AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಮಗಳು ಸಾನ್ವಿ ಬಗ್ಗೆ ಯಾಕಿಷ್ಟು ಟ್ರೋಲ್? ಅವರು ಮಾಡಿದ ತಪ್ಪೇನು?

ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಅವರು ಸರಿಗಮಪ ಕಾರ್ಯಕ್ರಮದಲ್ಲಿ ಇಂಗ್ಲಿಷ್‌ನಲ್ಲಿ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ ಆಗಿದ್ದಾರೆ. ಸುದೀಪ್ ಅವರು ಕನ್ನಡ ಭಾಷೆಗೆ ಬಹಳ ಮಹತ್ವ ನೀಡುತ್ತಾರೆ. ಈಗ ಅವರ ಮಗಳ ಇಂಗ್ಲಿಷ್ ಮಾತು ಅನೇಕರನ್ನು ಬೇಸರಗೊಳಿಸಿದೆ. ಕೆಲವರು ಸಾನ್ವಿಯನ್ನು ಸಮರ್ಥಿಸಿಕೊಂಡಿದ್ದಾರೆ, ಇನ್ನೂ ಕೆಲವರು ಈ ವಿಚಾರ ಚರ್ಚೆ ಮಾಡಿದ್ದಾರೆ.

ಸುದೀಪ್ ಮಗಳು ಸಾನ್ವಿ ಬಗ್ಗೆ ಯಾಕಿಷ್ಟು ಟ್ರೋಲ್? ಅವರು ಮಾಡಿದ ತಪ್ಪೇನು?
ಸಾನ್ವಿ
ರಾಜೇಶ್ ದುಗ್ಗುಮನೆ
|

Updated on:Jan 06, 2025 | 11:54 AM

Share

ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಸಾಕಷ್ಟು ಟ್ರೋಲ್ ಆಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆಯೇ ಚರ್ಚೆಗಳು ನಡೆಯುತ್ತಿವೆ. ಹಾಗಾದರೆ, ಏಕಾಏಕಿ ಸುದೀಪ್ ಮಗಳ ಮೇಲೆ ನೆಟ್ಟಿಗರು ಕೋಪಗೊಂಡಿದ್ದು ಏಕೆ? ಅವರು ಮಾಡಿದ ತಪ್ಪೇನು? ಆ ಎಲ್ಲಾ ಪ್ರಶ್ನೆಗಳಿಗೆ ಈ ಸ್ಟೋರಿಯಲ್ಲಿ ಉತ್ತರ ಸಿಗಲಿದೆ. ಸುದೀಪ್ ಅವರು ಈ ವಿಚಾರವಾಗಿ ಏನಾದರೂ ಸ್ಪಷ್ಟನೆ ನೀಡುತ್ತಾರಾ ಎನ್ನುವ ಕುತೂಹಲವೂ ಇದೆ.

ಘಟನೆ ಏನು?

ಇತ್ತೀಚೆಗೆ ಜೀ ಕನ್ನಡದ ‘ಸರಿಗಮಪ’ ವೇದಿಕೆ ಮೇಲೆ ಕಿಚ್ಚ ಸುದೀಪ್, ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಆಗಮಿಸಿದ್ದರು. ಈ ವೇಳೆ ಸಾನ್ವಿ ಅವರು ತಂದೆಗಾಗಿ, ‘ಜಸ್ಟ್ ಮಾತ್ ಮಾತಲ್ಲಿ..’ ಹಾಡನ್ನು ಸುಮಧುರವಾಗಿ ಹಾಡಿದರು. ಈ ಹಾಡಿನ ಬಳಿಕ ಅವರು ಸಂಪೂರ್ಣವಾಗಿ ಮಾತನಾಡಿದ್ದು ಇಂಗ್ಲಿಷ್​​ನಲ್ಲಿ. ‘ಪ್ರತಿವರ್ಷ’ ಎಂಬ ಶಬ್ದ ಬಿಟ್ಟು ಅವರು ಮತ್ತೆಲ್ಲಿಯೂ ಕನ್ನಡ ಶಬ್ದ ಮಾತನಾಡಿಲ್ಲ. ಇದು ಟ್ರೋಲ್​ಗೆ ಕಾರಣವಾದ ವಿಚಾರ.

ಸುದೀಪ್ ಕನ್ನಡ ಪ್ರೀತಿ

ಕಿಚ್ಚ ಸುದೀಪ್ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಬಿಗ್ ಬಾಸ್​ನಲ್ಲಿ ಕನ್ನಡಕ್ಕೆ ಗೌರವ ನೀಡದ ಸಂದರ್ಭದಲ್ಲಿ ಅವರು ಇದನ್ನು ಪ್ರಶ್ನೆ ಮಾಡಿದ್ದರು ಎನ್ನಲಾಗಿದೆ. ಸ್ಪರ್ಧಿಗಳು ಇಂಗ್ಲಿಷ್ ಮಾತನಾಡಿದಾಗ ಅದನ್ನು ಪ್ರಶ್ನೆ ಮಾಡಬೇಕು ಮತ್ತು ಕನ್ನಡ ಬಳಕೆ ಹೆಚ್ಚುವಂತೆ ಆಗಬೇಕು ಎಂದು ಸುದೀಪ್ ಅವರು ಬಿಗ್ ಬಾಸ್ ಆಯೋಜಕರ ಬಳಿ ಒತ್ತಾಯಿಸಿದ್ದರು ಎನ್ನಲಾಗಿದೆ. ಪರಭಾಷಾ ಸಂದರ್ಶನಗಳಲ್ಲಿ ಯಾರಾದರೂ ‘ಕನ್ನಡ್’ ಎಂದರೆ ‘ಅದು ಕನ್ನಡ್ ಅಲ್ಲ ಕನ್ನಡ’ ಎಂದು ತಿದ್ದುವ ಕೆಲಸ ಮಾಡಿದ್ದಾರೆ. ಆದರೆ, ಕನ್ನಡ ರಿಯಾಲಿಟಿ ಶೋನಲ್ಲಿ ಮಗಳಿಗೇಕೆ ಅವರು ಕನ್ನಡ ಮಾತನಾಡುವಂತೆ ಒತ್ತಾಯಿಸಿಲ್ಲ ಎಂದು ಅನೇಕರು ಪ್ರಶ್ನೆ ಮಾಡುತ್ತಾ ಇದ್ದಾರೆ.

ಇದನ್ನೂ ಓದಿ: ಸಮಾಜ ಸೇವೆಗೆ ಮತ್ತೊಂದು ಕೊಡುಗೆ; ‘ಕಿಚ್ಚ ಸುದೀಪ್ ಕೇರ್ ಫೌಂಡೇಶನ್’ ಆರಂಭ  

ಸಮರ್ಥನೆ

ಇನ್ನೂ ಕೆಲವು ಸಾನ್ವಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಸುದೀಪ್ ಮಗಳು ಸಾನ್ವಿ ಇಂಗ್ಲಿಷ್​ನಲ್ಲೇ ಮಾತನಡಿರಬಹುದು, ಆದರೆ, ಅವರು ಹಾಡಿದ್ದು ಕನ್ನಡದ ಹಾಡನ್ನೇ. ಈ ಕಾರಣಕ್ಕೆ ಸಂತೋಷ ವ್ಯಕ್ತಪಡಿಸಬೇಕು ಎಂದು ಕೆಲವರು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಜೋರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:53 am, Mon, 6 January 25

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು