದು ಬಿಡಿ, ನೀವು ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಸುದೀಪ್ ಆಪ್ತನ ಕೌಂಟರ್

ಡಿಕೆ ಶಿವಕುಮಾರ್ ಅವರ ಕನ್ನಡ ಚಿತ್ರರಂಗದ ಕುರಿತಾದ ವಿವಾದಾತ್ಮಕ ಹೇಳಿಕೆಗಳಿಗೆ ಚಕ್ರವರ್ತಿ ಚಂದ್ರಚೂಡ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರವಿಕುಮಾರ್ ಗಣಿಗ ಅವರ ಟೀಕೆಗಳನ್ನು ಖಂಡಿಸಿ, ಸುದೀಪ್ ಅವರನ್ನು ಬೆಂಬಲಿಸಿದ್ದಾರೆ. ರಾಜಕಾರಣಿಗಳು ಚಿತ್ರರಂಗವನ್ನು ನಾಶಮಾಡಲು ಯತ್ನಿಸಬಾರದು ಎಂದು ಅವರು ಆಗ್ರಹಿಸಿದ್ದಾರೆ ಮತ್ತು ರಾಜಕೀಯ ನಾಯಕರು ಹಿಟ್ಲರ್ ನೀತಿಯನ್ನು ಅನುಸರಿಸಬಾರದು ಎಂದು ಹೇಳಿದ್ದಾರೆ.

‘ಪುಡಿರೌಡಿ ತರ ಆಡೋದು ಬಿಡಿ, ನೀವು ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಸುದೀಪ್ ಆಪ್ತನ ಕೌಂಟರ್
ಸುದೀಪ್-ಡಿಕೆಶಿ
ರಾಜೇಶ್ ದುಗ್ಗುಮನೆ
|

Updated on: Mar 04, 2025 | 1:01 PM

Share

ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿದ ಹೇಳಿಕೆ ಸಂಚಲನ ಸೃಷ್ಟಿಸಿದೆ. ಕಲಾವಿದರ ನಟ್ಟು ಬೋಲ್ಟ್ ಎಲ್ಲಿ ಟೈಟ್ ಮಾಡೋದು ಅಂತ ನಂಗೆ ಗೊತ್ತು ಎಂದು ಶಿವಕುಮಾರ್ ಹೇಳಿದ್ದರು. ಈ ಹೇಳಿಕೆ ಬೆಂಬಲಿಸಿ ಮಾತನಾಡಿದ್ದ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ, ಸಿಸಿಎಲ್ ಆಡಿ ಸಿನಿಮೋತ್ಸವಕ್ಕೆ ಬರದವರ ಬಗ್ಗೆಯೂ ಪರೋಕ್ಷವಾಗಿ ಟೀಕೆ ಮಾಡಿದ್ದರು. ಈ ಎಲ್ಲಾ ವಿಚಾರಗಳ ಬಗ್ಗೆ ಸುದೀಪ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರೋ ಚಕ್ರವರ್ತಿ ಚಂದ್ರಚೂಡ್ ಮಾತನಾಡಿದ್ದಾರೆ.

‘ಚಲನಚಿತ್ರ vs ಸರ್ಕಾರ ವಿಷಯ ಚರ್ಚೆ ಆಗುತ್ತಿದೆ. ಎಲ್ಲರೂ ಚಿತ್ರರಂಗದವರನ್ನು ಬಯ್ಯುತ್ತಿದ್ದಾರೆ. ರವಿ ಗಣಿಗ ಚಿತ್ರರಂಗದ ಕಲಾವಿದರ ಬಗ್ಗೆ, ಚೇಂಬರ್ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ರವಿಕುಮಾರ್ ನೇರವಾಗಿ ಹೆಸರು ತೆಗೆದುಕೊಂಡು ಮಾತನಾಡಬೇಕಿತ್ತು. ಆಗ ಅವರ ಮಾತಿಗೆ ತೂಕ ಬರುತ್ತಿತ್ತು. ಈ ಹೀರೋಗಳನ್ನು ಬ್ಯಾನ್ ಮಾಡಬೇಕು ಎಂದು ಅವರು ಹೇಳಿದ್ದಾರೆ. ಶಾಸಕರಾಗಿ ಈ ಹೇಳಿಕೆ ನೀಡಬಾರದು. ಹಿಟ್ಲರ್ ರೀತಿ ಆಡಬಾರದು’ ಎಂದಿದ್ದಾರೆ ಚಕ್ರವರ್ತಿ ಚಂದ್ರಚೂಡ್. ಅಲ್ಲದೆ, ರವಿಕುಮಾರ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

‘ಕಿಚ್ಚ ಸುದೀಪ್ ಬಗ್ಗೆ ಮಾತನಾಡಿದ್ದೀರಿ. 2004ರಿಂದ ಈವರೆಗೆ ಅವರು ಅವಾರ್ಡ್ ತೆಗೆದುಕೊಂಡಿಲ್ಲ. ಪ್ರಶಸ್ತಿಯನ್ನು ನಯವಾಗಿ ನಿರಾಕರಿಸಿದ್ದರು. ಈ ಮೊದಲು ಅವಾರ್ಡ್​ಗೆ ಕೊಡುತ್ತೇವೆ ಎಂದು ಕೊಟ್ಟಿಲ್ಲ. ರಾಜ್ಯ ಪ್ರಶಸ್ತಿ ಎಂದರೆ ಅಸಹ್ಯವಾಗಿ ಹೋಗಿದೆ. ಅವಾರ್ಡ್ ನಿರಾಕರಿಸೋದಕ್ಕೆ ಅವರದ್ದೇ ಆದ ಕಾರಣ ಇರುತ್ತದೆ’ ಎಂದು ಸುದೀಪ್ ಪರ ಬ್ಯಾಟ್ ಬೀಸಿದ್ದಾರೆ.

ಇದನ್ನೂ ಓದಿ
Image
ಡಿಕೆಶಿ ಬೆನ್ನಲ್ಲೇ ರಶ್ಮಿಕಾ ಹಾಗೂ ಸಿಸಿಎಲ್ ಆಟಗಾರರ ವಿರುದ್ಧ ಶಾಸಕ ಗರಂ
Image
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
Image
‘ಪಾರ್ಟಿ ಅನ್ನೋದು ವೈಯಕ್ತಿಕ’; ಕಿಚ್ಚ ಸುದೀಪ್ ಅವರ ಆಲೋಚೆನೆಯೇ ಬೇರೆ
Image
ಏಕಕಾಲಕ್ಕೆ ಟಿವಿ, ಒಟಿಟಿಗೆ ಮ್ಯಾಕ್ಸ್ ಎಂಟ್ರಿ; ದಿನಾಂಕ, ಸಮಯದ ಮಾಹಿತಿ..

‘ಪಕ್ಷದ ಕಾರ್ಯಕ್ರಮಕ್ಕೆ ಚಿತ್ರರಂಗದವರು ಬಂದಿಲ್ಲ ಎಂಬುದನ್ನು ಅಧಿಕಾರಕ್ಕೆ ಬಂದ ಬಳಿಕ ಸೇಡು ತೀರಿಸಿಕೊಳ್ಳೋದು ತಪ್ಪು. ಎಲ್ಲಾ ಪಕ್ಷದವರೂ ನೂರು ಕಾರ್ಯಕ್ರಮ ಮಾಡುತ್ತಾರೆ. ಅದಕ್ಕೆ ನಟರು ಹೊಗಬೇಕು ಎಂಬ ಕಾನೂನು ಇದೆಯಾ? ಸಾಧು ಕೋಕಿಲ ಅವರಿಗೆ ನಿಮ್ಮ ಪಕ್ಷದ ಬಗ್ಗೆ ಒಲವು ಇತ್ತು. ಅವರು ಬಂದರು. ನಿಮ್ಮ ಪಕ್ಷದ ಕಾರ್ಯಕ್ರಮಕ್ಕೆ ಬಂದಿಲ್ಲ ಎಂಬ ಕಾರಣಕ್ಕೆ ಚಿತ್ರರಂಗದವರು ಕನ್ನಡ ವಿರೋಧಿಗಳಾ’ ಎಂದು ಪ್ರಶ್ನೆ ಮಾಡಿದ್ದಾರೆ ಚಕ್ರವರ್ತಿ ಚಂದ್ರಚೂಡ್.

‘ಸಿನಿಮೋತ್ಸವಕ್ಕೆ ಸುದೀಪ್​, ಯಶ್​ಗೆ ಆಹ್ವಾನ ಕೊಟ್ಟಿದ್ದೀರಾ? ಇಲ್ಲಿ ಸಾಕಷ್ಟು ರಾಜಕೀಯ ನಡೆಯುತ್ತದೆ. ದುಡ್ಡು ಹೊಡೆಯೋ ಕಾರ್ಯಕ್ರಮ ಇದು. ಯಾರೇ ಅಧಿಕಾರದಲ್ಲಿ ಇದ್ದರೂ ಹಿಟ್ಲರ್ ಆಗೋಕೆ ಆಗಲ್ಲ. ಸಾಧು ಕೋಕಿಲ ಅವರು ರಾಜಕಾರಣಿನಾ ಅಥವಾ ಸಿನಿಮಾದವರಾ ಎಂಬುದು ಗೊತ್ತಾಗಿಲ್ಲ’ ಎಂದಿದ್ದಾರೆ ಚಕ್ರವರ್ತಿ ಚಂದ್ರಚೂಡ್.

‘ರಾಜಕಾರಣಿಗಳು ಹಿಟ್ಲರ್ ನೀತಿ ತೋರಬಾರದು. ಕನ್ನಡಾಭಿವೃದ್ಧಿ ಕಾರ್ಯಕ್ರಮ ಏನು ಮಾಡ್ತಿದೆ ಹೇಳಿ. ಚಿತ್ರರಂಗವನ್ನು ನಾಶ ಮಾಡೋಕೆ ಆಗಲ್ಲ. ಚಿತ್ರೋದ್ಯಮದವರಿಗೆ ಬಯ್ಯೋದು ಕೆಲಸ ಆಗಿದೆ. ಸಾಧು ಕೋಕಿಲ ಕೊಟ್ಟ ತಪ್ಪು ಮಾಹಿತಿಗೆ ಈ ರೀತಿ ಆಗಿರೋದು’ ಎಂದಿದ್ದಾರೆ ಚಕ್ರವರ್ತಿ ಚಂದ್ರಚೂಡ್.

ಇದನ್ನೂ ಓದಿ: ‘ಪಾರ್ಟಿ ಅನ್ನೋದು ವೈಯಕ್ತಿಕ’; ಕಿಚ್ಚ ಸುದೀಪ್ ಅವರ ಆಲೋಚೆನೆಯೇ ಬೇರೆ

‘ನೀವು ಇನ್ನೂ ಉಪಮುಖ್ಯಮಂತ್ರಿ. ನಿಮ್ಮ ಸಿಎಂ ಮಾಡಿದರೆ ರಾಜ್ಯಕ್ಕೆ ಕಷ್ಟ ಆಗುತ್ತದೆ. ಓರ್ವ ಹಿಟ್ಲರ್​ನ ತಂದು ಕೂರಿಸಬಾರದು. ಈ ವರ್ತನೆ ಬಿಟ್ಟರೆ ದೊಡ್ಡ ನಾಯಕರಾಗ್ತೀರಾ. ಪುಡಿ ರೌಡಿ ತರ ಮಾತನಾಡೋದು ಬಿಟ್ಟುಬಿಡಿ. ನಿಮ್ಮ ಸಾಧುಕೋಕಿಲ ತಪ್ಪು ಮಾಡಿದಾರೆ. ಅದನ್ನು ಮೊದಲು ಸರಿ ಮಾಡಿ’ ಎಂದು ಸವಾಲು ಹಾಕಿದ್ದಾರೆ ಚಕ್ರವರ್ತಿ ಚಂದ್ರಚೂಡ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು